ಹಿಂದುಳಿದ ತಾಲೂಕಿನ ಶಾಲೆ ವಿದ್ಯಾರ್ಥಿಗಳಿಗೆ ಪೌಷ್ಟಿಕ ಹಾಲು
Team Udayavani, Aug 3, 2018, 12:04 PM IST
ಚಿಂಚೋಳಿ: ಪಟ್ಟಣದ ಹತ್ತು ಶಾಲೆಗಳ ವಿದ್ಯಾರ್ಥಿಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ತಾಲೂಕಿನ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಕ್ಷೀರಭಾಗ್ಯದ ಹಾಲಿನ ಜತೆಗೆ ಪೌಷ್ಟಿಕಾಂಶವುಳ್ಳ ಹಾಲಿನ ಪುಡಿಯ ಪ್ಯಾಕೇಟ್ನ್ನು ಪ್ರಾಯೋಗಿಕವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ| ಡಿ. ಷಣ್ಮುಖ ತಿಳಿಸಿದ್ದಾರೆ.
ಚಂದಾಪುರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಹಾಲಿನ ಪಾಕೇಟ್ ವಿತರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿಯೇ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕು, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕುಗಳನ್ನು ಟ್ರಸ್ಟ್ ಆಯ್ಕೆ ಮಾಡಿಕೊಂಡಿದೆ ಎಂದು ತಿಳಿಸಿದರು. ಚಿಂಚೋಳಿ ಪಟ್ಟಣದ ಸರಕಾರಿ ಹಿರಿಯ ಶಾಲೆ ಉರ್ದು ಚಂದಾಪುರ, ಮೌಲಾನಾ ಆಜಾದ ವಸತಿ ಶಾಲೆ, ಆಶ್ರಯ ಕಾಲೋನಿಯ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗು ನಾಯಕ ತಾಂಡಾ, ಚಿಂಚೋಳಿಯ ಸರಕಾರಿ
ಕೇಂದ್ರ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಶಾಲೆ (ಕನ್ಯಾ), ಸರಕಾರಿ ಹಿರಿಯ ಉರ್ದು ಶಾಲೆ, ಹರಿಜನವಾಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಾಯೋಗಿಕವಾಗಿ ಹಾಲಿನ ಪ್ಯಾಕೇಟ್ ವಿತರಿಸಲಾಗುತ್ತಿದೆ ಎಂದು ವಿವರಿಸಿದರು.
ಚಿಂಚೋಳಿಯ ಕಸ್ತೂರಿಬಾ ಗಾಂಧಿ ಬಾಲಕಿ ವಸತಿ ಶಾಲೆ ಭೇಟಿ ನೀಡಿ, ಬಾದಾಮಿ ಹಾಲು ನೀಡದಂತೆ ಸೂಚಿಸಿದ್ದೇನೆ. ಕ್ಷೀರಭಾಗ್ಯ ಯೋಜನೆ ಅಡಿ ಹಾಲು ನೀಡಬೇಕೆಂದು ತಿಳಿಸಿದ್ದೇನೆ.
ಅಲ್ಲದೇ ಶಾಲೆ ಬಿಟ್ಟ ಮಕ್ಕಳ ಜೊತೆಗೆ ನಿರ್ಗತಿಕ ಮತ್ತು ಅನಾಥ ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡಿಕೊಳ್ಳಬೇಕು. ಬಡತನದಿಂದ ಕೂಡಿರುವ ಬಾಲಕಿಯರನ್ನು ಗುರುತಿಸಿ ಅಂತಹ ಮಕ್ಕಳಿಗೆ ಶಾಲೆಯಲ್ಲಿ ಸೇರಿಸಿಕೊಂಡು ವಿದ್ಯಾಭ್ಯಾಸ
ನೀಡಬೇಕೆಂದು ಅಲ್ಲಿನ ಮೇಲ್ವಿಚಾರಕಿಯರಿಗೆ ಆದೇಶಿಸಿದ್ದೇನೆ ಎಂದು ಹೇಳಿದರು.
ನಿರ್ದೇಶಕ ಗಜಾನನ ಮನ್ನಿಕೇರಿ, ಬಿಆರ್ಸಿ ರಾಚಪ್ಪ ಭದ್ರಶೆಟ್ಟಿ, ಮಧ್ಯಾಹ್ನ ಬಿಸಿಯೂಟಯೋಜನಾಧಿಕಾರಿ ಜಯಪ್ಪ ಚಾಪೆಲ್, ಸಿಆರ್ಸಿ ಮಹಮ್ಮದ ಮುಬೀನ್, ಮುಖ್ಯಶಿಕ್ಷಕ ರಘು ರಾಠೊಡ, ಪೌಷ್ಟಿಕಾಂಶ ಅಧಿಕಾರಿ ಶಿವಯೋಗಿ ಹಿರೇಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ