ಭರವಸೆ ನೀಡಿ ನಿರ್ಲಕ್ಷಿಸುತ್ತಿರುವ ಬಿಜೆಪಿ ವಿರುದ್ದ ಆಕ್ರೋಶ
Team Udayavani, Mar 10, 2022, 11:51 AM IST
ಚಿಂಚೋಳಿ: ಬಿಜೆಪಿ ನಾಯಕರು ಚುನಾವಣೆಯಲ್ಲಿ ಕೋಲಿ ಸಮಾಜಕ್ಕೆ ಹಲವಾರು ಭರವಸೆ ನೀಡಿ ಈಗ ನಿರ್ಲಕ್ಷಿಸುತ್ತಿರುವುದರಿಂದ ಶಾಸಕರು, ಸಂಸದರ ಸಭೆ, ಸಮಾರಂಭ, ಪಕ್ಷದ ಸಭೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ ಎಂದು ತಾಲೂಕು ಕೋಲಿ ಸಮಾಜ ಅಧ್ಯಕ್ಷ ಗಿರಿರಾಜ ನಾಟೀಕಾರ, ಕೋಲಿ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಅವಂಟಿ ತಿಳಿಸಿದ್ದಾರೆ.
ಪಟ್ಟಣದ ನಿಜಶರಣ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಕೋಲಿ ಸಮಾಜದ ಮುಖಂಡರ ಸಮ್ಮುಖದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ, ಬೀದರ ಮತ್ತು ಚಿಂಚೋಳಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಉಪ-ಚುನಾವಣೆಯಲ್ಲಿ ಕೋಲಿ ಸಮಾಜದಿಂದ ಬಿಜೆಪಿ ಅತಿ ಹೆಚ್ಚು ಮತ ಪಡೆದಿದೆ. ಹೀಗಿದ್ದರೂ ಕಳೆದ ಮೂರು ವರ್ಷದಿಂದ ಬಿಜೆಪಿ ಸಮಾಜವನ್ನು ಕಡೆಗಾಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ, ಎನ್.ರವಿಕುಮಾರ, ವಿ.ಸೋಮಣ್ಣ, ಸಂಸದ ಡಾ| ಉಮೇಶ ಜಾಧವ, ಬೀದರ ಸಂಸದ ಭಗವಂತ ಖೂಬಾ, ಮಾಜಿ ಸಚಿವ ಬಾಬುರಾವ ಚಿಂಚನಸೂರ ಚುನಾವಣೆ ಪ್ರಚಾರದಲ್ಲಿ ಕೋಲಿ ಕಬ್ಬಲಿಗ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೀಗ ಅಧಿಕಾರ ಮುಗಿಯಲು ಕೆಲವು ತಿಂಗಳು ಮಾತ್ರ ಉಳಿದಿವೆ. ಈ ಕುರಿತು ಯಾವುದೇ ಚಕಾರ ಎತ್ತುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದೆರಡು ಸಲ ನಿಯೋಗ ಕರೆದುಕೊಂಡು ಹೋದರೂ ನೆಪಮಾತ್ರಕ್ಕೆ ಎನ್ನುವಂತಾಗಿದೆ. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ ಕೇವಲ ನಾಮಕೆವಾಸ್ತೆ ಎನ್ನುವಂತಿದೆ. 2022ರ ಬಜೆಟ್ದಲ್ಲಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ನಿಗಮಕ್ಕೆ ಒಂದು ಪೈಸೆ ಅನುದಾನವನ್ನು ನೀಡಿಲ್ಲ. ಕೆಲವು ದಿನಗಳ ಹಿಂದೆ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡುವುದಾಗಿ ಘೋಷಿಸಿದ್ದರು. ಈ ಪ್ರಮಾಣಪತ್ರವನ್ನು ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮತಕ್ಷೇತ್ರದಲ್ಲಿ ಕೋಲಿ ಸಮಾಜಕ್ಕೆ ಸರ್ಕಾರದಿಂದ ಜಾರಿಯಾಗುತ್ತಿರುವ ಯಾವುದೇ ಯೋಜನೆಗಳ ಲಾಭ ಸಿಗುತ್ತಿಲ್ಲ. ಹೀಗೆ ಆದಲ್ಲಿ ಬರುವ ದಿನಗಳಲ್ಲಿ ಕೋಲಿ ಸಮಾಜ ತಕ್ಕಪಾಠ ಕಲಿಸಲಿದೆ ಎಂದು ತಾಲೂಕು ಕೋಲಿ ಸಮಾಜದ ಅಧ್ಯಕ್ಷ ಗಿರಿರಾಜ ನಾಟೀಕಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಆವಂಟಿ ಎಚ್ಚರಿಕೆ ನೀಡಿದರು. ಮುಖಂಡರಾದ ರವಿ ಹೊಸಬಾಯಿ, ಸಂಗಪ್ಪ ದಂಡಿನ, ರಾಮಲಿಂಗ ನಾಟೀಕಾರ, ಸುಧಾಕರ ಮಿರಿಯಾಣ, ಕಾಶಿನಾಥ ನಾಟೀಕಾರ, ರಾಜಕುಮಾರ ರಾಜಾಪುರ, ಸಂಗಮೇಶ ಬಡಿಗೇರ, ಸಂತೋಷ ಕಡಬೂರ, ಮಲ್ಲಿಕಾರ್ಜುನ ಮರಗುತ್ತಿ, ಪವನಕುಮಾರ ಗೋಪನಪಲ್ಲಿ ಹಾಗೂ ಕೋಲಿ ಸಮಾಜದ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ