ಚಿಕಿತ್ಸೆ ಸಿಗದೆ ಸಾವು: ಡಿಸಿ ಕಚೇರಿಗೆ ಮೃತದೇಹ ತಂದ ಕುಟುಂಬಸ್ಥರು!


Team Udayavani, Jul 30, 2020, 9:03 PM IST

ಚಿಕಿತ್ಸೆ ಸಿಗದೆ ಸಾವು: ಡಿಸಿ ಕಚೇರಿಗೆ ಮೃತದೇಹ ತಂದ ಕುಟುಂಬಸ್ಥರು!

ಕಲಬುರಗಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕಿತರ ಸಂಖ್ಯೆ ಕ್ಷಿಪ್ರವಾಗಿ ಏರುಗತಿಯಲ್ಲಿ ಸಾಗುತ್ತಿದೆ.

ಮತ್ತೊಂದೆಡೆ ಸಾಮಾನ್ಯ ರೋಗಿಗಳು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿರುವ ಆತಂಕಕಾರಿ ಬೆಳವಣಿಗೆ ನಡೆಯುತ್ತಿದೆ.

ಹಾಸಿಗೆಗಳು ಖಾಲಿ ಇಲ್ಲವೆಂದು ಆಸ್ಪತ್ರೆಯವರು ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ರೋಗಿಯನ್ನು ಕುಟುಂಬಸ್ಥರು ಸಾಗಿಸಿದ್ದು, ಕಚೇರಿಗೆ ತಲಪುವಷ್ಟರಲ್ಲಿ ಆ ವ್ಯಕ್ತಿ ಕೊನೆಯುಸಿರೆಳೆದಿರುವ ಘಟನೆ ಗುರುವಾರ ನಡೆದಿದೆ.

ಇಲ್ಲಿನ ಮೋಮಿನಪುರದ ನಿವಾಸಿ, 38 ವರ್ಷದ ವ್ಯಕ್ತಿ ಮೊಹಮ್ಮದ್ ಆಯೂಬ್ ಎಂಬವರೇ ಚಿಕಿತ್ಸೆ ಸಿಗದೆ ಮೃತಪಟ್ಟ ದುರ್ದೈವಿ. ಬುಧವಾರ ರಾತ್ರಿ ಇವರಿಗೆ ಜ್ವರ ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಜಿಮ್ಸ್ ಆಸ್ಪತ್ರೆಗೆ ಕುಟುಂಬದವರು ಕರೆದುಕೊಂಡು ಹೋಗಿದ್ದಾರೆ. ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಮ್ಸ್ ಆಸ್ಪತ್ರೆಯಲ್ಲಿ ಆ್ಯಂಟಿಜನ್ ರ್ಯಾಪಿಡ್ ಪರೀಕ್ಷೆ ಮಾಡಲಾಗಿದೆ.

ಆಯೂಬ್‍ನ ವರದಿ ಕೋವಿಡ್ ನೆಗೆಟಿವ್ ಎಂದು ಬಂದಿದೆ. ಆದರೂ, ಆರ್ ಟಿ-ಪಿಸಿಆರ್ ಪರೀಕ್ಷೆ ಮಾಡಬೇಕೆಂದು ರಸೀದಿ ಬರೆದು ಕೊಟ್ಟಿದ್ದಾರೆ. ಅಲ್ಲದೇ, ನಮ್ಮಲ್ಲಿ ಹಾಸಿಗೆಗಳು ಲಭ್ಯವಿಲ್ಲ ಎಂದೂ ರಸೀದಿ ಬರೆದು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರ್ಕಾರಿ ಜಿಮ್ಸ್ ಆಸ್ಪತ್ರೆಯಲ್ಲೇ ಹಾಸಿಗೆ ಇಲ್ಲವೆಂದು ಹೇಳಿದ್ದರಿಂದ ರೋಗಿಯನ್ನು ಆಟೋದಲ್ಲಿ ಇಎಸ್ಐ ಆಸ್ಪತ್ರೆ ಸೇರಿ ಐದು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದರೂ ಯಾವುದೇ ಆಸ್ಪತ್ರೆಯವರು ದಾಖಲಿಸಿಕೊಳ್ಳದ ಕಾರಣ ಕೊನೆಗೆ ದಿಕ್ಕು ತೋಚದೆ ಜಿಲ್ಲಾಧಿಕಾರಿ ಕಚೇರಿಯತ್ತ ರೋಗಿಯನ್ನು ಆಟೋದಲ್ಲಿ ಕರೆದುಕೊಂಡು ಬಂದಿದ್ದೇವು ಎಂದು ಕುಟುಂಬದವರು ದೂರಿದಿದ್ದಾರೆ.

ಆದರೆ ದುರದೃಷ್ಟವಶಾತ್ ಜಿಲ್ಲಾಧಿಕಾರಿ ಕಚೇರಿಗೆ ಬರುವಷ್ಟರಲ್ಲೇ ಆಯೂಬ್ ಮೃತಪಟ್ಟಿದ್ದಾರೆ. ಮೃತ ದೇಹದನ್ನು ಆಟೋದಲ್ಲೇ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದ ಕುಟುಂಬಸ್ಥರು, ಆಸ್ಪತ್ರೆಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರ ಹಾಕಿದರು.

ರೋಗಿಯನ್ನು ನಾವೇ ಸ್ಟ್ರೆಚರ್ ಮೇಲೆ ಹಾಕಿಕೊಂಡು ಆಸ್ಪತ್ರೆಯೊಳಗೆ ತೆಗೆದುಕೊಂಡು ಹೋದೆವು. ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಇದ್ದರೂ, ರೋಗಿಯನ್ನು ನೋಡಲಿಲ್ಲ. ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಎಂದು ಕೇಳಿಕೊಂಡರೂ ಸ್ಪಂದಿಸಲಿಲ್ಲ. ಇವರ ಸಾವಿಗೆ ಜಿಲ್ಲಾಧಿಕಾರಿಗಳು ಉತ್ತರ ಕೊಡಬೇಕೆಂದು ಮೃತ ಸಹೋದರ ಆಗ್ರಹಿಸಿದರು.

ಆಯೂಬ್ ಶವ ಇರುವ ವಿಷಯ ತಿಳಿದು ಆಟೋ ಸುತ್ತ ಜನರು ಸೇರುತ್ತಿದ್ದಂತೆ ಪೊಲೀಸರು ಬಂದು ಕುಟುಂಬದವರನ್ನು ಮೃತ ದೇಹ ತೆಗೆದುಕೊಂಡು ಹೋಗುವಂತೆ ಗದರಿಸಿದ್ದಾರೆ. ಇದರಿಂದ ಏನು ತೋಚದೆ ಮೃತ ದೇಹವನ್ನು ಕುಟುಂಬಸ್ಥರು ಮನೆಗೆ ತೆಗೆದುಕೊಂಡಿದ್ದಾರೆ. ಈತನ ಸಾವಿಗೆ ಕಾರಣರಾದವರ ವಿರುದ್ಧ ಎಫ್ ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಹೋರಾಟಗಾರ ಮೊಹಮ್ಮದ್ ರಿಯಾಜುದ್ದೀನ್ ಒತ್ತಾಯಿಸಿದ್ದಾರೆ.

ಈ ಕುರಿತು ‘ಉದಯವಾಣಿ’ಗೆ ಪ್ರತಿಕ್ರಿಯಿಸಿದ ಡಿಸಿ ಶರತ್ ಬಿ., ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಿ, ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೆಲವು ದಿನಗಳ ಹಿಂದೆಯಷ್ಟೇ ವೆಂಟೇಲೆಟರ್ ಸಿಗದ ಕಾರಣ ಆಶಾ ಕಾರ್ಯಕರ್ತೆ ಸೇರಿ ನಾಲ್ವರು ಸಾವನ್ನಪ್ಪಿರುವ ಆರೋಪಿಗಳು ಕೇಳಿ ಬಂದಿದ್ದವು. ಈ ಘಟನೆಗಳು ಮಾಸುವ ಮುನ್ನವೇ ಇಂತಹುದೇ ಇನ್ನೊಂದು ಘಟನೆ ನಡೆದಿರುವುದು ಕಳವಳಕಾರಿಯಾಗಿದೆ.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.