ಮಿನಿ ವಿಧಾನಸೌಧ ಎದುರು ಧರಂ ಪುತ್ಥಳಿ ಸ್ಥಾಪಿಸಲು ಆಗ್ರಹ
Team Udayavani, Aug 9, 2017, 12:29 PM IST
ಕಲಬುರಗಿ: ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್, ಸ್ವಾತಂತ್ರ್ಯ ಯೋಧ-ಮಾಜಿ ಶಾಸಕ ವಿದ್ಯಾಧರ ಗುರೂಜಿ ಹಾಗೂ ಪಾಲಿಕೆ ಮಾಜಿ ಸದಸ್ಯ ಕಲ್ಯಾಣ ರಾವ್ ಪಾಟೀಲ ಅವರ ನಿಧನಕ್ಕೆ ಶ್ರದ್ಧಾಂ ಜಲಿ ಸಲ್ಲಿಸಿ ಮಂಗಳವಾರ ಕರೆಯಲಾಗಿದ್ದ ಮಹಾ ನಗರ ಪಾಲಿಕೆ ಸಾಮಾನ್ಯ ಸಭೆ ಮುಂದೂಡಲಾಯಿತು. ಮಹಾಪೌರ ಶರಣು ಮೋದಿ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯಲ್ಲಿ ಧರ್ಮಸಿಂಗ್ ನಿಧನಕ್ಕೆ ಕಂಬನಿ ಮಿಡಿದು ಅವರ ಸಾಧನೆಗಳನ್ನು ಸ್ಮರಿಸಿ, ಕಲಬುರಗಿ ನಗರಸಭೆ ಸದಸ್ಯರಾಗಿ ರಾಜ್ಯದ ಮುಖ್ಯಮಂತ್ರಿ ಆಗಿರುವುದನ್ನು ಪ್ರಸ್ತಾಪಿಸಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು. 105 ವರ್ಷಗಳ ಕಾಲ ಸಾರ್ಥಕ ಜೀವನ ನಡೆಸಿರುವ ವಿದ್ಯಾಧರ ಗುರೂಜಿ ಹಾಗೂ ಪಾಲಿಕೆ ಸದಸ್ಯರಾಗಿ ಎಲ್ಲರೊಂದಿಗೆ ಉತ್ತಮ ಸ್ನೇಹ ಹೊಂದಿದ್ದ ಕಲ್ಯಾಣರಾವ್ ಪಾಟೀಲ ಅವರನ್ನು ಸ್ಮರಿಸಲಾಯಿತು.
ಪುತ್ಥಳಿ ಸ್ಥಾಪಿಸಿ: ಆಡಳಿತ ಪಕ್ಷದ ನಾಯಕ ರಾಜಕುಮಾರ ಕಪನೂರ, ಮಾಜಿ ಮಹಾಪೌರ ಸೈಯದ್ ಅಹ್ಮದ, ಮಾಜಿ ಉಪಮಹಾಪೌರ ಶರಣಮ್ಮ ಬೆಣ್ಣೂರ, ಪ್ರಮೋದ ತಿವಾರಿ, ವಿಪಕ್ಷ ನಾಯಕ ಆರ್.ಎಸ್ .ಪಾಟೀಲ, ಶಿವಾನಂದ ಪಾಟೀಲ
ಅಷ್ಠಗಿ, ಅರ್ಚನಾ ತಿವಾರಿ, ರಮೇಶ ಕಮಕನೂರ, ವಿಠಲ ಯಾದವ್, ಹುಲಿಗೆಪ್ಪ ಕನಕಗಿರಿ, ಅಷ್ಪಾಕ ಅಹ್ಮದ ಚುಲುಬುಲ್ ಧರ್ಮಸಿಂಗ್ ಕುರಿತು ಮಾತನಾಡಿದರು. ಧರ್ಮಸಿಂಗ್ ಅವರು ಕಲಬು ರಗಿ ನಗರ ಸಭೆ ಮೂಲಕ ರಾಜಕೀಯ ಜೀವನಕ್ಕೆ ಕಾಲಿಟ್ಟು ರಾಜ್ಯದ ಮುಖ್ಯ ಮಂತ್ರಿ ಆಗಿರುವುದು ಸಾಮಾನ್ಯವಾದುದ್ದಲ್ಲ. ಕಲಬುರಗಿ ಜಿಲ್ಲೆಯ ಅಭಿವೃ ದ್ಧಿಗೆ ತಮ್ಮದೇಯಾದ ಕೊಡುಗೆ ನೀಡಿರುವ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ಥಳಿಯನ್ನು ಮಿನಿ ವಿಧಾನಸೌಧ ಎದುರಿನ ಸ್ಥಳದಲ್ಲಿ ಸ್ಥಾಪಿಸಲು ಹಾಗೂ ಅವರ ಕೊಡುಗೆ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಶರಣಬಸವೇಶ್ವರ ಕೆರೆ ಉದ್ಯಾನವನದ ಸ್ಥಳದಲ್ಲಿ ಮ್ಯೂಜಿಯಂ ಸ್ಥಾಪಿಸಬೇಕೆಂದು ಸದಸ್ಯರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಾಪೌರ ಶರಣಕುಮಾರ ಮೋದಿ ಅವರು ಧರ್ಮಸಿಂಗ್ ಅವರ ಪುತ್ಥಳಿ ಸ್ಥಾಪನೆ ವಿಷಯ ಮುಂದಿನ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಅದನ್ನು ಸರ್ಕಾರಕ್ಕೆ ಕಳುಹಿಸಿ ಕೊಡೋಣ ಎಂದು ಹೇಳಿ ಸಭೆಯನ್ನು ಮುಂದೂಡಿದರು. ಮುಂದೂಡಿದ ಸಭೆಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ನಿರ್ಧಾರ ಪ್ರಕಟಿಸಿದರು. ಸಭೆಯಲ್ಲಿ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ