ಪಾಟೀಲ ಹಠಾವೋ-ರಂಗಾಯಣ ಬಚಾವೋ


Team Udayavani, Dec 16, 2018, 11:25 AM IST

gul-4.jpg

ಕಲಬುರಗಿ: ರಂಗಾಯಣದ ನಿರ್ದೇಶಕ ಮಹೇಶ ಪಾಟೀಲ ಅವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಒತ್ತಾಯಿಸಿ ಶನಿವಾರ ಕಲಬುರಗಿ ರಂಗ ಒಕ್ಕೂಟದ ವತಿಯಿಂದ ರಂಗಾಯಣ ಎದುರು ರಂಗಕರ್ಮಿಗಳು ಪ್ರತಿಭಟನೆ ನಡೆಸಿದರು.

ಕಲಬುರಗಿ ರಂಗಾಯಣ ಆರಂಭವಾದಾಗಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಮಹೇಶ ಪಾಟೀಲರು ರಂಗಾಯಣದ ನಿರ್ದೇಶಕರಾದ ಮೇಲೆ ಒಂದೂವರೆ ವರ್ಷದಿಂದ ಯಾವುದೇ ರಂಗ ಚಟುವಟಿಕೆಗಳು ನಡೆಯದೆ ರಂಗಾಯಣಕ್ಕೆ ಗ್ರಹಣ ಹಿಡಿದಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು, ಶಿವಮೊಗ್ಗ, ಧಾರವಾಡದ ರಂಗಾಯಣಗಳು ನಿರಂತರ ರಂಗ ಚಟುವಟಿಕೆಗಳಿಂದ ಕ್ರಿಯಾಶೀಲವಾಗಿವೆ. ಕಲಬುರಗಿ ರಂಗಾಯಣ ಮಾತ್ರ ರೋಗಗ್ರಸ್ತವಾಗಿದೆ ಎಂದು “ಮಹೇಶ ಪಾಟೀಲ ಹಠಾವೋ, ರಂಗಾಯಣ ಬಚಾವೋ’ ಘೋಷಣೆ ಕೂಗಿದರು.

ಈ ಭಾಗದ ಹಿರಿಯ ಕಲಾವಿದರು, ರಂಗಕರ್ಮಿಗಳ ಹೋರಾಟದ ಫಲವಾಗಿ ರಂಗಾಯಣ ಸ್ಥಾಪನೆಯಾಗಿದೆ. ಆದರೆ, ರಂಗಾಯಣದ ಯಾವುದೇ ಕಾರ್ಯ ಚಟುವಟಿಕೆ ನಡೆಸದೆ ಮಹೇಶ ಪಾಟೀಲ ಐಷಾರಾಮಿ ಜೀವನ ನಡೆಸುತ್ತಾ ಕಾಲ ಕಳೆಯುತ್ತಿದ್ದಾರೆ. ಇಂದರಿಂದ ಸಾರ್ವಜನಿಕರ ಲಕ್ಷಾಂತರ ರೂ. ತೆರಿಗೆ ಹಣ ವ್ಯರ್ಥ್ಯವಾಗುತ್ತಿದೆ. ರಂಗಾಯಣದ ದುಸ್ಥಿತಿ ಕಂಡು ಈ ಭಾಗದ ರಂಗಕರ್ಮಿಗಳು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಕಿಡಿಕಾರಿದರು.

ರಂಗಾಯಣದ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಹಾಗೂ ನಿರ್ದೇಶಕರನ್ನು ವಜಾಗೊಳಿಸಬೇಕೆಂದು ಜಿಲ್ಲಾಡಳಿತ ಮತ್ತು ರಂಗ ಸಮಾಜದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಸಿ ನಾಲ್ಕು ತಿಂಗಳು ಕಳೆಯುತ್ತಿದೆ. ಆದರೆ, ಮಹೇಶ ಪಾಟೀಲರನ್ನುವಜಾಗೊಳಿಸುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಸಾಂಸ್ಕೃತಿಕ ಲೋಕಕ್ಕೆ ಹೊಡೆತ ಬಿದ್ದಿದ್ದು, ರಂಗಾಯಣದ ಪ್ರಯೋಜನವೇ ಇಲ್ಲದಂತಾಗಿದೆ ಎಂದು ದೂರಿದರು.

ರಂಗಾಯಣವನ್ನು ರಕ್ಷಿಸಲು ನಿರ್ದೇಶಕ ಮಹೇಶ ಪಾಟೀಲರನ್ನು ವಜಾಗೊಳಿಸಬೇಕು. ರಂಗ ಚಟುವಟಿಕೆಗಳನ್ನು ಆರಂಭಿಸುವ ಮೂಲಕ ರಂಗಾಯಣಕ್ಕೆ ಪುನಃಶ್ಚೇತನ ನೀಡಬೇಕು. ಇಲ್ಲವಾದಲ್ಲಿ ಬೆಳಗಾವಿಯ ಸುವರ್ಣ ಸೌಧದ ಎದುರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಗಳ
ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಇದಕ್ಕೂ ಮುನ್ನ ಖರ್ಗೆ ಪೆಟ್ರೋಲ್‌ ಪಂಪ್‌ನಿಂದ ರಂಗಾಯಣ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಕಲಬುರಗಿ ರಂಗ ಒಕ್ಕೂಟ ಅಧ್ಯಕ್ಷ ಹಾಗೂ ಪತ್ರಕರ್ತ ಪಿ.ಎಂ.ಮಣ್ಣೂರ, ಜನರಂಗ ಅಧ್ಯಕ್ಷ ಶಂಕರಯ್ಯ ಘಂಟಿ, ವಿ.ಎನ್‌. ಅಕ್ಕಿ, ಸುನೀಲ ಮಾನ್ಪಡೆ, ಕಲ್ಯಾಣ ಭಜಂತ್ರಿ, ವಿಜಯ ಹಾಗರಗುಂಡಗಿ, ಸುರೇಶ ಬಡಿಗೇರ, ಅಶೋಕ ಚಿತ್ತಕೋಟಿ, ಶಾಂತವೀರ ಮಠಪತಿ ಮುಂತಾದವರು ಪಾಲ್ಗೊಂಡಿದ್ದರು.

ಕಲಬುರಗಿ ರಂಗಾಯಣ ಆರಂಭದಿಂದಲೂ ಗೊಂದಲದಲ್ಲಿಯೇ ಸಿಲುಕಿದ್ದು, ಈ ಭಾಗದ ಕಲಾವಿದರಿಗೆ ಪ್ರೋತ್ಸಾಹ ಸಿಗುತ್ತಿಲ್ಲ. ನಿರ್ದೇಶಕ ಮಹೇಶ ಪಾಟೀಲರ ದುರಾಡಳಿತ ಬಗ್ಗೆ ಸಚಿವೆ ಜಯಮಾಲಾಗೆ ವರದಿ ಸಲ್ಲಿಸಲಾಗಿದೆ. ಆದರೆ, ಈವರೆಗೂ ಯಾವುದೇ ಕ್ರಮಕೈಗೊಳ್ಳದೆ ಇರುವುದು ಖಂಡನೀಯ.
 ಪಿ.ಎಂ. ಮಣ್ಣೂರ, ಅಧ್ಯಕ್ಷರು, ಕಲಬುರಗಿ ರಂಗ ಒಕ್ಕೂಟ

ಟಾಪ್ ನ್ಯೂಸ್

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.