ಮೂರು ದಿನದಲ್ಲಿ ಗಣತಿದಾರರ ಪಟ್ಟಿ ಸಲ್ಲಿಸಲು ಸೂಚನೆ

ಗಣತಿದಾರರಿಗೆ ಸೂಕ್ತ ತರಬೇತಿ ನೀಡಲು ಸೂಚನೆ

Team Udayavani, Jul 2, 2019, 2:25 PM IST

gb-tdy-3..

ಕಲಬುರಗಿ: ಏಳನೇ ಆರ್ಥಿಕ ಗಣತಿ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಪರ ಜಿಲ್ಲಾಧಿಕಾರಿ ಬಿ.ಶರಣಪ್ಪ ಅವರ ನೇತೃತ್ವದಲ್ಲಿ ನಡೆಯಿತು.

ಕಲಬುರಗಿ: ಜಿಲ್ಲೆಯಲ್ಲಿ 7ನೇ ಆರ್ಥಿಕ ಗಣತಿ ಕಾರ್ಯಕ್ಕೆ ಶೀಘ್ರದಲ್ಲಿ ಚಾಲನೆ ನೀಡಬೇಕಾಗಿದ್ದು, 3 ದಿನದೊಳಗೆ ಗಣತಿದಾರರ ಪಟ್ಟಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಬಿ. ಶರಣಪ್ಪ ಇ-ಆಡಳಿತದ ಕಾಮನ್‌ ಸರ್ವಿಸ್‌ ಸೆಂಟರ್‌ ಜಿಲ್ಲಾ ವ್ಯವಸ್ಥಾಪಕ ಕಿರಣ ಅವರಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 7ನೇ ಆರ್ಥಿಕ ಗಣತಿ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಗಣತಿಗೆ ಬೇಕಾದ ಗಣತಿದಾರರು ಮತ್ತು ಮೇಲ್ವಿಚಾರಕರನ್ನು ಕೂಡಲೇ ನೇಮಿಸಿ ಅದರ ಪಟ್ಟಿಯನ್ನು ಜಿಲ್ಲಾ ಸಂಖ್ಯಾ ಸಂಗ್ರಹಾಣಾಧಿಕಾರಿಗಳಿಗೆ ಸಲ್ಲಿಸಬೇಕು. ತದನಂತರ ಗಣತಿದಾರರಿಗೆ ಸೂಕ್ತ ತರಬೇತಿ ನೀಡಿ ಗಣತಿಗೆ ಅಣಿ ಮಾಡಬೇಕು ಎಂದು ಸೂಚಿಸಿದರು.

ಸ್ವಂತ ಉಪಯೋಗಕಲ್ಲದ ಸರಕುಗಳ ಉತ್ಪಾದನೆ, ವಿತರಣೆ, ಮಾರಾಟ, ಸೇವೆ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿರುವ ಉದ್ಯಮ, ಘಟಕಗಳ ಸಂಪೂರ್ಣ ಚಿತ್ರಣ ಪಡೆಯುವುದೇ ಆರ್ಥಿಕ ಗಣತಿ ಮುಖ್ಯ ಉದೇಶವಾಗಿದೆ ಎಂದು ಹೇಳಿದರು.

ಗಣತಿಯಲ್ಲಿ ಬ್ಲಾಕ್‌ ವಾರು ಪ್ರತಿ ಮನೆ-ಮನೆಗೂ ಗಣತಿದಾರರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕಾಗುತ್ತದೆ. ಇಲ್ಲಿ ಸಂಗ್ರಹಿಸುವ ಮಾಹಿತಿ ದೇಶದ ಪ್ರಗತಿಗೆ, ರಾಷ್ಟ್ರೀಯ ತಲಾ ಅದಾಯ ಮತ್ತು ಜಿಡಿಪಿಯಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಆದ್ದರಿಂದ ನಿಖರ ಮಾಹಿತಿಯನ್ನು ನಿಗದಿತ ಅವಧಿಯೊಳಗೆ ಸಂಗ್ರಹಿಸಬೇಕು ಎಂದು ಸಿಎಸ್‌ಸಿ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

7ನೇ ಆರ್ಥಿಕ ಗಣತಿ ಇ-ಆಡಳಿತದ ಕಾಮನ್‌ ಸರ್ವಿಸ್‌ ಸೆಂಟರ್‌ನಿಂದ ಪ್ರಥಮ ಹಂತದ ಕ್ಷೇತ್ರ ಸಮೀಕ್ಷೆ ನಡೆಸಲಾಗುತ್ತದೆ. ಮಾಹಿತಿ ಸಂಗ್ರಹಣೆ ನಂತರ ಪುನರ್‌ಪರಿಶೀಲಿಸುವ ಎರಡನೇ ಹಂತದ ಜವಾಬ್ದಾರಿ ಅಂಕಿ-ಸಂಖ್ಯಾ ಇಲಾಖೆ ಮತ್ತು ಜಿಲ್ಲಾಡಳಿತದ ಜವಾಬ್ದಾರಿಯಾಗಿರುತ್ತದೆ. ಗಣತಿ ಕಾರ್ಯ ಸುಗಮವಾಗಿ ನಡೆಯಲು ಜಲ್ಲಾ ಸಮನ್ವಯ ಸಮಿತಿಯ ಎಲ್ಲ ಸದಸ್ಯರು ಸಿ.ಎಸ್‌.ಸಿ. ಸಂಸ್ಥೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಅಂಕಿ ಸಂಖ್ಯೆ ಸಂಗ್ರಹಣಾಧಿಕಾರಿ ಸುವರ್ಣಾ ಮಾತನಾಡಿ, ಇದುವರೆಗೆ ದೇಶದಲ್ಲಿ 6 ಆರ್ಥಿಕ ಗಣತಿ ಕಾರ್ಯ ನಡೆದಿದೆ. ಪ್ರಸ್ತುತ 7ನೇ ಆರ್ಥಿಕ ಗಣತಿಯಾಗಿದೆ. ಈ ಗಣತಿಯಲ್ಲಿ ಮೊಬೈಲ್ ಆಪ್‌ ಮೂಲಕವೇ ಮಾಹಿತಿ ಸಂಗ್ರಹ ಮಾಡುತ್ತಿರುವುದು ವಿಶೇಷವಾಗಿದೆ. 2012-13ನೇ ಸಾಲಿನಲ್ಲಿ ನಡೆಸಲಾದ 6ನೇ ಆರ್ಥಿಕ ಗಣತಿಯಲ್ಲಿ ಕನಿಷ್ಠ 1200 ಗಣತಿದಾರರು ಮತ್ತು 700 ಮೇಲ್ವಿಚಾರಕರನ್ನು ಗಣತಿಗೆ ಬಳಸಿಕೊಳ್ಳಲಾಗಿತ್ತು. ಅಷ್ಟು ಸಂಖ್ಯೆ ಸಿಬ್ಬಂದಿಯನ್ನು ಬಾರಿಯು ನೇಮಿಸುವ ಅಗತ್ಯವಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ನ್ಯಾಷನಲ್ ಸ್ಯಾಂಪಲ್ ಸರ್ವೇ ಆರ್ಗನೇಷನ್‌ (ಎನ್‌ಎಸ್‌ಎಸ್‌ಒ) ಜಿಲ್ಲಾ ಅಧಿಧೀಕ್ಷಕ ಮಹಾದೇವಪ್ಪ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ರಘೋಜಿ, ಜಿಪಂ ಡಿಆರ್‌ಡಿಎ ಯೋಜನಾ ನಿರ್ದೇಶಕಿ ಪ್ರವೀಣ ಪ್ರಿಯಾ, ಸಿಎಸ್‌ಸಿ ಜಿಲ್ಲಾ ವ್ಯವಸ್ಥಾಪಕ ಕಿರಣ, ಡಿಎಚ್ಒ ಡಾ| ಮಾಧವರಾವ ಕೆ. ಪಾಟೀಲ, ಡಿಡಿಪಿಐ ಶಾಂತಗೌಡ ಪಾಟೀಲ, ಡಿಡಿಪಿಯು ಶಿವಶರಣಪ್ಪ ಮೂಳೆಗಾಂವ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.