ಸರ್ಕಾರಿ ಕಾಲೇಜಿಗೆ ಬೀಗ ಜಡಿದು ಆಕ್ರೋಶ: ಫಲಿತಾಂಶ ತರಿಸಿ ಪ್ರತಿಭಟನೆ ಕೈಬಿಟ್ಟರು!


Team Udayavani, Sep 16, 2022, 3:48 PM IST

7-protest

ಸೇಡಂ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ಕೆಮೆಸ್ಟ್ರಿ ವಿಭಾಗದ ಅಂತಿಮ ವರ್ಷದ ನಾಲ್ಕನೆ ಸೆಮೆಸ್ಟರ್‌ನ ವಿದ್ಯಾರ್ಥಿಗಳು ಕಾಲೇಜಿಗೆ ಬೀಗ ಜಡಿದು, ಪ್ರತಿಭಟನೆ ನಡೆಸಿ ಫಲಿತಾಂಶಕ್ಕಾಗಿ ಪಟ್ಟು ಹಿಡಿದು ಯಶಸ್ವಿಯಾದ ಘಟನೆ ಗುರುವಾರ ನಡೆಯಿತು.

ಕಳೆದ ನಾಲ್ಕೈದು ತಿಂಗಳಿಂದ ಫಲಿತಾಂಶ ಬಾರದೇ ಇರುವ ಬಗ್ಗೆ ಕಾಲೇಜಿನ ಪ್ರಾಧ್ಯಾಪಕರಿಗೆ ತಿಳಿಸಲಾಗಿದೆ. ಆದರೆ ಯಾರೂ ಸ್ಪಂದಿಸುವ ಗೋಜಿಗೆ ಹೋಗಿಲ್ಲ. ವಿಭಾಗದ ಮುಖ್ಯಸ್ಥರನ್ನು ಕೇಳಿದರೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಪ್ರಾಂಶುಪಾಲರು ಕೇವಲ ಸಮಾಜಾಯಿಷಿ ನೀಡುತ್ತಿದ್ದಾರೆ. ಆದರೆ ಇದೀಗ ಮತ್ತೂಂದು ಸೆಮೆಸ್ಟರ್‌ನ ಪರೀಕ್ಷೆಗಾಗಿ ಶುಲ್ಕ ಭರಿಸಿಕೊಳ್ಳಲು ಆರಂಭಿಸಿದ್ದಾರೆ. ಇದೀಗ ನಾವುಗಳು ಅಂತಿಮ ವರ್ಷದ ಅಧ್ಯಯನದಲ್ಲಿದ್ದೇವೆ. ಮುಂದೆ ನಾವುಗಳು ಗೊಂದಲದಲ್ಲಿಯೇ ಪರೀಕ್ಷೆ ಎದುರಿಸಬೇಕಾಗುತ್ತದೆ. ಹೀಗಾಗಿ ನಮಗೆ ಕಳೆದ ಸೆಮೆಸ್ಟರ್‌ ಪಲಿತಾಂಶ ನೀಡಬೇಕು ಎಂದು ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲ ಅಣ್ಣಾಸಾಗರ, ಪಿಎಸ್‌ಐ ಸೋಮಲಿಂಗ ಒಡೆಯರ ಅವರಿಗೆ ಒತ್ತಾಯಿಸಿದರು.

ಪ್ರಾಂಶುಪಾಲ ಅಣ್ಣಾಸಾಗರ, ಪಿಎಸ್‌ಐ ಸೋಮಲಿಂಗ ಹಾಗೂ ಕಾರ್ಯನಿಮಿತ್ತ ಕಾಲೇಜಿಗೆ ಆಗಮಿಸಿದ್ದ ಹಿರಿಯ ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರೂ ವಿದ್ಯಾರ್ಥಿಗಳು ಕೇಳಲಿಲ್ಲ. ಬೇರೆಲ್ಲ ಕಾಲೇಜುಗಳ ವಿದ್ಯಾರ್ಥಿಗಳ ಪಲಿತಾಂಶ ನೀಡಲಾಗಿದೆ. ಆದರೆ ನಮ್ಮ ಕಾಲೇಜಿನ ಕೆಮೆಸ್ಟ್ರಿ ವಿಭಾಗದ್ದೇ ಸಮಸ್ಯೆಯಾಗಿದೆ. ಎಲ್ಲಿಯ ವರೆಗೂ ಪಲಿತಾಂಶ ತಿಳಿಸುವುದಿಲ್ಲವೋ ಅಲ್ಲಿವರೆಗೂ ನಾವು ಪ್ರತಿಭಟನೆ ಕೈಬಿಡುವದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟುಹಿಡಿದರು. ಕೊನೆಗೆ ಮಧ್ಯಾಹ್ನ 3ಗಂಟೆಗೆ ಸುಮಾರಿಗೆ ವಿಶ್ವವಿದ್ಯಾಲಯದಿಂದ ಫಲಿತಾಂಶ ಪಟ್ಟಿ ತರಿಸಿದ ಮೇಲೆ ಪ್ರತಿಭಟನೆ ಕೈಬಿಡಲಾಯಿತು.

ವಿದ್ಯಾರ್ಥಿ ಮುಖಂಡರಾದ ಷಣ್ಮುಖ, ಪ್ರಸನ್ನಕುಮಾರ, ಸಚಿನ, ರಮೇಶ, ಮುಖೇಶ, ನಾಗರಾಜ, ಮಲ್ಲಿಕಾರ್ಜುನ, ಪ್ರಶಾಂತ, ಮಹಾದೇವರೆಡ್ಡಿ, ಅಬ್ದುಲ್‌, ಇಬ್ರಾಹಿಂ, ಅಭಿಷೇಕ, ಪ್ರಿಯಾಂಕಾ, ಶಿಲ್ಪಾ, ಗಂಗಮ್ಮ, ವೀರಮಣಿ, ಕಿರಣ, ಸುಮನ್‌ ಹಾಗೂ ನೂರಾರು ವಿದ್ಯಾರ್ಥಿಗಳಿದ್ದರು.

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.