ರಜ್ವಿರೋಡ್‌ ಹೆಸರು ಬದಲಾವಣೆಗೆ ವಿರೋಧ


Team Udayavani, Sep 9, 2022, 5:23 PM IST

11road

ಆಳಂದ: ಪಟ್ಟಣದ ಕೆಲ ರಸ್ತೆಗಳಿಗೆ ಹೆಸರು ಬದಲಾವಣೆಗೆ ಮುಂದಾದ ಪುರಸಭೆ ನಿರ್ಣಯಕ್ಕೆ ರಜ್ವಿರೋಡ್‌ ವ್ಯಾಪಾರಿಗಳ ಸಂಘ ಹಾಗೂ ಅಸೋಶಿಯನ್‌ ಅಧ್ಯಕ್ಷ ರಫೀಕ್‌ ಇನಾಮಾದಾರ ತೀವ್ರ ವಿರೋಧ ವ್ಯಕ್ತಪಡಿಸಿದರು.

ಪಟ್ಟಣದ ಲಿಂಗಾಯಿತ ಭವನದ ಅಭಿ ಡೈ ಇನ್‌ ಹೋಟೆಲ್‌ ನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಜ್ವಿರೋಡ್‌ ಎನ್ನುವ ಹೆಸರಿಗೆ ಐತಿಹಾಸಿಕ ಪುರಾವೆ ಇದೆ. ಹೆಸರು ಬದಲಾಯಿಸಬೇಕಾದರೆ ಹೊಸ ರಸ್ತೆಗೆ ಹೆಸರು ಸೂಚಿಸಿ ಎಂದು ಮನವಿ ಮಾಡಿದರು.

ಪಟ್ಟಣದ ವಿವಿಧ ರಸ್ತೆಗಳಿಗಳಿಗೆ ಸ್ವಾತಂತ್ರ್ಯ ಸೇನಾನಿಗಳ ಹೆಸರಿನಲ್ಲಿ ನಾಮಕರಣ ಮಾಡುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇವೆ. ಆದರೆ, ರಜ್ವಿರೋಡ್‌ ರಸ್ತೆ ಹೆಸರನ್ನು ಬದಲಾವಣೆ ಮಾಡಬೇಡಿ, ಅದಕ್ಕೆ ತನ್ನದೇ ಆದ ಇತಿಹಾಸ ಇದೆ. ಮಟಕಿ ರಸ್ತೆಯಲ್ಲಿ ಸಂಗೊಳ್ಳಿ ರಾಯಣ್ಣ ಕ್ರಾಸ್‌ ಹೆಸರು ಬದಲಾಗಬಾರದು ಎಂದು ಪುನರುಚ್ಚರಿಸಿದರು.

ಸೆ. 16ರಂದು ಕರೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡಾವಳಿಯ 4ರಲ್ಲಿ ರಸ್ತೆ ನಾಮಕರಣ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಯಾವ ರಸ್ತೆಗೂ ನಾಮಕರಣ ಕೈಗೊಳ್ಳಲು ವಿರೋಧವಿಲ್ಲ. ಆದರೆ ಬಸ್‌ ನಿಲ್ದಾಣದಿಂದ ಸಿದ್ಧಾರ್ಥ ಚೌಕ್‌ ವರೆಗೆ ಇರುವ ರಸ್ತೆಗೆ ಹೈದ್ರಾಬಾದ್‌ನ ಇಬ್ರಾಹಿಂ ರಜ್ವಿ ಅವರು ಬರಗಾಲದಲ್ಲಿ ಜನರಿಗೆ ಕೆಲಸಕೊಡುವ ಉದ್ದೇಶದಿಂದ ಹೈದ್ರಾಬಾದ್‌ನಲ್ಲಿದ್ದ ತಮ್ಮ ಆಸ್ತಿಯನ್ನು ಮಾರಿ ಈ ರಸ್ತೆ ನಿರ್ಮಿಸಿದ್ದಾರೆ. ಅವರ ಸಮಾಧಿಯೂ ಇಲ್ಲಿನ ದರ್ಗಾದಲ್ಲಿದೆ. ಏಕಾಂತರಾಮಯ್ಯನ ಮಂದಿರ, ಲಾಡ್ಲೆ ಮಶಾಕ್‌ ದರ್ಗಾದಂತ ರಸ್ತೆಗಳು ಐತಿಹಾಸವಾಗಿವೆ. ಆದ್ದರಿಂದ ಈ ಹೆಸರನ್ನು ಯಥಾವತ್ತಾಗಿ ಇಡಬೇಕು ಎಂದು ಆಗ್ರಹಿಸಿದರು.

ಜನರ ಆಸೆಯಂತೆ ಕೆಲಸಗಳಾಗಬೇಕು. ಆದರೆ ಶಾಸಕರ ಆಸೆಯಂತೆ ಕೆಲಸಗಳು ನಡೆಯುತ್ತಿವೆ. ಜಾತಿ, ಧರ್ಮದ ಹೆಸರಿನಲ್ಲಿ ಯಾವುದೇ ಧರ್ಮದ ಯುವಕರು ಬಲಿಯಾಗದೆ ಅಭಿವೃದ್ಧಿಗೆ ಒತ್ತುಕೊಡಬೇಕು. ಪ್ರತಿಯೊಂದು ಆಡಳಿತದಲ್ಲಿ ಶಾಸಕರ ಬದಲು ಅವರ ಪುತ್ರ ಹರ್ಷಾನಂದ ಹಸ್ತಕ್ಷೇಪ ಮಾಡತೊಡಗಿದ್ದಾರೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಪುರಸಭೆ ಜೆಡಿಎಸ್‌ ಸದಸ್ಯ ವೈಹೀದ್‌ ಜರ್ದಿ, ಸಂಘದ ಉಪಾಧ್ಯಕ್ಷ ಅಪ್ಪಾಸ್‌ ಅಲಿ ಜರ್ದಿ, ಫೀರೋಜ್‌ ಪಟೇಲ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.