ಮೊಬೈಲ್‌ ಹಾವಳಿಯಿಂದ ದಾರಿ ತಪ್ಪುತ್ತಿದೆ ಜನತೆ


Team Udayavani, Mar 31, 2018, 11:51 AM IST

gul-2.jpg

ಚಿತ್ತಾಪುರ: ಮನುಷ್ಯನಾದವನಿಗೆ ಆಸೆಗಳು ಇರುವುದು ಸಹಜ. ಆದರೆ ಅತಿ ಆಸೆ ಇರುವುದು ದುರಂತ. ವೈಜ್ಞಾನಿಕ ಜಗತ್ತಿನಲ್ಲಿ ಪ್ರತಿಯೊಬ್ಬರು ಮೊಬೈಲ್‌ಗೆ ಮಾರು ಹೋಗಿ ಹಳ್ಳಿ ಆಟಗಳಾದ ಕುಂಟೆ ಬಿಲ್ಲೆ, ಚಿಣ್ಣಿ ದಾಂಡು, ಕಬ್ಬಡ್ಡಿ ಅಂತಹ ಅನೇಕ ಆಟಗಳನ್ನು ಬಿಟ್ಟು ಮೊಬೈಲ್‌ನಲ್ಲಿರುವ ಆಟಗಳನ್ನು ಆಡಿ ದಾರಿ ತಪ್ಪುತ್ತಿದ್ದಾರೆ ಎಂದು ನಾಲವಾರದ ಕೋರಿ ಸಿದ್ಧೇಶ್ವರ ಸಂಸ್ಥಾನ ಮಠದ ಶ್ರೀ ಸಿದ್ಧ ತೋಟೇಂದ್ರ ಶಿವಾಚಾರ್ಯರು ಕಳವಳ ವ್ಯಕ್ತಪಡಿಸಿದರು. 

ತಾಲೂಕಿನ ಅಳ್ಳೋಳ್ಳಿ ಗ್ರಾಮದಲ್ಲಿ ಸಾವಿರ ದೇವರ ಮಠದ ಸಂಗಮನಾಥ ದೇವರ ನೇತೃತ್ವದಲ್ಲಿ ನಡೆದ ದ್ವಿತೀಯ ಜಾತ್ರಾ ಮಹೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಕೆಲವರು ಮೊಬೈಲ್‌ಗಳಿಗೆ ಮಾರು ಹೋಗಿ ಜೀವನದಲ್ಲಿ ಮಾನಸಿಕ ನೆಮ್ಮದಿ, ಶಾಂತಿ ಕಳೆದುಕೊಂಡು ಏಕಾಂಗಿಯಾಗಿ ಅಲೆದಾಡುತ್ತಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಸಮಾಜದಲ್ಲಿ ಮಠಗಳಿಂದ ಅನ್ನ, ಅರಿವು, ದಾಸೋಹ ದೊರೆಯುತ್ತಿದೆ. ಮಠ ಮಂದಿರಗಳಿಂದ ಶಾಂತಿ, ನೆಮ್ಮದಿ ಸಿಗುತ್ತದೆ. ಧಾರ್ಮಿಕ, ಆಧ್ಯಾತ್ಮಿಕ ಜೀವನ ಪದ್ಧತಿ ರೂಡಿಸಿಕೊಳ್ಳಬೇಕು. ಜಾತ್ರೆ ಉತ್ಸವಗಳಿಂದ ಜನರಲ್ಲಿ ಜೀವನ ಸ್ಫೂರ್ತಿ ವೃದ್ಧಿಯಾಗುತ್ತದೆ ಎಂದರು. ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಮಾತನಾಡಿ, ಸ್ವಾಮೀಜಿಗಳಿಗೆ ಆಸೆ ಇರಬಾರದು. ಉತ್ತಮ ಮೌಲ್ಯವುಳ್ಳ ಆದರ್ಶ ಇರಬೇಕು. ಕೇವಲ ಮಾತನಾಡುವುದೇ ಸಾಧನೆಯಾಗದೇ ಸಾಧನೆ ಮಾಡಿ ಅದರ ಬಗ್ಗೆ ಮಾತನಾಡಬೇಕು ಎಂದು ಹೇಳಿದರು.

ಮಾಜಿ ಶಾಸಕಿ ಅರುಣಾ ಪಾಟೀಲ, ಪಾಳಾದ ಗುರುಮೂರ್ತಿ ಮಾತನಾಡಿದರು. ಸಾವಿರ ದೇವರ ಮಠದ ಸಂಗಮನಾಥ
ದೇವರು ನೇತೃತ್ವ ವಹಿಸಿದ್ದರು.  ಆನಂದ ಗುರೂಜಿ ಉಪಸ್ಥಿತಿಯಲ್ಲಿ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ದಿಗ್ಗಾಂವ ಕಂಚಗಾರ ಹಳ್ಳದ ಪೀಠಾಧಿ ಪತಿ ಮಲ್ಲಯ್ಯ ಮುತ್ಯಾ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ, ಜಿಪಂ ಸದಸ್ಯ ಶಿವರುದ್ರ ಭೀಣಿ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಚಂದ್ರಶೇಖರ ಆವಂಟಿ, ಶಾಂತಣ್ಣ ಚಾಳಿಕಾರ, ಶಿವಶರಣಪ್ಪ ಹೂಗಾರ, ಸಂಗಣ್ಣಗೌಡ ಪಾಟೀಲ, ರವಿ ಪಡ್ಲ, ಅಕ್ಕಮಹಾದೇವಿ, ಗೀರೀಶ ಭಜಂತ್ರಿ, ವೆಂಕಟೇಶ
ಕುಲಕರ್ಣಿ, ಭೀಮಶಾ ಜೀರೊಳ್ಳಿ, ಬಸವರಾಜ ಪಂಚಾಳ, ಸಾಬಣ್ಣ ಸೋಮನ್‌ ಇದ್ದರು. 

ರಥೋತ್ಸವ ಸಂಭ್ರಮ: ಸಾವಿರ ದೇವರ ಮಠದ ಸಂಗಮನಾಥ ದೇವರ ನೇತೃತ್ವದಲ್ಲಿ ದ್ವಿತೀಯ ವರ್ಷದ ರಥೋತ್ಸವ ಸಂಭ್ರಮದಿಂದ ಜರುಗಿತು. ಅಳ್ಳೋಳ್ಳಿ, ದಂಡಗುಂಡ, ಸಂಕನೂರ, ಸಾತನೂರ, ಹೊಸ್ಸುರ್‌, ಭಂಕಲಗಾ, ಅಲ್ಲೂರ್‌, ಭೀಮನಳ್ಳಿ ಹಾಗೂ ಸುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.