ಬ್ಲಾಕ್ ಚೈನ್ ತಂತ್ರಜ್ಞಾನ ಬಳಸಿ: ಡಾ| ಸಂಜೀವ
Team Udayavani, Nov 6, 2020, 7:11 PM IST
ಕಲಬುರಗಿ: ಪ್ರಸ್ತುತ ದಿನಗಳಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನ ಬಳಸಿಕೊಂಡು ಪ್ರತಿಯೊಬ್ಬರು ಬ್ಯಾಂಕಿನ ಸೇವೆ ಉಪಯೋಗಿಸದೆಯೇ ತಮ್ಮ ಹಣವನ್ನು ಇನ್ನೊಬ್ಬರಿಗೆ ಸರಳವಾಗಿ ವರ್ಗಾಯಿಸಿಕೊಳ್ಳುವುದು ಹಾಗೂ ಜಮೆ ಮಾಡಿಕೊಳ್ಳುವಂತಹ ಕಾರ್ಯಗಳನ್ನು ಸುಲಲಿತವಾಗಿ ಇಂಟರ್ನೆಟ್ ಮೂಲಕ ಮಾಡಬಹುದಾಗಿದೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಶ್ರೇಣಿ ಕೈಗಾರಿಕೆ ಮುಖ್ಯ ಕಾರ್ಯದರ್ಶಿ ಡಾ| ಸಂಜೀವ ಲಹೇಕ್ ಹೇಳಿದರು.
ಇಲ್ಲಿನ ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾ ವಿಭಾಗದಲ್ಲಿ ನಡೆಯುತ್ತಿರುವ ಎಐಸಿಟಿ ಅಟಲ್ ಪಠ್ಯ ಮತ್ತು ಕಲಿಕಾ ಅಕಾಡೆಮಿ ಪ್ರಾಯೋಜಿಸಿದ್ದ ಐದು ದಿನಗಳ ಆನ್ಲೈನ್ ಉಪನ್ಯಾಸ ಮಾಲಿಕೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸದ್ಯ ಬ್ಲಾಕ್ ಚೈನ್ ಟೆಕ್ನಾಲಜಿಯನ್ನು ಬಹಳ ಜನರು ಸದುಪಯೋಗ ಪಡೆದುಕೊಳ್ಳುತ್ತಿದ್ದು, ಇಂದಿನ ಶೈಕ್ಷಣಿಕ ಅಭ್ಯಾಸ ಕ್ರಮದಲ್ಲಿ ಈ ತಂತ್ರಜ್ಞಾನ ಅಳವಡಿಕೊಂಡು ವಿದ್ಯಾರ್ಥಿಗಳಿಗೆಪ್ರಸ್ತುತ ಜಗತ್ತಿನಲ್ಲಿ ಕಾರ್ಯನಿರ್ವಹಿಸುವ ಗುಣಮಟ್ಟ ಕೊಡಬೇಕಾಗಿದೆ. ಎಐಸಿಟಿ ಅಟಲ್ ಪಠ್ಯ ಮತ್ತು ಕಲಿಕಾ ಅಕಾಡೆಮಿಯು ದೇಶಾದ್ಯಂತ ಇಂಜಿನಿಯರಿಂಗ್ ಕಾಲೇಜಿನ ಶಿಕ್ಷಕರಿಗೆ ಉನ್ನತ ಮಟ್ಟದ ಹಾಗೂ ಪ್ರಸ್ತುತ ಜಗತ್ತಿನ ತಂತ್ರಜ್ಞಾನದ ತಿಳಿವಳಿಕೆ ನೀಡುವ ಗುರಿಯನ್ನಿಟ್ಟುಕೊಂಡು ತನ್ನ ಕಾರ್ಯ ನಿರ್ವಹಿಸುತ್ತಿದೆ, ಇದರಡಿಯಲ್ಲಿ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗಕ್ಕೆ ಅನುಮತಿ ದೊರೆತಿದೆ. ಅಲ್ಲದೇ ಇಂಜಿನಿಯರಿಂಗ್ ಕಾಲೇಜಿನ ಶಿಕ್ಷರಿಗಾಗಿ ಬ್ಲಾಕ್ ಚೈನ್ ಟೆಕ್ನಾಲಜಿ ಬಗ್ಗೆ ಐದು ದಿನಗಳ ಉಪನ್ಯಾಸ ಮಾಲಿಕೆ ಹಮ್ಮಿಕೊಂಡಿರುವುದು ಮಾದರಿಯಾಗಿದೆ ಎಂದು ಹೇಳಿದರು.
ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಭೀಮಾಶಂಕರ ಸಿ. ಬಿಲಗುಂದಿ ಉಪನ್ಯಾಸ ಮಾಲಿಕೆ ಉದ್ಘಾಟಿಸಿ, ಶಿಕ್ಷಣದ ಗುಣಮಟ್ಟ ಹೆಚ್ಚಿಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಸಂಸ್ಥೆ ಶ್ರಮಹಿಸುವುದಲ್ಲದೇ ಬೇಕಾಗುವ ಎಲ್ಲಾ ರೀತಿಯ ಅನೂಕೂಲತೆ ಕಲ್ಪಿಸಲಾಗುವುದು ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಡಾ| ಎಸ್.ಎಸ್. ಹೆಬ್ಟಾಳ ಮಾತನಾಡಿ, ಪಿಡಿಎ ಕಾಲೇಜಿನ ಇನ್ನು ಹಲವಾರು ವಿಭಾಗಗಳಿಗೆ ಇದೇ ರೀತಿಯ ಉಪನ್ಯಾಸ ಮಾಲಿಕೆಗೆ ಅನುಮತಿ ದೊರೆತಿದೆ ಎಂದು ಹೇಳಿದರು. ಅಲ್ಲದೇ ಅಟಲ್ ರ್ಯಾಂಕಿಂಗ್ ನಲ್ಲಿ ಕಾಲೇಜು ತನ್ನ ಸ್ಥಾನ ಗಿಟ್ಟಿಸಿಕೊಂಡಿದ್ದನ್ನು ಸ್ಮರಿಸಿಕೊಂಡರು.
ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥೆ ಮತ್ತು ಉಪನ್ಯಾನ ಮಾಲಿಕೆ ಸಂಯೋಜಕಿಯಾದ ಡಾ| ಭಾರತಿ ಹರಸೂರ ಮಾತನಾಡಿದರು.ಕಾರ್ಯಕ್ರಮದ ಸಂಚಾಲಕ ಅಶೋಕ ಆರ್. ಪಾಟೀಲ ಅವರು ಬ್ಲಾಕ್ ಚೈನ್ ಟೆಕ್ನಾಲಜಿ ಕುರಿತು ಮಾಹಿತಿ ನೀಡಿದರು. ಸಂಚಾಲಕ ಡಾ| ನಾಗೇಶ ಸಾಲಿಮಠ ವಂದಿಸಿದರು. ಪ್ರೊ| ರಶ್ಮೀ ತಳ್ಳಳ್ಳಿ , ಎಸ್. ಸುಮಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ
Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್!: 7 ಮಂದಿ ಸೆರೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ