ವಿಚಾರ ಶಕ್ತಿ ಹೆಚ್ಚಿಸುತ್ತದೆ ಚಿತ್ರಕಲೆ
Team Udayavani, Oct 31, 2021, 9:42 AM IST
ಕಲಬುರಗಿ: ಚಿತ್ರಕಲೆ ವಿಚಾರ ಶಕ್ತಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮನಸ್ಸಿಗೆ ಸಮಾಧಾನ ಮತ್ತು ನೆಮ್ಮದಿ ನೀಡುತ್ತದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ|ನಿರಂಜನ್ ವಿ. ನಿಷ್ಠಿ ಹೇಳಿದರು.
ಶರಣಬಸವ ವಿಶ್ವವಿದ್ಯಾಲಯದ ಸಾತ್ನಕೋತ್ತರ ಚಿತ್ರಕಲಾ ವಿಭಾಗದಲ್ಲಿ ಹಮ್ಮಿಕೊಂಡಿರುವ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅವರಿಗೆ ಚಿತ್ರಕಲೆ, ಸಂಗೀತ ಪ್ರಿಯವಾದ ವಿಷಯಗಳು. ಈ ಕುರಿತು ಆಗಾಗ ಪ್ರಸ್ತಾಪಿಸುತ್ತಿರುತ್ತಾರೆ. ಡಾ| ಅಪ್ಪ, ಮಾತೋಶ್ರೀ ಡಾ| ದಾಕ್ಷಾಯಿಣಿ ಅವ್ವ ಆಶೀರ್ವಾದದಿಂದ ಶರಣಬಸವ ವಿಶ್ವ ವಿದ್ಯಾಲಯದ ಚಿತ್ರಕಲಾ ವಿಭಾಗ ಇಷ್ಟೊಂದು ಎತ್ತರಕ್ಕೆ ಬೆಳೆದಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಸಮ ಕುಲಪತಿ ಪ್ರೊ| ವಿ.ಡಿ. ಮೈತ್ರಿ ಮಾತನಾಡಿ, ಚಿತ್ರಕಲೆ ಮತ್ತು ವಾಸ್ತು ಶಿಲ್ಪಕಲೆಗೆ ಅವಿನಾಭಾವ ಸಂಭಂಧವಿದೆ. ವಿದ್ಯಾರ್ಥಿಗಳು ಚಿತ್ರಕಲೆ ವಿಷಯ ಆಯ್ದುಕೊಳ್ಳುವುದರಿಂದ ಅವರಲ್ಲಿ ಸೃಜನಶೀಲತೆ ಬೆಳೆಯುತ್ತದೆ ಎಂದು ಹೇಳಿದರು.
ಸ್ನಾತಕೋತ್ತರ ಚಿತ್ರಕಲಾ ವಿಭಾಗದ ಡೀನ್ ಡಾ| ಶಾಂತಲಾ ನಿಷ್ಠಿ ಅಧ್ಯಕ್ಷೀಯ ಭಾಷಣ ಮಾಡಿ, ಪಠ್ಯಕ್ರಮದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವವಿದೆ. ಚಿತ್ರಕಲೆಗಳ ಜೊತೆಗೆ ಕರಕುಶಲ ವಸ್ತು ತಯಾರಿಸುವ ಜಾಣ್ಮೆ ಹೊಂದಬೇಕು ಎಂದರು.
ಇದನ್ನೂ ಓದಿ: ಸರ್ಕಾರಿ ಯೋಜನೆ ಜನರಿಗೆ ತಲುಪಿಸಿ
ಶರಣಬಸವ ವಿವಿ ಪ್ರಾಧ್ಯಾಪಕರು, ಸಿಬ್ಬಂದಿ ಪಾಲ್ಗೊಂಡಿದ್ದರು. ಚಿತ್ರಕಲಾ ಪ್ರದರ್ಶನದಲ್ಲಿ ಭಾಗವಹಿಸಿದ ವಿದ್ಯಾರ್ಥಿ ಗಳಿಗೆ ಪ್ರಮಾಣಪತ್ರ ನೀಡಲಾಯಿತು. ಸ್ನಾತಕೋತ್ತರ ಚಿತ್ರಕಲಾ ವಿಭಾಗದ ಚೇರ್ ಪರ್ಸನ್ ಡಾ| ಸುಬ್ಬಯ್ಯ ಎಂ. ನೀಲಾ ಮಾತನಾಡಿದರು. ವಿದ್ಯಾರ್ಥಿಗಳಾದ ಮಹಾಲಕ್ಷ್ಮೀ, ಅರ್ಪಿತಾ ನಿರೂಪಿಸಿದರು. ಪ್ರೊ| ಗಾಯಿತ್ರಿ ಕಲ್ಯಾಣಿ ಸ್ವಾಗತಿಸಿದರು, ಪ್ರೊ| ಸರಸ್ವತಿ ರೆಶ್ಮಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…