ಹೆಲ್ಮೆಟ್‌ ಧರಿಸಲು ಮನವೊಲಿಕೆ


Team Udayavani, Feb 3, 2017, 12:54 PM IST

gul2.jpg

ಕಲಬುರಗಿ: ದ್ವಿಚಕ್ರವಾಹನ ಸವಾರರಿಗೆ ಸುಪ್ರಿಂಕೋರ್ಟ್‌ ಸೂಚನೆಯಂತೆ ಹೆಲ್ಮೆಟ್‌ನ್ನು ಎರಡ್ಮೂರು ದಿನಗಳಲ್ಲಿ ಕಡ್ಡಾಯ ಮಾಡಲಾಗುತ್ತಿರುವುದರಿಂದ ನಗರದಲ್ಲಿನ ದ್ವಿಚಕ್ರವಾಹನ ಸವಾರರಿಗೆ ವಿದ್ಯಾರ್ಥಿಗಳಿಂದ ಗುಲಾಬಿ ಹೂ ಕೊಡಿಸಿ ಜಾಗೃತಿ ಮೂಡಿಸಲಾಯಿತುಎಂದು ಹೆಚ್ಚುವರಿ ಎಸ್‌ಪಿ ಜಯಪ್ರಕಾಶ  ತಿಳಿಸಿದರು. 

ನಗರದ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ದ್ವಿಚಕ್ರವಾಹನ ಸವಾರರಿಗೆ ಸಂಚಾರಿ ಪೊಲೀಸ್‌ರ ವತಿಯಿಂದ ದ್ವಿಚಕ್ರವಾಹನ ಸವಾರರಲ್ಲಿ ಹೆಲ್ಮೆಟ್‌ ಹಾಗೂ ಸಂಚಾರಿ ನಿಯಮಗಳ ಕುರಿತ ಜಾಗೃತಿ ಮೂಡಿಸಲು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದ್ವಿಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸದಿದ್ದರೆ ಮುಂದಿನ ದಿನಗಳಲ್ಲಿ ದಂಡ ವಿಧಿಸಲಾಗುವುದು. ಇದಕ್ಕೂ ಮುನ್ನ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಮಾಡಲಾಗುತ್ತಿದೆ ಎಂದರು.  ಸಂಚಾರಿ ಠಾಣೆಯ ಪಿಐ ಶಾಂತಿನಾಥ, ಪಿಎಸ್‌ಐ ಶೌಕತ ಅಲಿ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿದ್ದರು. 

ವಾಡಿ: ಹೆಲ್ಮೆಟ್‌ ಧರಿಸಿ ಕಾನೂನು ಪಾಲನೆ ಮಾಡಿದ ದ್ವಿಚಕ್ರ ವಾಹನ ಸವಾರರಿಗೆ ಸಿಹಿ ಜತೆಗೆ ಗುಲಾಬಿ ಹೂಕೊಟ್ಟು ಗೌರವಿಸುವ ಮೂಲಕ ಪೊಲೀಸರು ಹೆಲ್ಮೆಟ್‌ ಕಡ್ಡಾಯ ಜಾಗೃತಿ ಅಭಿಯಾನಕ್ಕೆ ಲನೆ ನೀಡಿದರು. ಪಟ್ಟಣದ ಬಳಿರಾಮ ಚೌಕ್‌ ವೃತ್ತದಲ್ಲಿ ಬೈಕ್‌ ಸವಾರರನ್ನು ತಡೆದು ಹೆಲ್ಮೆಟ್‌ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಕೋರಿದ ಶಹಾಬಾದ ಡಿವೈಎಸ್‌ಪಿ ಮಹೇಶ ಮೇಘಣ್ಣವರ, ಎಸ್‌ಪಿ ಶಶಿಕುಮಾರ ಆದೇಶದಂತೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

ಜಿಲ್ಲೆಯಲ್ಲಿ ಬೈಕ್‌ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ವರ್ಷವಿಡಿ ಜಿಲ್ಲೆಯಾಧ್ಯಂತ ಸಂಭವಿಸಿದ ರಸ್ತೆ ಅಪಘಾತದ ಸಾವು-ನೋವುಗಳಲ್ಲಿ ಅತಿ ಹೆಚ್ಚು ಅಸುರಕ್ಷಿತ ಬೈಕ್‌ ಚಾಲನೆಯಿಂದ ಘಟಿಸಿರುವುದು ದಾಖಲೆಗಳಿಂದ ಸಾಬೀತಾಗಿದೆ. ಅಪಘಾತಗಳನ್ನು ತಡೆಗಟ್ಟಲು ಹೆಲ್ಮೆಟ್‌ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.

ಸ್ಥಳೀಯ ಠಾಣೆ ಪಿಎಸ್‌ಐ ನಟರಾಜ ಲಾಡೆ ಮಾತನಾಡಿ, ಹೆಲ್ಮೆಟ್‌ ಧರಿಸುವುದರಿಂದ ಅಪಘಾತ ಸಂದರ್ಭದಲ್ಲಿ ಸಂಭವಿಸಬಹುದಾದ ಜೀವ ಹಾನಿ ತಡೆಗಟ್ಟಬಹುದು ಎಂದರು. ಎಎಸ್‌ಐ ಮನೋಹರ ಭೈಯ್ನಾ, ಸಿಬ್ಬಂದಿ ದತ್ತು ಜಾನೆ, ಗುಂಡಪ್ಪ ಕೊಗಾನೂರ, ಯಾಧವ ರಾಠೊಡ ಹಾಗೂ ಮತ್ತಿತರರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.