215 ಮಕ್ಕಳಿಗೆ ಒಂದೇ ಕೊಠಡಿ, ಒಬ್ಬರೇ ಶಿಕ್ಷಕ!


Team Udayavani, Aug 5, 2022, 2:31 PM IST

2school

ಕಲಬುರಗಿ: ಜಿಲ್ಲೆಯ ಅಫಜಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ 1ರಿಂದ 7ನೇ ತರಗತಿಯ ಒಟ್ಟು 215 ವಿದ್ಯಾರ್ಥಿಗಳಿಗೂ ಒಂದೇ ಕೊಠಡಿಯಲ್ಲಿ ಒಬ್ಬರೇ ಶಿಕ್ಷಕರು ಪಾಠ ಹೇಳುತ್ತಿದ್ದಾರೆ.

ಈಚೆಗೆ ಐವರು ಅತಿಥಿ ಶಿಕ್ಷಕರ ನೇಮಕ ವಾಗಿದ್ದರೂ ಮಕ್ಕಳಿಗೆ ಒಂದೇ ಕೊಠಡಿಯಲ್ಲಿ ಪಾಠ ಕೇಳುವುದು ತಪ್ಪಿಲ್ಲ. ಹೀಗಾದರೆ ನಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಹೇಗಾಗುತ್ತದೆ ಎಂದು ಸಾಗನೂರು ಮತ್ತು ಸುತ್ತಲಿನ ಗ್ರಾಮಗಳ ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.

ಮುಖ್ಯ ಶಿಕ್ಷಕರು ಬಿಟ್ಟರೆ ಯಾರಿಲ್ಲ

ಸಾಗನೂರು ಶಾಲೆಯಲ್ಲಿ 1ರಿಂದ 7ನೇ ತರಗತಿಯಲ್ಲಿ ಒಟ್ಟು 215 ಮಕ್ಕಳಿದ್ದಾರೆ. ಅಚ್ಚರಿ ಸಂಗತಿ ಎಂದರೆ ಎಲ್ಲ ವಿಷಯಗಳ ಕುರಿತು ಮುಖ್ಯಶಿಕ್ಷಕ ನದಾಫ್‌ ಒಬ್ಬರೇ ಪಾಠ ಮಾಡುತ್ತಿದ್ದಾರೆ. ಈಗ ಐವರು ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ.

ಇದ್ದ ಶಿಕ್ಷಕರೆಲ್ಲ ಬಿಟ್ಟು ಹೋದರು

ಶಾಲೆಯಲ್ಲಿ ಕಟ್ಟಡಗಳಿವೆ, ದೊಡ್ಡ ಮೈದಾನವಿದೆ. ಶಿಕ್ಷಕರು ಇದ್ದರು ಆದರೆ, ಒಬ್ಬರು ಬಡ್ತಿ ಹೊಂದಿ ವರ್ಗವಾಗಿ ಹೋದರು. ಇನ್ನೂ ಮೂವರು ಶಿಕ್ಷಕರು ವರ್ಗವಾದರು. ಒಬ್ಬರು ನಿವೃತ್ತಿ ಹೊಂದಿದರು. ಹೀಗಾಗಿ ಮುಖ್ಯಶಿಕ್ಷಕರು ಒಬ್ಬರೇ ಉಳಿದರು. ಇದರಿಂದಾಗಿ ಕಳೆದ ಮೂರು ತಿಂಗಳಿಂದ ಇದೇ ರೀಠಿಜಿ ಪಾಠ ನಡೆಯುತ್ತಿವೆ. ಈಗೀಗ ಐವರು ಅತಿಥಿ ಶಿಕ್ಷಕರನ್ನು ಶಿಕ್ಷಣ ಇಲಾಖೆಯಿಂದ ನೇಮಿಸಲಾಗಿದೆ. ಮೂರು ತಿಂಗಳಾದರೂ ಘಟಕ ಪರೀಕ್ಷೆಗಳು ನಡೆಯುವ ಲಕ್ಷಣಗಳಿಲ್ಲ ಎಂಬುದು ಸಾಗನೂರು ಗ್ರಾಮಸ್ಥರ ಅಳಲು.

ಕಳೆದ ಮೂರು ತಿಂಗಳಿಂದ ನಮ್ಮಲ್ಲಿ ಶಿಕ್ಷಕರು ಇಲ್ಲದೇ ಇರುವುದರಿಂದ ನಾವು ಎಲ್ಲ ಮಕ್ಕಳಿಗೆ ಪಾಠಗಳು ತಪ್ಪಬಾರದು ಎನ್ನುವ ಕಾರಣಕ್ಕೆ ಪಾಠ ಮಾಡುತ್ತಿದ್ದೇವೆ. ಈಗ ಐವರು ಅತಿಥಿ ಶಿಕ್ಷಕರನ್ನು ಬಂದಿದ್ದಾರೆ. ಎಲ್ಲ ತರಗತಿಯ ಮಕ್ಕಳನ್ನು ಆಯಾ ತರಗತಿ ಕೋಣೆಯಲ್ಲಿ ಕುಳ್ಳಿರಿಸಿ ಪಾಠ ಮಾಡಲಾಗುವುದು. ಶಿಕ್ಷಕರಿಲ್ಲ ಎನ್ನುವ ವಿಷಯವನ್ನು ಮೇಲಧಿಕಾರಿಗಳಿಗೆ ತಿಳಿಸಲಾಗಿದೆ. ನದಾಫ್‌, ಮುಖ್ಯಶಿಕ್ಷಕ

ಶಿಕ್ಷಕರ ಕೊರತೆ ಇದೆ. ಶೀಘ್ರವೇ ಹೊಸ ಶಿಕ್ಷಕರ ನೇಮಕವಾದಾಗ ಸಾಗನೂರಕ್ಕೂ ಒದಗಿಸಲಾಗುವುದು. ಮಕ್ಕಳ ಪಾಠ ಬೋಧನೆಗೆ ತೊಂದರೆ ಆಗದಂತೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶೀಘ್ರವೇ ಇನ್ನಷ್ಟು ಶಿಕ್ಷಕರನ್ನು ಒದಗಿಸಲಾಗುವುದು. ಮಾರುತಿ ಎಚ್‌., ಬಿಇಒ,

ಒಂದೇ ಕೊಠಡಿಯಲ್ಲಿ ಎಲ್ಲ ಮಕ್ಕಳನ್ನು ಕೂಡಿಸಿ ಪಾಠ ಮಾಡಿದರೆ ಅವರ ಗತಿ ಏನು? ಯಾವ ತರಗತಿ ಮಗು ಯಾವ ಪಾಠ ಕೇಳಬೇಕು. ಸರಕಾರದ ಇಂತಹ ನೀತಿಯಿಂದ ಪಾಲಕರು ತುಂಬಾ ಹೈರಾಣಾಗಿದ್ದಾರೆ. ಸರಕಾರಿ ಶಾಲೆಯಲ್ಲಿ ಮಕ್ಕಳೇ ಇಲ್ಲ ಎನ್ನುವಾಗ ಇದ್ದ ಮಕ್ಕಳಿಗೆ ಸರಿಯಾಗಿ ಶಿಕ್ಷಕರನ್ನು ಒದಗಿಸಲು ಸಾಧ್ಯವಾಗದೇ ಇರುವುದು ದುರದೃಷ್ಟಕರ. ಕೂಡಲೇ ಸರಿ ಮಾಡದೇ ಇದ್ದರೆ ಹೋರಾಟ ಮಾಡಲಾಗುವುದು. ಗಿರೀಶ ಚಕ್ರ, ಬಿಜೆಪಿ ಮುಖಂಡ

-ಸೂರ್ಯಕಾಂತ ಎಂ.ಜಮಾದಾರ

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.