ಜಿಲ್ಲಾಡಳಿತ ನಿಯಂತ್ರಣದಲ್ಲಿ ಆಕ್ಸಿಜನ್‌ ಘಟಕ


Team Udayavani, Apr 30, 2021, 3:53 PM IST

ಹಹಹಹಹಜಗಹಜಕ

ಕಲಬುರಗಿ: ಜಿಲ್ಲೆಯಲ್ಲಿ ಹೊಸದೊಂದು ಖಾಸಗಿ ಆಕ್ಸಿಜನ್‌ ಉತ್ಪಾದನಾ ಘಟಕ ಆರಂಭವಾಗಿದ್ದು, ಕೊರೊನಾ ಸೋಂಕಿತರಿಗೆ ಆಕ್ಸಿಜನ್‌ ಅಭಾವ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವೇ ಆಕ್ಸಿಜನ್‌ ಉತ್ಪಾದಿಸಿ ಕೊಡಲು ಮುಂದಾಗಿದೆ. ಇದೇ ಘಟಕದಿಂದ ಆಸ್ಪತ್ರೆಗಳಿಗೆ ಆಕ್ಸಿಜನ್‌ ಪೂರೈಕೆಗಾಗಿ ಮುಂಬೈನಿಂದ 200 ಖಾಲಿ ಸಿಲಿಂಡರ್‌ಗಳನ್ನು ಜಿಲ್ಲಾಡಳಿತ ತರಿಸಿಕೊಳ್ಳುತ್ತಿದೆ.

ನಗರ ಹೊರವಲಯದ ನಂದೂರ (ಕೆ) ಕೈಗಾರಿಕಾ ಪ್ರದೇಶದಲ್ಲಿರುವ ಶಿವ ಇಂಡಸ್ಟ್ರೀಸ್‌ನವರು ಹೊಸ ಆಕ್ಸಿಜನ್‌ ಮತ್ತು ನೈಟ್ರೋಜನ್‌ ಉತ್ಪಾದನಾ ಘಟಕ ಪ್ರಾರಂಭಿಸಿದ್ದಾರೆ. ಆದರೆ, ಇವರಲ್ಲಿ ಆಕ್ಸಿಜನ್‌ ತುಂಬುವ ಖಾಲಿ ಸಿಲಿಂಡರ್‌ಗಳು ಲಭ್ಯ ಇಲ್ಲ. ಹೀಗಾಗಿ ಜಿಲ್ಲಾಡಳಿತಕ್ಕೆ ಆಕ್ಸಿಜನ್‌ ಉತ್ಪಾದಿಸಿ ಕೊಡುವುದಾಗಿ ಹೇಳಿದ್ದು, ಘಟಕವನ್ನು ಜಿಲ್ಲಾಡಳಿತ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಈ ಹೊಸ ಘಟಕ 400 ಸಿಲಿಂಡರ್‌ಗಳಷ್ಟು ಆಕ್ಸಿಜನ್‌ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಇಲ್ಲಿ ಉತ್ಪಾದಿಸುವ ಆಕ್ಸಿಜನ್‌ ಜಿಲ್ಲಾಡಳಿತ ಸೂಚಿಸುವಲ್ಲಿಗೆ ಪೂರೈಕೆ ಆಗಲಿದೆ. ಆದ್ದರಿಂದ ಮುಂಬೈನಿಂದ ಈಗಾಗಲೇ 400 ಖಾಲಿ ಸಿಲಿಂಡರ್‌ ಗಳನ್ನು ತರಿಸಿಕೊಳ್ಳಲು ನಿರ್ಧರಿಸಲಾಗಿದೆ. ಎರಡೂ¾ರು ದಿನಗಳಲ್ಲಿ 200 ಸಿಲಿಂಡರ್‌ಗಳು ಜಿಲ್ಲೆಗೆ ಬರಲಿವೆ. ಉಳಿದ 200 ಖಾಲಿ ಸಿಲಿಂಡರ್‌ಗಳು ಶೀಘ್ರದಲ್ಲಿ ಬರುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ಯಾ “ಉದಯವಾಣಿ’ಗೆ ತಿಳಿಸಿದರು.

ಇಂಡೆಂಟ್‌ ಕಡ್ಡಾಯ: ಜಿಲ್ಲೆಯಲ್ಲಿ ಈಗಾಗಲೇ ಮೂರು ಖಾಸಗಿ ಆಕ್ಸಿಜನ್‌ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿಂದ ಅನೇಕ ಕಡೆಗಳಲ್ಲಿ ಆಕ್ಸಿಜನ್‌ ಸರಬರಾಜು ಮಾಡಲಾಗುತ್ತಿವೆ. ಹೀಗಾಗಿ ಇಂಡೆಂಟ್‌ ಕಡ್ಡಾಯ ಮಾಡಲಾಗಿದೆ. ಜತೆಗೆ ಇಲ್ಲಿನ ಆಕ್ಸಿಜನ್‌ ಎಲ್ಲಿಗೆ ಪೂರೈಕೆ ಆಗುತ್ತಿದೆ ಎನ್ನುವ ಕುರಿತು ಜಿಲ್ಲಾಡಳಿತ ನಿಗಾ ವಹಿಸುತ್ತಿದೆ. ಮೂರು ಘಟಕಗಳಿಂದ ಎಷ್ಟು ಸಿಲಿಂಡರ್‌ ಆಕ್ಸಿಜನ್‌ ಪೂರೈಕೆ ಆಗುತ್ತಿದೆ. ಅದು ಯಾವ ಸ್ಥಳ, ಯಾವ ಆಸ್ಪತ್ರೆಗೆ ಸರಬರಾಜು ಆಗುತ್ತಿದೆ ಎನ್ನುವ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇದಕ್ಕಾಗಿ ಪ್ರತಿ ಘಟಕದಲ್ಲಿ ಮೂರು ಪಾಳಿಯಲ್ಲಿ ನಮ್ಮ ಸಿಬ್ಬಂದಿ ನಿಯೋಜಿಸಲಾಗಿದೆ. ಆಯಾ ಘಟಕದಿಂದ ಹೊರ ಹೋದ ಆಕ್ಸಿಜನ್‌ ಸಿಲಿಂಡರ್‌ಗಳು ನಿಗದಿತ ಆಸ್ಪತ್ರೆಗೆ ತಲುಪಿದವೋ, ಇಲ್ಲವೋ ಎನ್ನುವ ಕುರಿತು ಖಾತ್ರಿ ಮಾಡಿಕೊಳ್ಳಲಾಗುತ್ತಿದೆ ಎನ್ನುತ್ತಾರೆ ಜಿಲ್ಲಾಧಿಕಾರಿ. ಇಎಸ್‌ಐನಲ್ಲಿ ಘಟಕಕ್ಕೆ ಯತ್ನ: ಇಡೀ ಜಿಲ್ಲೆಯಲ್ಲಿ ಜಿಮ್ಸ್‌ ಆಸ್ಪತ್ರೆ ಮತ್ತು ಬಸವೇಶ್ವರ ಆಸ್ಪತ್ರೆಯಲ್ಲಿ ಮಾತ್ರವೇ ಆಕ್ಸಿಜನ್‌ ಸ್ಟೋರೆಜ್‌ ಘಟಕಗಳು ಇವೆ. ಜಿಮ್ಸ್‌ನಲ್ಲಿ 20 ಕೆಎಲ್‌ನಷ್ಟು ಮತ್ತು ಬಸವೇಶ್ವರ ಆಸ್ಪತ್ರೆಯಲ್ಲಿ 6 ಕೆಎಲ್‌ನಷ್ಟು ಆಕ್ಸಿಜನ್‌ ಸ್ಟೋರೇಜ್‌ ಆಗುತ್ತದೆ.

ಉಳಿದಂತೆ ಇಎಸ್‌ಐ ಸೇರಿ ಯಾವ ಆಸ್ಪತ್ರೆಯಲ್ಲೂ ಸ್ಟೋರೆಜ್‌ ಘಟಕಗಳಿಲ್ಲ. ಎಲ್ಲೆಡೆ ಸಿಲಿಂಡರ್‌ಗಳ ಮೂಲಕವೇ ಪೂರೈಕೆ ಮಾಡಲಾಗುತ್ತಿದೆ. ಇಎಸ್‌ಐ ಆಸ್ಪತ್ರೆಯೂ ಜಂಬೂ ಸಿಲಿಂಡರ್‌ಗಳ ಮೇಲೆ ಅವ ಲಂಬನೆ ಆಗಿದೆ. ಮೇಲಾಗಿ ಇಲ್ಲಿ 500 ಬೆಡ್‌ಗಳನ್ನು ಕೋವಿಡ್‌ಗೆ ಮೀಸಲಿಟ್ಟರೂ, ಗರಿಷ್ಠ 200 ಬೆಡ್‌ ಗಳಿಗೆ ಮಾತ್ರ ಆಕ್ಸಿಜನ್‌ ವ್ಯವಸ್ಥೆ ಆಗುತ್ತದೆ. ಆದರೂ, ಇಲ್ಲಿ 13ಕೆಎಲ್‌ ಆಕ್ಸಿಜನ್‌ ಸ್ಟೋರೆಜ್‌ ಸ್ಥಾಪನೆಗೆ ಯತ್ನಿಸಲಾಗುತ್ತಿದೆ. ಇದಕ್ಕೆ ಅಜೀಂ ಪ್ರೇಮ್‌ಜಿ ಫೌಂಡೇ ಷನ್‌ ಸಹಕಾರ ನೀಡಲು ಮುಂದೆ ಬಂದಿದೆ ಎಂದು ಜಿಲ್ಲಾಧಿಕಾರಿ ಜ್ಯೋತ್ಸಾ ° ಮಾಹಿತಿ ನೀಡಿದ್ದಾರೆ.

 

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.