ಕೈದಿಗಳಿಗೆ ಕ್ಷಮಾದಾನ-ಖಂಡನೆ
Team Udayavani, Aug 19, 2022, 4:33 PM IST
ಕಲಬುರಗಿ: ಗುಜರಾತ್ನ ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಗುಜರಾತಿನ ಜೈಲಿನಲ್ಲಿರುವ 11ಜನ ಕೈದಿಗಳಿಗೆ ಕ್ಷಮಾದಾನ ನೀಡಿರುವ ಸಂಗತಿ ನಿಜಕ್ಕೂ ಆಘಾತಕಾರಿಯಾಗಿದೆ. ಅಲ್ಲದೇ, ದಲಿತ ಬಾಲಕ ನೀರು ಕುಡಿದ ಎನ್ನುವ ಕಾರಣಕ್ಕೆ ಸಾಯುವಂತೆ ಹೊಡೆದ ಶಿಕ್ಷಕನೊಬ್ಬ ಕೌರ್ಯ ಮೆರೆದಿರುವುದನ್ನು ಜನವಾದಿ ಮಹಿಳಾ ಸಂಘಟನೆ ಖಂಡಿಸಿದೆ.
ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ, ಅತ್ಯಾಚಾರ ಮತ್ತು ಕೊಲೆ ಮಾಡಿದ ಅಪರಾಧಿಗಳಿಗೆ ಗುಜರಾತ್ ಸರಕಾರ ಮಾಡಿದ ಕ್ಷಮಾದಾನವನ್ನು ಕೂಡಲೇ ರದ್ದುಗೊಳಿಸಬೇಕು. ಬಿಡುಗಡೆ ಆದವರಿಗೆ ಸಿಹಿ ಹಂಚಿ, ಸನ್ಮಾನದೊಂದಿಗೆ ಸ್ವಾಗತ ಮಾಡಿದವರನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು. ಬಿಲ್ಕಿಸ್ ಬಾನೋ ಮತ್ತು ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು. ಕೇಂದ್ರ ಸರಕಾರದ ಆದೇಶ ಉಲ್ಲಂಘನೆ ಮಾಡಿದ ಗುಜರಾತ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಡಕೆ ಮುಟ್ಟಿ ನೀರು ಕುಡಿದಿದ್ದಕ್ಕಾಗಿ ಹೊಡೆದು ಕೊಂದು ಹಾಕಿದ ಸರಸ್ವತಿ ವಿದ್ಯಾ ಮಂದಿರದ ಮುಖ್ಯಸ್ಥ ಮತ್ತು ಶಿಕ್ಷಕರಿಗೆ ಬೇಲ್ ರಹಿತ ಬಂಧನ ಮುಂದುವರಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಸರಕಾರವೇ ಶಿಕ್ಷಣ ಕೇಂದ್ರಗಳನ್ನು ನಡೆಸಬೇಕು. ಎಲ್ಲ ಖಾಸಗಿ ಶಿಕ್ಷಣ ಕೇಂದ್ರಗಳನ್ನು ರದ್ದು ಗೊಳಿಸಬೇಕು. ಸಾರ್ವತ್ರಿಕ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಬೇಕು. ಈ ದಿಕ್ಕಿನಲ್ಲಿ ರಾಜಸ್ಥಾನ ಸರಕಾರವು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ, ಡಾ|ಮೀನಾಕ್ಷಿ ಬಾಳಿ, ಚಂದಮ್ಮ ಗೋಳಾ, ಪದ್ಮಿನಿ ಕಿರಣಗಿ, ಸುಧಾಮ ಧನ್ನಿ, ಪಾಂಡುರಂಗ ಮಾವಿನಕರ್, ಪೀರಪ್ಪ ಯಾತನೂರು, ಗುರು ಕೋಣಿನ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ