ಜನ ಸಂಪರ್ಕ ಸಭೆ, ಸಾರ್ವಜನಿಕ ಭೇಟಿ ಕಡ್ಡಾಯಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ
Team Udayavani, Jul 19, 2022, 11:21 AM IST
ಕಲಬುರಗಿ: ಜನರ ಹಾಗೂ ಪೊಲೀಸರ ನಡುವೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ನಿಗದಿತವಾಗಿ ಠಾಣೆಗಳಲ್ಲಿ ಜನ ಸಂಪರ್ಕ ಸಭೆ ಹಾಗೂ ದಿನಾಲು ಸಂಜೆ ಐದರಿಂದ ಆರು ಗಂಟೆವರೆಗೆ ವಿಸಿಟರ್ಸ್ ಹವರ್ಸ್ ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ ವಿಭಾಗ) ಅಲೋಕ ಕುಮಾರ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎರಡು ದಿನಗಳ ಭೇಟಿಯಾಗಿ ನಗರಕ್ಕೆ ಆಗಮಿಸಿದ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಿಗದಿತ ಜನ ಸಂಪರ್ಕ ನಡೆದರೆ ಅಲ್ಲೇ ಹಲವು ಸಮಸ್ಯೆಗಳನ್ನು ಬಗೆಹರಿಸ ಬಹುದಾಗಿದೆಯಲ್ಲದೇ ಜನಸ್ನೇಹಿ ವಾತಾವರಣ ನಿರ್ಮಾಣವಾಗುತ್ತದೆ. ಅದಲ್ಲದೇ ವಿಸಿಟರ್ಸ್ ಹವರ್ಸ್ ಅಳವಡಿಸಿಕೊಂಡರೆ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬಹುದು ಎಂದು ವಿವರಣೆ ನೀಡಿದರಲ್ಲದೇ ಈ ಕುರಿತು ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಇದನ್ನೂ ಓದಿ:ಶಂಕರಘಟ್ಟದ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ ಎಂಬ ವಿಡಿಯೋ ವೈರಲ್: ಆದರೆ ಅಸಲಿ ಕಥೆಯೆ ಬೇರೆ!
ರೌಡಿ ಪಡೆ ನಿಗ್ರಹಕ್ಕೂ ಸೂಚನೆ ನೀಡಲಾಗಿದ್ದು, ಗೂಂಡಾ ಕಾಯ್ದೆ ಅಥವಾ ಸಾಧ್ಯವಾದರೆ ಕೋಕಾ ಕಾಯ್ದೆ ಜಾರಿ ತರುವಂತೆ ನಿರ್ದೇಶನ ನೀಡಲಾಗಿದೆ. ಪ್ರಮುಖವಾಗಿ ಈಗಾಗಲೇ ನೀಡಲಾಗಿರುವ ಆಯುಧ ಅನುಮತಿಯನ್ನು ಪರಾಮರ್ಶಿಸುವಂತೆ ಹಾಗೂ ಮುಂದೆ ನೀಡಲಾಗುವ ಆಯುಧ ಅನುಮತಿಯನ್ನು ಎಲ್ಲ ಪರಾಮರ್ಶಿಸುವಂತೆ ಸೂಚನೆ ನೀಡಲಾಗುವುದು ಎಂದರು.
ರೌಡಿ ಶೀಟರ್ ದಿಂದ ಹೆಸರು ತೆಗೆದು ಹಾಕಿರುವುದನ್ನು ಅವಲೋಕನ ನಡೆಸುವಂತೆ ಹಾಗೂ ಮತ್ತೆ ಅಕ್ರಮ ಚಟುವಟಿಕೆ ಕಂಡು ಬಂದರೆ ರೌಡಿ ಶೀಟರ್ ಓಪನ್ ಮಾಡುವಂತೆ ಸೂಚಿಸಲಾಗಿದೆ ಎಂದು ಅಲೋಕ ಕುಮಾರ ತಿಳಿಸಿದರು.
ಈಶಾನ್ಯ ವಲಯ ಐಜಿಪಿ ಮನೀಷ ಖರ್ಬಿಕರ್, ಕಲಬುರಗಿ ಮಹಾನಗರ ಪೊಲೀಸ್ ಆಯುಕ್ತ ಡಾ. ರವಿಕುಮಾರ, ಎಸ್ಪಿ ಇಶಾ ಪಂತ, ಬೀದರ್ ಎಸ್ಪಿ ಕಿಶೋರ ಬಾಬು, ಡಿಸಿಪಿ ಅಡ್ಡೂರು ಶ್ರೀ ನಿವಾಸ ಸೇರಿದಂತೆ ಮುಂತಾದವರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ