ಅನುದಾನ ಕೊರತೆಯಿಂದ ಸಂಕಷ್ಟದಲ್ಲಿ ಸರ್ಕಾರಿ ಶಾಲೆ
Team Udayavani, Aug 3, 2022, 2:47 PM IST
ಕಲಬುರಗಿ: ರಾಜ್ಯ ಸರ್ಕಾರ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ನಿರ್ಧಾರ ಕೆಳವರ್ಗದ ಮತ್ತು ದಲಿತರ ಮಕ್ಕಳ ಶಿಕ್ಷಣದ ಮೇಲಿನ ದಾಳಿಯಾಗಿದೆ. ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿ ಮಂಗಳವಾರ ಜಿಲ್ಲಾ ಕೊಳೆಗೇರಿ ನಿವಾಸಿಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ಮಾಡಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಮುಖಾಂತರ ಮನವಿ ಸಲ್ಲಿಸಿ, ಹಿಂದೆಯೂ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ 2011ರಲ್ಲಿ ಪ್ರೊ| ಗೋವಿಂದ ಅವರ ವರದಿಯನ್ನಾಧರಿಸಿ 12,000 ಶಾಲೆಗಳನ್ನು ಮುಚ್ಚಲು ಚಿಂತನೆ ಮಾಡಲಾಗಿತ್ತು. ಆದರೆ, ಗಂಗಾವತಿಯಲ್ಲಿ ನಡೆದ ಕಸಾಪ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳಿಗೆ ನಮ್ಮ ವಿರೋಧದ ಬಿಸಿ ಮುಟ್ಟಿಸಿದ ಬಳಿಕ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿತ್ತು. ಆದರೆ, ಈಗ ಪುನಃ 13,800 ಶಾಲೆಗಳನ್ನು ಮುಚ್ಚಲು ಹೊರಟಿರುವ ನಿರ್ಧಾರ ಆಘಾತಕಾರಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಇಬ್ಬಗೆಯ ನೀತಿಯಿಂದ ಸರ್ಕಾರಿ ಶಾಲೆಗಳು ಮಕ್ಕಳನ್ನು ಸೆಳೆಯುವಲ್ಲಿ ವಿಫಲವಾಗಿದೆ. ಅನುದಾನದ ಕೊರತೆ ಮಧ್ಯೆ ಸರ್ಕಾರಿ ಶಾಲೆಗಳು ಉಸಿರುಗಟ್ಟುತ್ತಿದೆ. ಇನ್ನೊಂದೆಡೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣಕ್ಕೆ ಭಾರಿ ಉತ್ತೇಜನ ದೊರೆಯುತ್ತಿದೆ. ಇದರಿಂದ ಸಹಜವಾಗಿಯೇ ಪಾಲಕರು ಮತ್ತು ಮಕ್ಕಳು ಆ ನಿಟ್ಟಿನಲ್ಲಿ ಸೆಳೆಯುತ್ತಿದ್ದಾರೆ. ಇಂತಹ ಸಣ್ಣ ವಿಚಾರಗಳು ಸರ್ಕಾರಕ್ಕೆ ಅರ್ಥವಾಗದೇ ಇರೋದಿಲ್ಲ. 35ಸಾವಿರ ಹುದ್ದೆಗಳು ಖಾಲಿ ಇವೆ. 4767 ಏಕೋಪಾಧ್ಯಯ ಶಾಲೆಗಳಿವೆ. ಸರ್ಕಾರದ ಅನೇಕ ಕೆಲಸಗಳನ್ನು ಶಿಕ್ಷಕರೇ ಮಾಡಬೇಕಿದೆ. ಇಷ್ಟೆಲ್ಲ ಇದ್ದಾಗಲೂ ಸುಖಾಸುಮ್ಮನೆ ನಾಟಕವಾಡಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಾಬು ದಂಡಿನಕರ್, ಅಲ್ಲಮಪ್ರಭು ನಿಂಬರ್ಗಾ, ವಿಕಾಸ್ ಸಾವರಿಕರ್, ಗಣೇಶ ಕಾಂಬಳೆ, ಭಾಗಮ್ಮ ಬನಸೋಡೆ, ಯಮನಪ್ಪ ಪ್ರಸಾದ, ಬ್ರಹ್ಮಾನಂದ ಮಿಂಚಾ, ಶೇಖರ ಸಿಂಗ್, ಅನಿಲ ಚಕ್ರಾ, ಮಲ್ಲಿಕಾರ್ಜುನ ಕಾಂಬಳೆ, ಶಾಮರಾವ್ ಸಿಂಧೆ, ಬಸವರಾಜ ಧಾಡಿ, ಕರಣಕುಮಾರ ಬಂದರವಾಡ, ಕವಿತಾ ಇನಾಂದಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ