ಉತ್ತರ ಕರ್ನಾಟಕದ ಗಟ್ಟಿ ದನಿ ಮೌನ
ಕಥೆ, ಕಾದಂಬರಿಗಳಲ್ಲಿ ಕಲಬುರಗಿ ಕನ್ನಡಕ್ಕೆ ಖದರ್ ತಂದುಕೊಟ್ಟ ಮಹಿಳಾ ಸಾಹಿತಿ
Team Udayavani, Jun 30, 2020, 8:21 AM IST
ಕಲಬುರಗಿ: ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಖ್ಯಾತ ಕಾದಂಬರಿಗಾರ್ತಿ ಡಾ| ಗೀತಾ ನಾಗಭೂಷಣ ಅವರ ನಿಧನಕ್ಕೆ ಗಣ್ಯರು, ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರಿಂದ ಹಿಡಿದು ಹಲವರು ಶೋಕ ವ್ಯಕ್ತಪಡಿಸಿದ್ದಾರೆ.
ಹಿರಿಯ ಲೇಖಕಿ ನಾಡೋಜ ಗೀತಾ ನಾಗಭೂಷಣ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಾಮಾಜಿಕ ಕ್ಷೇತ್ರದಲ್ಲಿಯೂ ಕ್ರಿಯಾಶೀಲರಾಗಿದ್ದ ಅವರ ಅಗಲಿಕೆಯಿಂದ ಮಹಿಳಾ ಪರವಾದ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಗಟ್ಟಿ ದನಿಯೊಂದು ಮೌನವಾದಂತಾಗಿದೆ. ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ನಾಡೋಜ ಗೀತಾ ನಾಗಭೂಷಣ ಅವರ ನಿಧನದಿಂದ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಾಹಿತಿ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ, ನಾಡೋಜ ಪ್ರಶಸ್ತಿ, ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ಪಡೆದ ಮೊದಲ ಮಹಿಳೆ ಎನ್ನುವ ಗೌರವಕ್ಕೆ ಪಾತ್ರರಾಗಿದ್ದ ಡಾ| ಗೀತಾ ನಾಗಭೂಷಣ ಅಗಲಿಕೆ ಸಾಹಿತ್ಯಲೋಕಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಸಂಸದ ಡಾ| ಉಮೇಶ ಜಾಧವ ತಿಳಿಸಿದ್ದಾರೆ. ಗೀತಾ ನಾಗಭೂಷಣ ನಿಧನದಿಂದ ಸಾಹಿತ್ಯ ಕ್ಷೇತ್ರ ಅದರಲ್ಲೂ ಕಲಬುರಗಿಯ ಸಾಹಿತ್ಯ ವಲಯ ಒಬ್ಬರು ಉತ್ಕೃಷ್ಟ ಬರಹಗಾರ್ತಿಯನ್ನು ಕಳೆದುಕೊಂಡಂತಾಗಿದೆ. ಕಲಬುರಗಿಯ ಗಟ್ಟಿ ಭಾಷೆಯನ್ನೇ ತಮ್ಮ ಕಥೆ, ಕಾದಂಬರಿ ಹಾಗೂ ಬರಹಗಳಲ್ಲಿ ಬಳಸುವ ಮೂಲಕ ಕಲಬುರಗಿ ಕನ್ನಡಕ್ಕೆ ಖದರ್ ತಂದುಕೊಟ್ಟಿದ್ದರು ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ವಿಶಿಷ್ಟತೆಯನ್ನು ಗೀತಾ ನಾಗಭೂಷಣ ನೀಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ರಾಜ್ಯದ ಮೊದಲ ಮಹಿಳಾ ಸಾಹಿತಿ ಎಂಬುದು ಹೆಮ್ಮೆಯ ವಿಚಾರವಾಗಿದೆ. ಅಗಲಿದ ಮಹಾನ್ ಚೇತನಕ್ಕೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ತಿಳಿಸಿದ್ದಾರೆ.
ರಾಜ್ಯಸಭೆ ಮಾಜಿ ಸದಸ್ಯ ಕೆ.ಬಿ. ಶಾಣಪ್ಪ, ಶಾಸಕ ಡಾ| ಅಜಯ ಸಿಂಗ್, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಸಾಹಿತಿ ಡಾ| ಸ್ವಾಮಿರಾವ್ ಕುಲಕರ್ಣಿ, ಖಾತ್ಯ ಕಲಾವಿದ ವಿ.ಜಿ. ಅಂದಾನಿ, ಮೀನಾಕ್ಷಿ ಬಾಳಿ, ಕೆ.ನೀಲಾ, ಮಡಿವಾಳಪ್ಪ ನಾಗರಹಳ್ಳಿ, ವಿಜಯಕುಮಾರ ತೇಗಲತಿಪ್ಪಿ, ರಾಜಗೋಪಾಲರೆಡ್ಡಿ ಸೇರಿದಂತೆ ಅನೇಕ ಗಣ್ಯರು ಅಗಲಿದ ಸಾಹಿತಿಗೆ ಅಂತಿಮ ಗೌರವ ಸೂಚಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ