ಶೇ. 64.38 ಮತದಾನ : ಶಹಾಬಾದನಲ್ಲಿ ನಗರಸಭೆ ಚುನಾವಣೆ


Team Udayavani, Sep 1, 2018, 10:07 AM IST

gul-1.jpg

ಕಲಬುರಗಿ: ಜಿಲ್ಲೆಯ ಏಳು ತಾಲೂಕುಗಳ 168 ವಾರ್ಡ್‌ಗಳಿಗಾಗಿ ಶುಕ್ರವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯಲ್ಲಿ ಶೇ. 64.38 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.

ಚಿತ್ತಾಪುರ ತಾಲೂಕಿನ ಶಹಾಬಾದ ನಗರಸಭೆಯ 27 ವಾರ್ಡುಗಳಿಗಾಗಿ ನಡೆದ ಮತದಾನದಲ್ಲಿ 11,743 ಪುರುಷರು, 12,011 ಮಹಿಳೆಯರು ಹೀಗೆ ಒಟ್ಟು 23,754 ಮತದಾರರು ಮತ ಚಲಾಯಿಸಿದ್ದು, ಶೇ. 54.01 ರಷ್ಟು ಮತದಾನವಾಗಿದೆ.

ಸೇಡಂ ತಾಲೂಕಿನ ಸೇಡಂ ಪುರಸಭೆಯ 23 ವಾರ್ಡುಗಳಿಗಾಗಿ ನಡೆದ ಮತದಾನದಲ್ಲಿ 10,948 ಪುರುಷರು ಮತ್ತು 10,557 ಮಹಿಳೆಯರು ಸೇರಿದಂತೆ ಒಟ್ಟು 21,505 ಮತದಾರರು ಮತ ಚಲಾಯಿಸುವ ಮೂಲಕ ಶೇ. 67.51 ರಷ್ಟು ಮತದಾನ ದಾಖಲಿಸಿದ್ದಾರೆ. ಚಿತ್ತಾಪುರ ತಾಲೂಕಿನ ಚಿತ್ತಾಪುರ ಪುರಸಭೆಯ 23 ವಾರ್ಡುಗಳಿಗಾಗಿ ನಡೆದ ಮತದಾನದಲ್ಲಿ 8677 ಪುರುಷರು ಮತ್ತು 8959 ಮಹಿಳೆಯರು ಸೇರಿದಂತೆ ಒಟ್ಟು 17,436 ಮತದಾರರು ಮತ ಚಲಾಯಿಸಿದ್ದು, ಶೇ. 67.42 ರಷ್ಟು ಮತದಾನವಾಗಿದೆ.
 
ಆಳಂದ ತಾಲೂಕಿನ ಆಳಂದ ಪುರಸಭೆಯ 27 ವಾರ್ಡುಗಳಿಗಾಗಿ ನಡೆದ ಮತದಾನದಲ್ಲಿ 10,881 ಪುರುಷರು, 10,224 ಮಹಿಳೆಯರು ಹೀಗೆ ಒಟ್ಟು 21,105 ಮತದಾರರರು ಮತ ಚಲಾಯಿಸಿ ಶೇ. 62.52 ರಷ್ಟು ಮತದಾನವಾಗಿದೆ.

ಜೇವರ್ಗಿ ತಾಲೂಕಿನ ಜೇವರ್ಗಿ ಪುರಸಭೆಯ 23 ವಾರ್ಡುಗಳಿಗಾಗಿ ನಡೆದ ಮತದಾನದಲ್ಲಿ 8017 ಪುರುಷರು
ಹಾಗೂ 7960 ಮಹಿಳೆಯರು ಸೇರಿದಂತೆ ಒಟ್ಟು 15,977 ಮತದಾರರು ಮತ ಚಲಾಯಿಸಿದ್ದಾರೆ. ಶೇ. 71.10 ರಷ್ಟು
ಮತದಾನವಾಗಿದೆ. ಚಿಂಚೋಳಿ ತಾಲೂಕಿನ ಚಿಂಚೋಳಿ ಪುರಸಭೆಯ 23 ವಾರ್ಡುಗಳಿಗಾಗಿ ನಡೆದ ಮತದಾನದಲ್ಲಿ 5071 ಪುರುಷ ಹಾಗೂ 4984 ಮಹಿಳೆಯರು ಹಾಗೂ ಒಬ್ಬರು ಇತರರು ಹೀಗೆ ಒಟ್ಟು 10,056 ಮತದಾರರು ಮತ ಚಲಾಯಿಸಿ ಶೇ. 70.44 ರಷ್ಟು ಮತದಾನವಾಗಿದೆ.

ಅಫಜಲಪುರ ತಾಲೂಕಿನ ಅಫಜಲಪುರ ಪುರಸಭೆಯ 22 ವಾರ್ಡುಗಳಿಗಾಗಿ ನಡೆದ ಮತದಾನದಲ್ಲಿ 7054 ಪುರುಷರು ಹಾಗೂ 6527 ಮಹಿಳೆಯರು ಸೇರಿದಂತೆ ಒಟ್ಟು 13,581 ಮತದಾರರು ಮತ ಚಲಾಯಿಸಿ ಶೇ. 72.03 ರಷ್ಟು ಮತದಾನವಾಗಿದೆ.

ಜಿಲ್ಲೆಯ ಏಳು ತಾಲೂಕುಗಳಲ್ಲಿ ಒಟ್ಟು 62,391 ಪುರುಷರು ಹಾಗೂ 61,022 ಮಹಿಳೆಯರು ಹಾಗೂ ಒಬ್ಬರು ಇತರರು ಸೇರಿದಂತೆ ಒಟ್ಟು 1,23,414 ಮತದಾರರು ಮತ ಚಲಾಯಿಸಿ ಶೇ. 64.38 ರಷ್ಟು ಮತದಾನ ಮಾಡಿದ್ದಾರೆ.

ಸ್ಥಳೀಯ ಸಂಸ್ಥೆಯ ಸಂಸ್ಥೆ ಚುನಾವಣೆ ಶಾಂತಿಯುತ ಚುನಾವಣೆ ಶಾಂತಿಯು 
ಚಿತ್ತಾಪುರ: ಪಟ್ಟಣದ ಪುರಸಭೆ ಚುನಾವಣೆ ಪ್ರಯುಕ್ತ 23 ವಾರ್ಡ್‌ಗಳಿಗೆ ನಡೆದ ಮತದಾನ ಶಾಂತಿಯುತವಾಗಿದ್ದು, ಶೇ. 67.42ರಷ್ಟು ಮತದಾನವಾಗಿದೆ. ಬೆಳಗ್ಗೆ ನೀರಸ ಮತದಾನ ನಡೆದು ಮಧ್ಯಾಹ್ನದ ಹೊತ್ತಿಗೆ ಹೆಚ್ಚಿನ ಮತದಾರರು ಬಂದು ಮತದಾನ ಮಾಡಿದರು. ಮಧ್ಯಾಹ್ನ 12 ಕ್ಕೆ ಶೇ. 26.79 ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3ಕ್ಕೆ ಶೇ. 51ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 2ರಿಂದ ಮತದಾನ ಮಾಡಲು ಮತದಾರರು ಹೆಚ್ಚು ಒಲವು ತೋರಿಸಿದರು. ಚುನಾವಣೆ ಪ್ರಯುಕ್ತ 31 ಮತದಾನ ಕೇಂದ್ರಗಳನ್ನು ರಚಿಸಲಾಗಿತ್ತು. ಒಟ್ಟು 25,863 ಮತದಾರರಿದ್ದು, ಅದರಲ್ಲಿ 17436 ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. 8759 ಮಹಿಳೆಯರು, 8677 ಪುರುಷರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ ಎಂದು ತಹಶೀಲ್ದಾರ್‌ ಮಲ್ಲೇಶಾ ತಂಗಾ ತಿಳಿಸಿದ್ದಾರೆ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಹಾಗೂ ಪಕ್ಷೇತರ ಅಭ್ಯರ್ಥಿಗಳ ಕಾರ್ಯಕರ್ತರು ಮತದಾರರ ಮನೆಗಳಿಗೆ ಹೋಗಿ ಮತದಾರರನ್ನು ಕರೆ ತಂದು ಹಾಕಿಸುತ್ತಿದ್ದರು. ವೃದ್ಧರು, ಅಂಗವಿಕಲ ಮತದಾರರು ಬೇರೊಬ್ಬರ ಸಹಾಯದಿಂದ ತಳ್ಳುವ ಗಾಡಿ, ವ್ಹೀಲ್‌ ಚೇರ್‌ಗಳ ಮೂಲಕ ಬಂದು ಮತದಾನ ಮಾಡಿದರು. ಕೆಲವರು ವಾಹನಗಳಲ್ಲಿ ಬಂದು ಮತದಾನ ಮಾಡಿದರು. ಶ್ರಾವಣ ಮಾಸದ
ಶುಕ್ರವಾರ ವಿಶೇಷ ಲಕ್ಷ್ಮೀ ಪೂಜೆ ಇದ್ದಿದ್ದರಿಂದ ಮಹಿಳೆಯರು ಮಧ್ಯಾಹ್ನ ವೇಳೆಗೆ ಹೆಚ್ಚಾಗಿ ಬಂದು ಮತದಾನ ಮಾಡಿದರು.

ಪ್ರತಿಷ್ಠಿತ ವಾರ್ಡ್‌ಗಳಿರುವ 1, 2, 3, 9, 10, 12, 13, 14, 16, 20, 21, 22 ಮತಗಟ್ಟೆಯ ಹೊರಗೆ ಕಾರ್ಯಕರ್ತರ ದಂಡು ತುಂಬಿ ತುಳುಕಿತ್ತು. ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ. ಎಸ್ಪಿ ಎನ್‌. ಶಶಿಕುಮಾರ ಅವರು ಮತಗಟ್ಟೆಗಳಿಗೆ ಭೇಟಿ ನೀಡಿ ಚುನಾವಣೆ ಶಾಂತಿಯುತ ಬಗ್ಗೆ ಪರಿಶೀಲನೆ ನಡೆಸಿದರು. ಡಿವೈಎಸ್ಪಿ ಕೆ. ಬಸವರಾಜ, ಸಿಪಿಐ ಶಂಕರಗೌಡ ಪಾಟೀಲ, ಪಿಎಸ್‌ಐ ನಟರಾಜ ಲಾಡೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.