ಕಲಬುರಗಿ: ಒಂದೇರಡು ಅಹಿತಕರ ಘಟನೆ ಬಿಟ್ಟರೆ ಶಾಂತಿಯುತ ಮತದಾನ
Team Udayavani, Sep 3, 2021, 9:06 PM IST
ಕಲಬುರಗಿ: ಮಹಾನಗರ ಪಾಲಿಕೆಯ 55 ವಾರ್ಡ್ ಗಳಿಗೆ ಶುಕ್ರವಾರ ನಡೆದ ಚುನಾವಣೆ ಮುಕ್ತಾಯಗೊಂಡಿದ್ದು, ಒಂದೇರಡು ಕಡೆ ಅಹಿತಕರ ಘಟನೆ ಬಿಟ್ಟರೆ ಸಂಪೂರ್ಣ ಶಾಂತಿಯುತ ಮತದಾನ ನಡೆದಿದೆ.
ವಾರ್ಡ್ ನಂ 13ರಲ್ಲಿ ಪಕ್ಷೇತರ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಈ ಘಟನೆಯಲ್ಲಿ ಮಾಜಿ ಮೇಯರ್ ಇಕ್ಬಾಲ್ ಅಹ್ಮದ ಸಿರ್ನಿಪೋಸ್ ಪುತ್ರ ಸೊಯೆಬ್ ಅಹ್ಮದ ಗೆ ಮಾರಕಾಸ್ತದಿಂದ ಇರಿಯಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯ ಬೆಂಬಲಿಗರೇ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಅದೇ ರೀತಿ ವಾರ್ಡ್ ನಂಬರ್ 36ರಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷೇತರ ಬೆಂಬಲಿಗ ನಡುವೆ ಮಾತಿನ ವಾಗ್ವಾದ ನಡೆದಿದೆ. ಒಬ್ಬರಿಗೊಬ್ಬರು ನೋಡಿಕೊಳ್ಳುತ್ತೇವೆ ಎನ್ನುವ ಮಾತಿನ ವಾಗ್ವಾದ ನಡೆದಿದೆ ಎನ್ನಲಾಗಿದೆ.
ಅದೇ ರೀತಿ ವಾರ್ಡ ನಂಬರ್ 46ರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಕಲಬುರಗಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಪೊಲೀಸ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಈ ಘಟನೆಗಳನ್ನು ಬಿಟ್ಟರೆ ಕೆಲವು ಕಡೆ ಸಣ್ಣಪುಟ್ಟ ಘಟನೆಗಳು ವರದಿಯಾಗಿವೆ. ಮತ್ತೊಂದೆಡೆ ಮತಗಟ್ಟೆಗೆ ಮತದಾನಕ್ಕೆ ತೆರಳಿದವರಿಗೆ ನಿಮ್ಮ ಹಾಕಲಾಗಿದೆ ಎಂಬುದಾಗಿ ವಾಪಸ್ಸು ಹಾಕಿರುವುದು ಸಹ ವರದಿಯಾಗಿದೆ.
ಒಟ್ಟಾರೆ ಮತದಾನ ಗರಿಷ್ಠ ಪ್ರಮಾಣದ ಆಗದೇ ಶೇ 54 ರಷ್ಟು ಪ್ರಮಾಣ ಆಗಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಜಿಲ್ಲಾಧಿಕಾರಿ ವಿ.ವಿ ಜೋತ್ಸ್ನಾ ಕಡಿಮೆ ಮತದಾನ ನಡೆಯುತ್ತಿದ್ದ ವಿವಿಧ ವಾಡ್೯ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತ ಏಣಿಕೆ ಸೆ. 6ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ