ಕಲ್ಯಾಣದಲ್ಲಿ 35 ಮಕ್ಕಳಿಗೆ ಒಬ್ಬ ಶಿಕ್ಷಕ
Team Udayavani, Dec 28, 2021, 8:14 PM IST
ಕಲಬುರಗಿ: ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಮಟ್ಟ ಸುಧಾರಣೆ ಮತ್ತು ಈ ಭಾಗದಲ್ಲಿ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಮಕ್ಕಳ ಸಂಖ್ಯೆಗೆ ಅನುಗಣವಾಗಿ ಶಿಕ್ಷಕರನ್ನು ನೇಮಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ ಸರ್ಕಾರಕ್ಕೆ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗ ಶೈಕ್ಷಣಿಕವಾಗಿ ಹಿಂದುಳಿಯಲು ಶಿಕ್ಷಕ ಕೊರತೆಯೇ ಪ್ರಮುಖ ಕಾರಣವಾಗಿದೆ. ಸಾಕ್ಷರತಾ ಪ್ರಮಾಣದಲ್ಲೂ ಈ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಇವೆ. ಆದ್ದರಿಂದ ಮಕ್ಕಳು ಮತ್ತು ಶಿಕ್ಷಕರ ನಡುವಿನ ಅನುಪಾತವನ್ನು ಸರಿದೂಗಿಸುವುದು ಅವಶ್ಯವಾಗಿದೆ ಎಂದರು. ಬೆಂಗಳೂರು, ಮೈಸೂರು, ಮಂಗಳೂರು ಭಾಗದಲ್ಲಿ ಮಕ್ಕಳು ಮತ್ತು ಶಿಕ್ಷಕರ ನಡುವಿನ ಅನುಪಾತ ತೀರ ಕಡಿಮೆ ಇದೆ.
ಹೀಗಾಗಿ ಮಕ್ಕಳ ಮೇಲೆ ಶಿಕ್ಷಕರ ಗಮನ ಹರಿಸಿ ಕಲಿಕೆಯಲ್ಲಿ ತೊಡಗಿಸಲು ಸಾಧ್ಯವಾಗುತ್ತಿದೆ. ಆದರೆ, ನಮ್ಮ ಭಾಗದಲ್ಲಿ ಮಕ್ಕಳು ಮತ್ತು ಶಿಕ್ಷಕರ ನಡುವಿನ ಅನುಪಾತದಲ್ಲಿ ಸಾಕಷ್ಟು ಅಂತರ ಇದೆ. ಹೀಗಾಗಿ ಮಕ್ಕಳ ಕಲಿಕಾ ಮಟ್ಟದ ತುಂಬಾ ಕೆಳಮಟ್ಟದಲ್ಲಿ ಇದೆ ಎಂದರು. ಮಕ್ಕಳ-ಶಿಕ್ಷಕರ ಅನುಪಾತ (ಪಿಟಿಆರ್) ರಾಜ್ಯದ ಸರಾಸರಿ 24.43ರಷ್ಟು ಇದೆ. ಅಂದರೆ 24 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದಾರೆ. ಇದೇ ಹಾಸನ ಜಿಲ್ಲೆಯಲ್ಲಿ 12 ಮಕ್ಕಳು, ಚಿಕ್ಕಮಗಳೂರು ಜಿಲ್ಲೆಯಲ್ಲಿ 14 ಮಕ್ಕಳು, ತುಮಕೂರ ಜಿಲ್ಲೆಯಲ್ಲಿ 15 ಮಕ್ಕಳು, ಬೆಂಗಳೂರು ಗ್ರಾಮೀಣ ಮತ್ತು ರಾಮನಗರ ಜಿಲ್ಲೆಯಲ್ಲಿ ತಲಾ 16 ಹಾಗೂ ಮಂಡ್ಯ ಜಿಲ್ಲೆಯಲ್ಲಿ 17 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದಾರೆ.
ಇದು ಸದ್ಯ ಕಾರ್ಯನಿತರ ಶಿಕ್ಷಕರನ್ನು ಪರಿಗಣಿಸಿರುವ ಅನುಪಾತವಾಗಿದ್ದು, ಮಂಜೂರಾತಿ ಹುದ್ದೆಗಳ ಅನುಪಾತ ನೋಡಿ ಇದರ ಸಂಖ್ಯೆ ಇನ್ನೂ ಕಡಿಮೆಯಾಗುತ್ತದೆ ಎಂದರು. ಅದೇ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 35ರಿಂದ 40ಕ್ಕಿಂತ ಹೆಚ್ಚು ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ 44 ಮಕ್ಕಳಿಗೆ ಒಬ್ಬ ಶಿಕ್ಷಕ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 36 ಮಕ್ಕಳಿಗೆ ಒಬ್ಬ ಶಿಕ್ಷಕ, ಬಳ್ಳಾರಿ ಜಿಲ್ಲೆಯಲ್ಲಿ 35 ಮಕ್ಕಳು ಮತ್ತು ಕಲಬುರಗಿ ಜಿಲ್ಲೆಯಲ್ಲಿ 29 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದಾರೆ. ಅಂದರೆ ಮುಂದುವರೆ ಭಾಗ ಎಂದು ಕರೆಸಿಕೊಳ್ಳುವ ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಿಗೂ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಮಕ್ಕಳ-ಶಿಕ್ಷಕರ ನಡುವಿನ ಅನುಪಾತ ಎರಡುಪಟ್ಟು ವ್ಯತ್ಯಾಸ ಇದ್ದು, ಗಂಭೀರ ತಾರತಮ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡ ಶಾಮರಾವ ಪ್ಯಾಟಿ, ಶಶಿಧರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ