ಕಲ್ಯಾಣ ಕರ್ನಾಟಕ ಮರು ನಾಮಕರಣಕ್ಕೆ ಒಂದು ವರ್ಷ: ಒಂದು ಹಿನ್ನೋಟ
Team Udayavani, Sep 17, 2020, 11:54 AM IST
ಕಲಬುರಗಿ: ಹೈದರಾಬಾದ್ ಕರ್ನಾಟಕ’ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ರಾಜ್ಯ ಸರ್ಕಾರ ಮರು ನಾಮಕರಣ ಮಾಡಿ ಒಂದು ವರ್ಷವಾಗಿದೆ.
ಸೆ.17ಕ್ಕೆ ಒಂದು ವರ್ಷ ತುಂಬುತ್ತಿದೆ. ‘ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ’ವನ್ನು ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನಾಗಿ ಆಚರಿಸಲಾಗುತ್ತಿದೆ. ಈ ಉತ್ಸವದ ಹೊಸ್ತಿಲಲ್ಲಿರುವ ಈ ಸಂದರ್ಭದಲ್ಲಿ ಈ ಭಾಗದ ಜನ ಸಮಸ್ಯೆಗಳ ಸಂಕೋಲೆಯಿಂದ ಮುಕ್ತವಾದರೇ?’ ಅಭಿವೃದ್ಧಿಯ ಸುಳಿಗಾಳಿ ಬೀಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವೇ ಸಿಗುತ್ತಿಲ್ಲ!
ಬೀದರ್ ಮತ್ತು ಅವಿಭಜಿತ ಕಲಬುರ್ಗಿ, ರಾಯಚೂರು ಜಿಲ್ಲೆಗಳು ಹಿಂದೆ ಹೈದರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದವು. ಆಗಸ್ಟ್ 15, 1947 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಆದರೆ, ಹೈದರಾಬಾದ್ ನಿಜಾಮ ತನ್ನ ಸಂಸ್ಥಾವನ್ನು ಸ್ವತಂತ್ರ ಭಾರತದಲ್ಲಿ ವಿಲೀನಗೊಳಿಸಲು ಒಪ್ಪದ ಕಾರಣ ಹೈದರಾಬಾದ್ ಕರ್ನಾಟಕದ ಈ ಭಾಗಕ್ಕೆ ಸ್ವಾತಂತ್ರ್ಯ ದೊರೆಯಲೇ ಇಲ್ಲ. ಅಂದಿನ ಕೇಂದ್ರ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಬಿಗಿ ನಿಲುವಿನಿಂದಾಗಿ ಹೈದರಾಬಾದ್ ನಿಜಾಮ ಸಂಸ್ಥಾನ 1948 ಸೆಪ್ಟೆಂಬರ್ 17 ರಂದು ಭಾರತ ಒಕ್ಕೂಟದಲ್ಲಿ ವಿಲೀನವಾಯಿತು. ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಸೆ.17ರಂದು. ಹೀಗಾಗಿ ಪ್ರತಿ ವರ್ಷವೂ ಸೆಪ್ಟೆಂಬರ್ 17ನ್ನು ಈ ಜಿಲ್ಲೆಗಳಲ್ಲಿ ‘ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ’ ಎಂದು ಆಚರಿಸಲಾಗುತ್ತಿತ್ತು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಿಎಂ ಬಿಎಸ್ ವೈ
ಹೈದರಾಬಾದ್ ಕರ್ನಾಟಕದ ಹೆಸರಿನಲ್ಲಿಯೇ ದಾಸ್ಯ ಇದೆ. ಹೀಗಾಗಿ ಶರಣರ ಈ ನಾಡಿಗೆ ‘ಕಲ್ಯಾಣ ಕರ್ನಾಟಕ’ಎಂದು ನಾಮಕರಣ ಮಾಡಬೇಕು ಎಂಬ ಬೇಡಿಕೆ ಇತ್ತು. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಿದ್ದಂತೆಯೇ 2019ರ ಸೆಪ್ಟೆಂಬರ್ 17ರಂದು ಈ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ಹೆಸರಿಟ್ಟರು. ಇದು ಕಲ್ಯಾಣ ಕರ್ನಾಟಕ ಉತ್ಸವದ ಎರಡನೇ ದಿನಾಚರಣೆ.
ಪಟೇಲ್ ಪ್ರತಿಮೆ: ಹೈದರಾಬಾದ್ ನಿಜಾಮ ಸಂಸ್ಥಾನದ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಿ, ಈ ಸಂಸ್ಥಾನ ಸ್ವತಂತ್ರ ಭಾರತದ ಒಕ್ಕೂಟದಲ್ಲಿ ವಿಲೀನವಾಗುವಂತೆ ಮಾಡುವಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಕಾರ್ಯ ಪ್ರಮುಖವಾಗಿತ್ತು. ಹೈದರಾಬಾದ್ ಕರ್ನಾಟಕಕ್ಕೆ ವಿಮೋಚನೆ ದೊರಕಿಸಿಕೊಟ್ಟಿದ್ದಕ್ಕಾಗಿ ಕಲಬುರ್ಗಿಯಲ್ಲಿ ಪಟೇಲ್ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಈ ಕಾರ್ಯಕ್ರಮಕ್ಕೂ ಮುನ್ನ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುವುದು ಸಂಪ್ರದಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ