ರೈಲು ಮಾರ್ಗ ಬದಲಾವಣೆಗೆ ಕಲಬುರಗಿ ವಿರೋಧ


Team Udayavani, Mar 10, 2022, 9:26 AM IST

1train

ಬೀದರ: ಜಿಲ್ಲೆಯ ಜನರ ಬಹು ನಿರೀಕ್ಷಿತ ಬೀದರ- ಯಶವಂತಪುರ ರೈಲನ್ನು ವಾಯಾ ಕಲಬುರಗಿ ಮಾರ್ಗವಾಗಿ ಸಂಚರಿಸಲು ರೈಲ್ವೆ ಇಲಾಖೆ ನೀಡಿದ ಹಸಿರು ನಿಶಾನೆಗೆ ನೆರೆ ಕಲಬುರಗಿ ಜಿಲ್ಲೆ ವಿರೋಧ ವ್ಯಕ್ತಪಡಿಸಿದೆ.

ಈ ಮಾರ್ಗ ಬದಲಾವಣೆ ಈಗ ಎರಡು ಜಿಲ್ಲೆಗಳ ಚುನಾಯಿತ ಪ್ರತಿನಿಧಿಗಳ ರಾಜಕೀಯ ಕಿತ್ತಾಟಕ್ಕೆ ವೇದಿಕೆಯಾಗಿದೆ. ದಶಕಗಳ ಹೋರಾಟದ ಫಲವಾಗಿ ಆರಂಭ ಗೊಂಡಿದ್ದ ಬೀದರ-ಯಶವಂತಪುರ ರೈಲು ಸದ್ಯ ಬೀದರನಿಂದ ತೆಲಂಗಾಣದ ವಿಕಾರಾಬಾದ್‌, ಕಲಬುರಗಿ ಜಿಲ್ಲೆಯ ಕೆಲವು ತಾಲೂಕುಗಳ ಮೂಲಕ ಯಶವಂತಪುರ ತಲುಪುತ್ತಿದೆ.

ಆದರೆ, ಈ ರೈಲನ್ನು ಕಲಬುರಗಿ ಜಿಲ್ಲೆ ಮೂಲಕ ಕಾರ್ಯಾಚರಣೆ ನಡೆಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದರಿಂದ ಹುಮನಾಬಾದ, ಕಮಲಾಪುರ, ಶಹಾಬಾದ ತಾಲೂಕುಗಳು, ಕಲಬುರಗಿ ಜಿಲ್ಲೆ ಜನತೆಗೆ ಅನುಕೂಲವಾಗಲಿದೆ. ಜತೆಗೆ ಹೊಸ ರೈಲ್ವೆ ಸೇವೆಗಳಿಗೂ ಈ ಮಾರ್ಗ ತೆರೆದುಕೊಂಡು ವಾಯಾ ಕಲಬುರಗಿ ಮಾರ್ಗವಾಗಿ ಇನ್ನು ಹೆಚ್ಚಿನ ರೈಲುಗಳು ಬೀದರನಿಂದ ಚಲಿಸಲು ಸಾಧ್ಯವಾಗಬಹುದೆಂಬ ನಿರೀಕ್ಷೆ ಜಿಲ್ಲೆಯ ಪ್ರಯಾಣಿಕರದ್ದಾಗಿತ್ತು.

ರೈಲು ಮಾರ್ಗ ಬದಲು, ಪರ-ವಿರೋಧ ಚರ್ಚೆ

ಬೀದರ ಜಿಲ್ಲೆಯ ಜನರ ಒತ್ತಾಸೆಯಂತೆ ಕೇಂದ್ರದ ರಸಾಯನಿಕ-ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರ ಸತತ ಪ್ರಯತ್ನದ ಫಲವಾಗಿ ಬೀದರ-ಯಶವಂತಪುರ ರೈಲು ಮಾರ್ಗ ಬದಲಾವಣೆಗೆ ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಹೊಸ ಮಾರ್ಗದ ಮೂಲಕ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಆದರೆ, ಮಾರ್ಗ ಬದಲಾವಣೆಯಿಂದ ಕಲಬುರಗಿ ಜಿಲ್ಲೆಯ ಚಿಂಚೋಳಿ, ಸೇಡಂ, ಚಿತ್ತಾಪುರ ತಾಲೂಕಿನ ಜನರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ಅಲ್ಲಿನ ಜನ ವಿರೋಧ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಸಂಸದ ಡಾ| ಉಮೇಶ ಜಾಧವ ಮತ್ತು ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿ‌ನಿ ವೈಷ್ಣವ್‌ ಅವರನ್ನು ಭೇಟಿ ಮಾಡಿ, ಯಾವುದೇ ಕಾರಣಕ್ಕೂ ರೈಲು ಮಾರ್ಗ ಬದಲಾಯಿಸದೇ ಯಥಾಸ್ಥಿತಿ ಕಾಪಾಡಬೇಕೆಂದು ಒತ್ತಡ ಹೇರಿದ್ದಾರೆ. ಬೇಕಾದರೆ ಕಲಬುರಗಿ ಮಾರ್ಗವಾಗಿ ಬೀದರ-ಯಶವಂತಪುರ ಮಧ್ಯೆ ಮತ್ತೊಂದು ಹೊಸ ರೈಲು ಆರಂಭಿಸಲಿ ಎಂದು ಕೇಳಿಕೊಂಡಿದ್ದಾರೆ. ರೈಲು ಮಾರ್ಗ ಬದಲಾವಣೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ಹೆಚ್ಚಿದ್ದು, ಈ ಪ್ರಹಸನ ಇದೀಗ ಬಿಜೆಪಿಯ ಇಬ್ಬರು ಸಂಸದರ ನಡುವೆ ಸಂಘರ್ಷಕ್ಕೂ ಕಾರಣವಾಗಿದೆ.

ಮಾರ್ಗ ಬದಲಾವಣೆಯಲ್ಲಿ ಏನಿದೆ?

ಬೀದರ-ಯಶವಂತಪುರ ರೈಲುಗಳು ಕಲಬುರಗಿ ಮಾರ್ಗವಾಗಿ ವಾರದಲ್ಲಿ ನಾಲ್ಕು ದಿನ ಚಲಿಸಲಿದೆ. ರೈಲು ಸಂಖ್ಯೆ: 16571 ರವಿವಾರ, ಸೊಮವಾರ, ಮಂಗಳವಾರ, ಗುರುವಾರ ಯಶವಂತಪುರದಿಂದ ವಾಯಾ ಸುಲಹಳ್ಳಿ, ವಾಡಿ, ಕಲಬುರಗಿ, ತಾಜಸುಲ್ತಾನಪುರ, ಕಮಲಾಪುರ, ಹುಮನಾಬಾದ, ಹಳ್ಳಿಖೇಡ ಮಾರ್ಗವಾಗಿ ಬೀದರಗೆ ತಲುಪಲಿದೆ. ಅದೇ ರೀತಿ ನಂ. 16572 ರೈಲು ಸೊಮವಾರ, ಮಂಗಳವಾರ, ಬುಧವಾರ, ಶುಕ್ರವಾರ ದಿನದಂದು ಬೀದರನಿಂದ ಹೊರಟು ಬಂದ ಮಾರ್ಗವಾಗಿಯೇ ಯಶವಂತಪುರ ತಲುಪಲಿದೆ.

ಬೀದರ-ಯಶವಂತಪುರ ರೈಲು (ವಾಯಾ ಕಲ್ಬುರ್ಗಿ) ಮಾರ್ಗ ಬದಲಾವಣೆಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ. ಉತ್ತರ ಮತ್ತು ದಕ್ಷಿಣ ಭಾರತ ನಡುವಿನ ದೂರ ಕಡಿಮೆ ಮಾಡುವ ಉದ್ದೇಶದಿಂದ ಬೀದರ-ಕಲಬುರಗಿ ರೈಲು ಮಾರ್ಗ ಮಾಡಲಾಗಿದೆ. ಈ ರೈಲು ಮಾರ್ಗ ಬದಲಾವಣೆ ಜತೆಗೆ ಹೊಸ ರೈಲ್ವೆ ಸೇವೆಗಳು ಲಭ್ಯವಾಗಿ ಬೀದರ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. -ಬಿ.ಜಿ. ಶೆಟಕಾರ, ಅಧ್ಯಕ್ಷ, ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಬೀದರ

-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.