ಎಸಿಸಿ ವಿರುದ್ಧ ಗುತ್ತಿಗೆ ಕಾರ್ಮಿಕರ ಆಕ್ರೋಶ-ಪ್ರತಿಭಟನೆ


Team Udayavani, Jan 9, 2019, 9:16 AM IST

gul-4.jpg

ವಾಡಿ: ಭಾರತ ಬಂದ್‌ ಬೆಂಬಲಿಸಿ ಹೋರಾಟಕ್ಕಿಳಿದ ಪಟ್ಟಣದ ಎಸಿಸಿ ಸಿಮೆಂಟ್ ಕಂಪನಿಯ ನೂರಾರು ಗುತ್ತಿಗೆ ಕಾರ್ಮಿಕರು, ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಎಸಿಸಿ ಕಾರ್ಮಿಕ ಸಂಘ ಎಐಟಿಯುಸಿ ಚುನಾಯಿತ ಪದಾಧಿಕಾರಿಗಳ ನೇತೃತ್ವದಲ್ಲಿ ಕಂಪನಿಯ ಪವರ್‌ ಪ್ಲ್ಯಾಂಟ್ ಹಾಗೂ ಮುಖ್ಯ ದ್ವಾರದ ಎದುರು ಜಮಾಯಿಸಿದ್ದ ಕಾರ್ಮಿಕರು, ಸಿಮೆಂಟ್ ಪ್ಯಾಕಿಂಗ್‌ ಹೌಸ್‌ ಬಂದ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಕಾಯಂ ನೌಕರರು ಎಂದಿನಂತೆ ಕೆಲಸದಲ್ಲಿ ತೊಡಗಿಕೊಂಡಿದ್ದರೆ, ಯಾವೊಬ್ಬ ಗುತ್ತಿಗೆ ಕಾರ್ಮಿಕನೂ ಕಂಪನಿಯೊಳಗೆ ಪ್ರವೇಶಿಸದೇ ಒಗ್ಗಟ್ಟು ಪ್ರದರ್ಶಿಸಿದರು.

ಎಸಿಸಿ ವಿರುದ್ಧ ಘೋಷಣೆ ಕೂಗಿದ ಮಹಿಳಾ ಮತ್ತು ಪುರುಷ ಗುತ್ತಿಗೆ ಕಾರ್ಮಿಕರು, ತಿಂಗಳಲ್ಲಿ ಕೇವಲ ಎಂಟು ದಿವಸ ಮಾತ್ರ ನಮಗೆ ಕೆಲಸ ಕೊಡಲಾಗುತ್ತಿದೆ. ಉಳಿದ ದಿನಗಳಲ್ಲಿ ಕೆಲಸ ನೀಡದೆ ಹೊರಗೆ ತಳ್ಳಲಾಗುತ್ತಿದೆ. ಇದರಿಂದ ನಮಗೆ ಉದ್ಯೋಗದ ಅಭದ್ರತೆ ಕಾಡುತ್ತಿದೆ. ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಮಕ್ಕಳು ಮತ್ತು ವೃದ್ಧ ತಂದೆ ತಾಯಿಯಂದಿರನ್ನು ಮನೆಯಲ್ಲಿ ಬಿಟ್ಟು ಬೆಳಗ್ಗೆ 6 ಗಂಟೆಗೆ ಕಂಪನಿ ಗೇಟ್ ಎದುರು ಹಾಜರಿರುತ್ತೇವೆ. ಕೆಲಸ ಕೊಡುವಂತೆ ಅಂಗಲಾಚುತ್ತೇವೆ. ಕಂಪನಿ ನಮ್ಮ ಗೋಳು ಕೇಳಿಸಿಕೊಳ್ಳುವುದಿಲ್ಲ. ಕ್ವಾರಿ ವಿಭಾಗದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ದಿನಕ್ಕೆ 370ರೂ., ಇತರ ವಿಭಾಗಗಳಲ್ಲಿನ ಮಹಿಳಾ ಕಾರ್ಮಿಕರಿಗೆ 411ರೂ. ನೀಡುವ ಮೂಲಕ ಕಂಪನಿಯವರು ವೇತನ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಮಹಿಳಾ ಕಾರ್ಮಿಕರು ದೂರಿದರು.

ತಿಂಗಳಿಗೆ ಕನಿಷ್ಟ 20 ಹಾಜರಿ ಕೆಲಸ ನೀಡಬೇಕು. ಕ್ಯಾಂಟಿನ್‌ ಕೆಲಸದಲ್ಲಿ ಕಿರುಕುಳ ತಪ್ಪಿಸಬೇಕು. ಆರೋಗ್ಯ ಸೌಲಭ್ಯ, ಕ್ಯಾಂಟಿನ್‌ ಊಟ ಮತ್ತು ಉಪಹಾರದ ವ್ಯವಸ್ಥೆಗಳನ್ನು ಕಂಪನಿ ವತಿಯಿಂದ ಉಚಿತವಾಗಿ ಮಾಡಬೇಕು. ಇಎಸ್‌ಐ-ಪಿಎಫ್‌ ಸೌಲಭ್ಯ ಒದಗಿಸಬೇಕು. ಗುತ್ತಿಗೆ ಕಾರ್ಮಿಕರಿಗೂ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಲಾರಿಗಳ ಮೂಲಕ ಹೊರಗಿನಿಂದ ಕಚ್ಚಾ ವಸ್ತುವಾಗಲಿ ಅಥವಾ ಒಳಗಿನಿಂದ ಸಿಮೆಂಟ್ ವಾಹನಗಳಾಗಲಿ ಚಲಿಸದೆ ಸ್ಥಗಿತಗೊಂಡಿದ್ದರಿಂದ ಕಂಪನಿ ಆಡಳಿತ ಮಂಡಳಿಗೆ ಸಹಜವಾಗಿ ಹೋರಾಟದ ಬಿಸಿ ಮುಟ್ಟಿತು.

ಕಾರ್ಮಿಕ ಸಂಘದ ಮುಖಂಡರಾದ ರಮೇಶ ಕಾರಬಾರಿ, ಶಾಮಸನ್‌, ಮಹ್ಮದ್‌ ಮನ್ಸೂರ್‌ ಅಲಿ, ಮಹ್ಮದ್‌ ಫಯ್ನಾಜ್‌, ಪಿ.ಕ್ರಿಸ್ಟೋಫರ್‌, ತುಕಾರಾಮ ರಾಠೊಡ, ಗುತ್ತಿಗೆ ಕಾರ್ಮಿಕರ ಮುಖಂಡರು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು. ಪಿಎಸ್‌ಐ ವಿಜಯಕುಮಾರ ಭಾವಗಿ ಬಿಗಿ ಬಂದೋಬಸ್ತ್ ಒದಗಿಸಿದ್ದರು.

ಟಾಪ್ ನ್ಯೂಸ್

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.