ರೌಡಿಸಂನಿಂದ ಸರ್ವನಾಶ: ಡಿವೈಎಸ್‌ಪಿ


Team Udayavani, Nov 9, 2020, 7:38 PM IST

ರೌಡಿಸಂನಿಂದ ಸರ್ವನಾಶ: ಡಿವೈಎಸ್‌ಪಿ

ವಾಡಿ: ಯುವಕರು ಗುಂಪು ಕಟ್ಟಿಕೊಂಡು ರೌಡೀಸಂ ಅಪ್ಪಿಕೊಂಡರೆ ಜೈಲುವಾಸವೇ ಅವರ ಬದುಕಾಗುತ್ತದೆ. ಒಮ್ಮೆಪೊಲೀಸ್‌ ಇಲಾಖೆಯಲ್ಲಿ ರೌಡಿ ಶೀಟರ್‌ ಎಂದು ಹೆಸರು ದಾಖಲಾದರೆ ಅಂತಹವರ ಭವಿಷ್ಯ ಸರ್ವನಾಶವಾಗುತ್ತದೆ ಎಂದು ಶಹಾಬಾದ ಡಿವೈಎಸ್‌ಪಿ ವೆಂಕನಗೌಡ ಪಾಟೀಲ ಹೇಳಿದರು.

ಕ್ಷುಲ್ಲಕ ಕಾರಣಕ್ಕೆ ಗುಂಪು ದಾಳಿಯಿಂದ ನಡೆದ ಜ್ಯೋತಿಷಿ ಸುರೇಶ ವಾಸ್ಟರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿವಾರ ಹಳಕರ್ಟಿ ಗ್ರಾಮದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಏರ್ಪಡಿಸಲಾಗಿದ್ದ ಶಾಂತಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಕೋಮು ಸೌಹಾರ್ದತೆ ಕಾಪಾಡಿಕೊಂಡು ಹೋಗುತ್ತಿರುವ ಗ್ರಾಮದಲ್ಲಿ ಬಿಸಿರಕ್ತದ ಯುವಕರು ಪುಂಡಾಟಿಕೆ ಮೆರೆದರೆ ಶಾಂತಿಗೆ ಭಂಗ ಉಂಟಾಗುತ್ತದೆ. ಯಾವುದೇ ಸಮಸ್ಯೆಗೆ ಹೊಡೆದಾಟ ಪರಿಹಾರವಲ್ಲ. ನ್ಯಾಯ ದೊರಕಿಸಿಕೊಡಲು ಪೊಲೀಸ್‌ ಇಲಾಖೆಯಿದೆ. ಪ್ರಾಣ ತೆಗೆಯುವುದು ಕಾನೂನುಬಾಹಿರ ಕೃತ್ಯ. ರೌಡಿಸಂ ಪ್ರವೃತ್ತಿ ಬೆಳೆಸಿಕೊಂಡ ಯುವಕರಿಗೆ ಪೋಷಕರು ಬುದ್ಧಿವಾದ ಹೇಳಬೇಕು. ಆನಂತರ ಆ ಸಮುದಾಯಗಳ ಮುಖಂಡರು ಎಚ್ಚರಿಕೆ ನೀಡಿ, ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು. ಮೀರಿದರೆ ಕೊನೆಗೆ ಕಾನೂನು ಸರಿಯಾದ ಪಾಠ ಹೇಳಿಕೊಡುತ್ತದೆ. ಎಂಥಹದ್ದೇ ಪ್ರಭಾವಿ ವ್ಯಕ್ತಿಯಿದ್ದರೂ ಕಾನೂನಿನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲದೇವರು ಮಾತನಾಡಿ, ರೌಡಿಸಂ ಮತ್ತು ದಾದಾಗಿರಿ ನಿಮ್ಮ ಮನೆಯಲ್ಲಿರಲಿ. ಅದೇನಾದರೂ ಬೀದಿಗೆ ತಂದರೆ ಪಾತಾಳದಲ್ಲಿ ಅಡಗಿ ಕುಳಿತರೂ ಕಾನೂನು ಅವರನ್ನು ಬಿಡುವುದಿಲ್ಲ. ಗ್ರಾಮದ ಸ್ವಾಸ್ಥ್ಯ ಹಾಳುಮಾಡುವಂತ ಯುವಕರನ್ನು ಆಯಾ ಸಮಾಜದ ಮುಖಂಡರೇ ಹಿಡಿತದಲ್ಲಿಟ್ಟುಕೊಳ್ಳಬೇಕು. ಹಳಕರ್ಟಿ ಗ್ರಾಮದಲ್ಲಿ ಒಟ್ಟು ಎರಡು ಕೊಲೆಗಳ ಪ್ರಕರಣ ಘಟಿಸಿವೆ. ಜ್ಯೋತಿಷಿಯನ್ನು ಕೊಂದ ಘಟನೆಯಲ್ಲಿ ಏಳು ಜನ ಆರೋಪಿಗಳನ್ನು ಬಂಧಿ ಸಿ ಜೈಲಿಗೆ ಕಳುಹಿಸಲಾಗಿದೆ. ಸಾಕ್ಷಿಗಳು ಸಹಕಾರ ನೀಡಿದರೆ ತಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಆದರೆ ಇಂಥಹ ಪ್ರಕರಣಗಳು ಇನ್ಮುಂದೆ ನಡೆಯಬಾರದು. ಗ್ರಾಮದಲ್ಲಿ ಶಾಂತಿ, ಸಹಬಾಳ್ವೆಯಿಂದ ಬಾಳಬೇಕು ಎಂದರು.

ಕಟ್ಟಿಮನಿ ಹಿರೇಮಠದ ಶ್ರೀ ಮುನೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗ್ರಾಮದ ಹಿರಿಯ ಮುಖಂಡರಾದ ಮಲ್ಲಣ್ಣಸಾಹು ಸಂಗಶೆಟ್ಟಿ, ಈರಣ್ಣ ರಾವೂರಕರ, ಇಬ್ರಾಹಿಂ ಪಟೇಲ, ಅಜೀಜಪಾಷಾ ಪಟೇಲ, ಜಗದೀಶ ಸಿಂಧೆ, ರಾಘವೇಂದ್ರ ಅಲ್ಲಿಪುರಕರ ಮಾತನಾಡಿ, ಗ್ರಾಮದಲ್ಲಿ ಹಿಂದು-ಮುಸ್ಲಿಂ ಕೋಮು ಸೌಹಾರ್ದತೆ ಹದಗೆಡುತ್ತಿರುವ ಕುರಿತು ತಿಳಿಸಿದರು. ರಾಜುಗೌಡ ಪೊಲೀಸ್‌ ಪಾಟೀಲ, ಚಂದ್ರಕಾಂತ ಕೋಲಕುಂದಿ ಸೇರಿದಂತೆ ಗ್ರಾಮದ ವಿವಿಧ ಸಮುದಾಯಗಳ ಮುಖಂಡರು ಪಾಲ್ಗೊಂಡಿದ್ದರು. ಪಿಎಸ್‌ಐ ವಿಜಯಕುಮಾರ ಭಾವಗಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.