ಸ್ವತ್ಛ ಪರಿಸರಕ್ಕಾಗಿ ಬಯಲು ಶೌಚ ಮುಕ್ತಗೊಳಿಸಿ
Team Udayavani, Feb 26, 2018, 11:43 AM IST
ಶಹಾಬಾದ: ಬಯಲು ಶೌಚದಿಂದ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುವುದನ್ನು ತಪ್ಪಿಸಲು ಹಾಗೂ ಸ್ವತ್ಛ ಪರಿಸರ ನಿರ್ಮಾಣಕ್ಕಾಗಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡು ಬಯಲು ಶೌಚ ಮುಕ್ತ ಗ್ರಾಮವನ್ನಾಗಿಸಿ ಎಂದು ಸಮುದಾಯ ಆರೋಗ್ಯ ಕೇಂದ್ರದ ಪ್ರಯೋಗಶಾಲಾ ತಂತ್ರಜ್ಞ ಕೌಸರ್ ನಿಯಾಜ್ ಅಹ್ಮದ್ ಹೇಳಿದರು.
ನಗರದ ಎಸ್ಎಸ್ ಮರಗೋಳ ಮಹಾವಿದ್ಯಾಲಯ ಹಾಗೂ ಕಲಬುರಗಿ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯದ ಅವಶ್ಯಕತೆ ಎಂಬ ವಿಷಯದ ಕುರಿತು ಅವರು ಮಾತನಾಡಿದರು.
ಜನರ ಜನಕಲ್ಯಾಣಕ್ಕಾಗಿ ವಿವಿಧ ಯೋಜನೆಗಳ ಮೂಲಕ ಗ್ರಾಮದಲ್ಲಿನ ಪ್ರತಿಯೊಬ್ಬರು ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳಬೇಕು. ಸಮಾಜದ ಪ್ರತಿ ಕುಟುಂಬ ಆರೋಗ್ಯವಂತರಾಗಿ ಬದುಕಲು ಸುತ್ತಲಿನ ಪರಿಸರ ಅತ್ಯಂತ ಪ್ರಮುಖವಾಗಿದ್ದು, ಪರಿಸರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಹೇಳಿದರು. ಮಹಾತ್ಮ ಗಾಂಧೀಜಿ ಕನಸು ನನಸಾಗಬೇಕಾದರೆ ಎಲ್ಲರು ಸ್ವತ್ಛ ಭಾರತ ಅಭಿಯಾನದಲ್ಲಿ ಮುಕ್ತ ಮನಸ್ಸಿನಿಂದ ಭಾಗವಹಿಸಿದಾಗ ಮಾತ್ರ ಗ್ರಾಮಗಳ ಉದ್ಧಾರವಾಗುತ್ತವೆ. ಬಯಲು ಶೌಚಾಲಯದಿಂದ ಅನೇಕ ರೋಗಗಳು ಹರಡುತ್ತವೆ. ಆದ್ದರಿಂದ ಬಯಲು ಶೌಚ ಮುಕ್ತ ಭಾರತವಾದಾಗ ಮಾತ್ರ ಜನರು ರೋಗಗಳಿಂದ ಮುಕ್ತಿ ಪಡೆಯಬಹುದು ಎಂದು ಹೇಳಿದರು.
ಸಮುದಾಯ ಆರೋಗ್ಯ ಕೇಂದ್ರದ ಕಚೇರಿ ಅಧೀಕ್ಷಕ ಮೋಹನಕುಮಾರ ಗಾಯಕವಾಡ್, ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕ ಅಮರೇಶ ಇಟಗಿಕರ್, ವಿಜಯಲಕ್ಷ್ಮೀ , ಸುಮಂಗಲಾ, ರಾಜಶೇಖರ ಚಳಗೇರಿ, ಶರಣಪ್ಪ ಕವಡೆ, ಶಿವಶಂಕರ ಹಿರೇಮಠ, ಗುರುಲಿಂಗಪ್ಪ ತುಂಗಳ ಇದ್ದರು. ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಎಸ್.ಎಂ. ಕೋಟನೂರ್ ಅಧ್ಯಕ್ಷತೆ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್