ಪಾಲಕರ ಮನವೊಲಿಕೆ-ಪ್ರೇಮಿಗಳ ಕಲ್ಯಾಣ
Team Udayavani, Sep 14, 2022, 3:11 PM IST
ಮಾದನಹಿಪ್ಪರಗಿ: ಸುಮಾರು ವರ್ಷಗಳಿಂದ ಪರಸ್ಪರ ಪ್ರೀತಿ ಸುತ್ತಿದ್ದ ಪ್ರೇಮಿಗಳ ಪಾಲಕರ ಮನವೊಲಿಸಿದ ಗ್ರಾಮದ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಸರಳವಾಗಿ ಮದುವೆ ಮಾಡಿಸಿದ ಘಟನೆ ಗ್ರಾಮದಲ್ಲಿ ನಡೆದಿದೆ.
ಬಾಗಣ್ಣ ಮಲ್ಲಪ್ಪ ಗಿದನಿ ಮತ್ತು ಅಶ್ವಿನಿ ಬಸವರಾಜ ಸಾಲಿ ಮದುವೆಯಾದವರು. ಇವರಿಬ್ಬರು ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಯುವಕ ದೂರದ ಬೆಂಗಳೂರಲ್ಲಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಇವರಿಬ್ಬರ ಪ್ರೇಮಕ್ಕೆ ಮೊಬೈಲ್ ಸೇತುವೆಯಾಗಿತ್ತು. ಮದುವೆ ಜಾತಿ ಅಡ್ಡ ಬಂದಿದ್ದರಿಂದ ಇಬ್ಬರಲ್ಲೂ ಆತಂಕ ಮನೆ ಮಾಡಿತ್ತು. ಈ ವೇಳೆ ಪ್ರೇಮಿ ಯುವತಿಯನ್ನು ಬೆಂಗಳೂರಿಗೆ ಬರಲು ತಿಳಿಸಿದ್ದ. ಶುಕ್ರವಾರ ಸಂಜೆ ಯುವತಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಳು. ಪಾಲಕರಿಗೆ ಈ ವಿಷಯ ತಿಳಿದು ಪೊಲೀಸ್ ಠಾಣೆಗೆ ದೂರು ಕೊಡಲು ಹೋಗಿದ್ದರು. ಆಗ ಸ್ಥಳಿಯರು ವಾಪಸ್ ಕರೆಯಿಸಿ ಬೆಂಗಳೂರಿನಲ್ಲಿದ್ದ ಯವಕನಿಗೆ ಕರೆ ಮಾಡಿ, ಹುಡುಗಿಯನ್ನು ಕರೆದುಕೊಂಡು ಬನ್ನಿ, ನಿಮ್ಮಿಬ್ಬರ ಮದುವೆ ಮಾಡಿಸಲಾಗುವುದು ಎಂದು ತಿಳಿಸಿದ್ದರು.
ಅದೇ ರೀತಿ ಸೋಮವಾರ ಇಬ್ಬರು ಗ್ರಾಮಕ್ಕೆ ಬಂದಾಗ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರುಗಳು ಸೇರಿ ಎರಡು ಕಡೆಯ ಪಾಲಕರನ್ನು ಮತ್ತು ಸಮುದಾಯದವರನ್ನು ಕೂಡಿಸಿ ಮಾತುಕತೆ ನಡೆಸಿದರು. ನಂತರ ಇಬ್ಬರಿಗೂ ಮದುವೆ ಮಾಡಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಓದಲಿಂಗ ಸಿ.ಕೆ ಮದುವೆ ಪ್ರಮಾಣ ಪತ್ರ ನೀಡಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಪ್ಪ ಕೋಳಸೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಶೈಲ ಸಾಲಿ, ಧರ್ಮಣ್ಣ ಕೌಲಗಿ, ಶಿವಲಿಂಗಪ್ಪ ಜಮಾದಾರ, ಮುಖಂಡರಾದ ಮಲ್ಲಿನಾಥ ದುಧಗಿ, ಶಿವಯೋಗಿ ಕಾರಬಾರಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ