ಕಬ್ಬಿನ ಹಣ ಪಾವತಿಗೆ ಸೂಚನೆ


Team Udayavani, Feb 23, 2018, 10:59 AM IST

gul-5.jpg

ಕಲಬುರಗಿ: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿರುವ ರೈತರಿಗೆ ಹಣವನ್ನು ಕೂಡಲೇ ಪಾವತಿ ಮಾಡಬೇಕು. ಹಣ ಪಾವತಿ ತಡವಾದರೆ ರೈತರ ಸಮಸ್ಯೆಗಳು ಹೆಚ್ಚುತ್ತವೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಕ್ಕರೆ ಕಾರ್ಖಾನೆ ಅಧಿಕಾರಿಗಳು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಆದಷ್ಟು ಬೇಗ ಬಾಕಿ ಹಣ ಪಾವತಿಸಬೇಕು. ರೈತರಿಗೆ ಪಾವತಿಸಿದ ಹಣದ ವರದಿ ಪ್ರತಿದಿನ ಸಲ್ಲಿಸಬೇಕು ಎಂದು ಸೂಚಿಸಿದರು. ಉಗಾರ್‌ ಶುಗರ್ ಕಾರ್ಖಾನೆಯವರು 2725 ರೈತರಿಂದ 2.96 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಖರೀದಿಸಿದ್ದು, ಈವರೆಗೆ 22 ಕೋಟಿ ಹಣ ಪಾವತಿಸಿದ್ದಾರೆ. ಇನ್ನು 65 ಕೋಟಿ ಪಾವತಿಸಬೇಕಿದೆ. ರೇಣುಕಾ ಶುಗರ್ ಕಾರ್ಖಾನೆಯವರು 4251 ರೈತರಿಂದ 6.31 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಖರೀದಿ ಮಾಡಿ 41 ಕೋಟಿ ಪಾವತಿಸಿದ್ದಾರೆ. ಇನ್ನು 139 ಕೋಟಿ ಪಾವತಿಸಬೇಕು. ಎನ್‌ಎಸ್‌ಎಲ್‌ ಭೂಸನೂರ ಕಾರ್ಖಾನೆಯವರು 331 ರೈತರಿಂದ 2.26 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಖರೀದಿಸಿದ್ದಾರೆ. 49 ಕೋಟಿ ರೂ. ಪಾವತಿಸಬೇಕಿದೆ. ಕೋರ್‌ ಗ್ರೀನ್‌ ಸಕ್ಕರೆ ಕಾರ್ಖಾನೆಯವರು
1245 ರೈತರಿಂದ 4.35 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಖರೀದಿಸಿ 27 ಕೋಟಿ ರೂ.ಪಾವತಿಸಿದ್ದು, ಇನ್ನು 95 ಕೋಟಿ ಪಾವತಿಸಬೇಕಿದೆ. ಆದಷ್ಟು ಬೇಗ ಈ ಹಣವನ್ನು ವತಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ರೈತರು ಬೆಳೆದ ಕಬ್ಬು ನಿಗದಿತ ಅವಧಿಯಲ್ಲಿ ಕಟಾವು ಮಾಡುತ್ತಿಲ್ಲ ಎಂಬ ದೂರುಗಳಿದ್ದು, ಸಕ್ಕರೆ ಕಾರ್ಖಾನೆಯವರು 3 ದಿನಗಳಲ್ಲಿ ಕಬ್ಬು ಕಟಾವು ಮಾಡುವ ಟೋಲಿ ಹೆಚ್ಚಿಸಿ ಈಗಿರುವ ಹಾಗೂ ಹೆಚ್ಚಿಸಿರುವ ಟೋಳಿಗಳ ವರದಿ ನೀಡಬೇಕು. ಟೋಳಿ ಹೆಚ್ಚಿಸಿ ಹೆಚ್ಚಿನ ಪ್ರಮಾಣದ ಕಬ್ಬು ಕಟಾವಿಗೆ ಮುಂದಾಗಬೇಕು. 

ಕಬ್ಬು ಕಟಾವು ಮಾಡುವ ಟೋಳಿ ಜೊತೆಗೆ ರೈತರು ಸಹಾಯ ಮಾಡಿದರೆ ಅಥವಾ ರೈತರೇ ಟೋಳಿಗಳೊಂದಿಗೆ ಕಬ್ಬು ಕಟಾವು ಮಾಡಿದ್ದಲ್ಲಿ ಒಂದು ಟನ್‌ಗೆ 275 ರೂ. ನೀಡಲಾಗುವುದು. ರೈತರು ಇದರ ಲಾಭ ಪಡೆಯಬೇಕು. ಕಬ್ಬು ಬೆಳೆದ ರೈತರಿಗೆ ಸಿಹಿ ನೀಡಬೇಕು ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯಲ್ಲಿ ಸಹ ಹೆಚ್ಚು ಪ್ರಮಾಣದ ಕಬ್ಬು ಬೆಳೆಯುತ್ತಾರೆ. ಅಲ್ಲಿ ಸ್ವತಃ ರೈತರೇ ಕಟಾವು ಮಾಡಿ ಕಾರ್ಖಾನೆಗಳಿಗೆ ಸಾಗಿಸುತ್ತಾರೆ. ಆದರೆ ಈ ಭಾಗದಲ್ಲಿ ಕಬ್ಬು ಕಟಾವಿಗೆ ಮಹಾರಾಷ್ಟ್ರದ ಟೋಳಿಗಳನ್ನು ಅವಲಂಬಿಸಬೇಕಿದೆ. ರೈತರೇ ಸ್ವತಃ ಕಬ್ಬು ಕಟಾವು ಮಾಡಿಕೊಂಡಲ್ಲಿ ತುಂಬಾ ಅನುಕೂಲವಾಗಲಿದೆ ಎಂದು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಹೇಳಿದರು.

ಉಗಾರ್‌ ಶುಗರ್ನ ಕಬ್ಬು ಅಭಿವೃದ್ಧಿ ಅಧಿಕಾರಿ ಅನೀಲಕುಮಾರ ಪಾಟೀಲ, ಕೋರ್‌ ಗ್ರೀನ್‌ ಸಕ್ಕರೆ ಕಾರ್ಖಾನೆ ಮ್ಯಾನೇಜರ್‌ ಶಿವಾನಂದ ನಂದಗಿರಿ, ಎನ್‌ಎಸ್‌ಎಲ್‌ ಭೂಸನೂರ ಸಕ್ಕರೆ ಕಾರ್ಖಾನೆ ಉಪ ವ್ಯವಸ್ಥಾಪಕ ಪ್ರಭಾಕರ ರೆಡ್ಡಿ, ರೇಣುಕಾ ಸಕ್ಕರೆ
ಕಾರ್ಖಾನೆ ಉಪ ವ್ಯವಸ್ಥಾಪಕ ಅನೀಲಕುಮಾರ ಎಸ್‌. ವಾಲಿಕಾರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಅರುಣಕುಮಾರ ಸಂಗಾವಿ ಹಾಗೂ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.