ಡ್ರೋಣ್ ಮೂಲಕ ಕೀಟನಾಶಕ ಸಿಂಪಡಣೆ: ಕೆಕೆಆರ್ ಡಿಬಿಯಿಂದ ಪ್ರಾಯೋಗಿಕ ಜಾರಿ
Team Udayavani, Oct 23, 2021, 6:34 PM IST
ಕಲಬುರಗಿ: ರೈತರ ಹೊಲಗಳಿಗೆ ಇಸ್ರೇಲ್ ಮಾದರಿಯಲ್ಲಿ ಡ್ರೋಣ್ ಮೂಲಕ ಕೀಟನಾಶಕ ಸಿಂಪಡಿಸುವ ಯೋಜನೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಪ್ರಾಯೋಗಿಕವಾಗಿ ಜಾರಿ ತರಲು ಮುಂದಾಗಲಾಗಿದೆ ಎಂದು ಮಂಡಳಿಯ ಅಧ್ಯಕ್ಷರಾಗಿರುವ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಹೇಳಿದರು.
ನಗರದ ಬೆಣ್ಣೂರು ಕಲ್ಯಾಣ ಮಂಟಪದಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರದ ಒಂಭತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎರಡು ಸಾವಿರ ರೈತರಿಗೆ ಎರಡು ಕೋ.ರೂ ಬಡ್ಡಿ ರಹಿತ ಬೆಳೆಸಾಲ ವಿತರಿಸಿ ಮಾತನಾಡಿದರು.
ಮಂಡಳಿ ವ್ಯಾಪ್ತಿಯ ಏಳು ಜಿಲ್ಲೆಗಳ ತಲಾ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಡ್ರೋಣ ಮೂಲಕ ಕೀಟನಾಶಕ ಸಿಂಪಡಿಸುವ ಯೋಜನೆಯೊಂದನ್ನು ಜಾರಿಗೆ ತರಲಾಗುತ್ತಿದೆ. ಇದು ಯಶಸ್ವಿ ಯಾದಲ್ಲಿ ಉಳಿದೆಡೆ ವಿಸ್ತರಿಸಲಾಗುವುದು ಎಂದು ಅಪ್ಪುಗೌಡ ವಿವರಿಸಿದರು.
ಅದೇ ರೀತಿ ಕಲಬುರಗಿ ದಕ್ಷಿಣ ಮತಕ್ಷೇತ್ರದ 30 ಹಳ್ಳಿಗಳಲ್ಲಿ 200 ಕೋ.ರೂ ವೆಚ್ಚದಲ್ಲಿ 11 ಕೆರೆಗಳನ್ನು ಬೆಣ್ಣೆ ತೋರಾ ಜಲಾಶಯದಿಂದ ನೀರು ಹರಿಸಿ ಭರ್ತಿ ಮಾಡುವ ಹಾಗೂ ರೈತರ ಹೊಲಗಳಿಗೆ ನೀರುಣಿಸುವ ಮಾದರಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆಯಲ್ಲದೇ ಈಗಾಗಲೇ ಈ ಯೋಜನೆಗೆ ಚಾಲನೆ ನೀಡಲಾಗಿದೆ. ಅದೇ ರೀತಿ ಎಂಎಸ್ಕೆ ಮಿಲ್ ಪ್ರದೇಶದಲ್ಲಿ 30 ಕೋ.ರೂ ವೆಚ್ಚದಲ್ಲಿ ಎರಡು ಎಕರೆ ವಿಸ್ತೀರ್ಣ ದಲ್ಲಿ ಸುಸಜ್ಜಿತ ತರಕಾರಿ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ ಎಂದು ನೆರೆದ ರೈತ ಸಮೂಹಕ್ಕೆ ತಿಳಿ ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹತ್ತಾರು ಯೋಜನೆಗಳನ್ನು ರೂಪಿಸಿದ್ದಾರೆ. ಪ್ರಧಾಮಂತ್ರಿ ಕಿಸಾನ ಸಮ್ಮಾನ ನಿಧಿಯಡಿ ನೇರವಾಗಿ ವರ್ಷಕ್ಕೆ ರೈತರ ಖಾತೆ ಗೆ ಆರು ಸಾವಿರ ಹಾಗೂ ರಾಜ್ಯ ಸರ್ಕಾರದಿಂದ ಆರು ಸಾವಿರ ಜಮಾ ಮಾಡಲಾಗುತ್ತಿದೆ. ಅದೇ ರೀತಿ ಬಸವರಾಜ ಬೊಮ್ಮಾಯಿ ಸಿಎಂ ಆದ ತಕ್ಷಣ ರೈತರ ಮಕ್ಕಳಿಗೆ ಶಿಷ್ಯ ವೇತನ ಜಾರಿ ಯೋಜನೆ ಜಾರಿ ತರಲಾಗಿದೆ. ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಅಭಿವೃದ್ಧಿ ಗೆ ಹತ್ತಾರು ಯೋಜನೆಗಳನ್ನು ರೂಪಿಸಿದೆ ಎಂದರು.
ಬೆಳೆಸಾಲ ಹತ್ತು ಪ್ರಮಾಣ ಯತ್ನ: ಬೇರೆ ಜಿಲ್ಲೆಗಳಲ್ಲಿ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಸಾಲ ಸಿಕ್ತಾ ಇದೆ. ಹೀಗಾಗಿ ಜಿಲ್ಲೆಯಲ್ಲೂ ಈಗ ನೀಡಲಾಗುತ್ತಿರುವ ಸಾಲದ ಪ್ರಮಾಣ ಹತ್ತು ಪಟ್ಟು ದೊರಕುವಂತಾಗಲು ತಾವೂ ಯತ್ನಿಸುವುದಾಗಿ ದತ್ತಾತ್ರೇಯ ಪಾಟೀಲ್ ರೇವೂರ ಹೇಳಿದರು.
ರೈತರಿಗೆ ಹೆಚ್ಚಿನ ಪ್ರಮಾಣದ ಸಾಲ ದೊರಬೇಕೆಂದರೆ ಬ್ಯಾಂಕ್ ಪುನಶ್ಚೇತನ ಗೊಳ್ಳಬೇಕು. ಹೀಗಾಗಿ ಪಡೆದ ಸಾಲ ಸಕಾಲಕ್ಕೆ ಮರುಪಾವತಿಸಬೇಕೆಂದರು.
ಈ ಹಿಂದೆ ರೈತರಿಗೆ ಸಾಲವನ್ನು ಅತ್ಯಂತ ಕನಿಷ್ಟ ( ಭೀಕ್ಷೆ ರೂಪದಲ್ಲಿ) ವಾಗಿ ನೀಡಲಾಗುತ್ತಿತ್ತು. ಈಗ ಹೆಚ್ಚಿಗೆ ನೀಡಲಾಗುತ್ತಿದೆ. ಇದು ಹೆಚ್ಚಿಸಲಾಗುತ್ಯಿದೆ. ಇದು ತಮ್ಮದು ರೈತಪರ ಎಂಬುದನ್ನು ನಿರೂಪಿಸುತ್ತದೆ ಎಂದರು.
ಉಪಾಧ್ಯಕ್ಷ ಸುರೇಶ ಸಜ್ಜನ್ ಮಾತನಾಡಿ, ಬ್ಯಾಂಕ್ ಈಗ ಸುಧಾರಣೆಯತ್ತ ಹೆಜ್ಜೆ ಹಾಕುತ್ತಿದೆ. ಹೀಗಾಗಿ ರೈತರಲ್ಲಿ ಮಂದಹಾಸ ಮೂಡಿದೆ. ಮುಂದಿನ ದಿನಗಳಲ್ಲಿ ಹಿರಿಯ ನಿರ್ದೇಶಕರಾಗಿರುವ ಶರಣಬಸಪ್ಪ ಪಾಟೀಲ್ ಅಷ್ಢಗಾ ಅಧ್ಯಕ್ಷರಾಗಲಿದ್ದಾರೆ ಎಂದರು.
ಯುಕೆಪಿ ಕಾಡಾದ ಆಡಳಿತಾಧಿಕಾರಿ ಶರಣಬಸಪ್ಪ ಬೆಣ್ಣೂರು ಮಾತನಾಡಿ, ಸಹಕಾರಿ ಕ್ಷೇತ್ರದ ಬಲವರ್ಧನೆಯಲ್ಲಿ ಪ್ರಮಾಣಿಕತೆಯೇ ಮುಖ್ಯ ವಾಗಿದೆ. ಹೀಗಾಗಿ ಪಡೆದ ಸಾಲ ಸಕಾಲದಲ್ಲಿ ಮರು ಪಾವತಿಸುವುದು ಮುಖ್ಯವಾಗಿದೆ ಎಂದರು.
ಪ್ರಾಸ್ತಾವಿಕ ಮಾತನಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶರಣಬಸಪ್ಪ ಪಾಟೀಲ್ ಅಷ್ಠಗಾ ಮಾತನಾಡಿ, ರೈತರಿಗೆ ಸಾಲ ನೀಡದಿರುವ ಮಟ್ಟಿಗೆ ತಲುಪಿದ್ದ ಬ್ಯಾಂಕ್ ಪುನಶ್ಚೇತನ ಗೊಳ್ಳಲು ಹಿಂದಿನ ಸಿಎಂ ಬಿ. ಎಸ್. ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿ ಕಾರಣವಾಗಿದೆ. ಮಧ್ಯಾಮವಧಿ ಸಾಲ ಮನ್ನಾ ಮಾಡಿರುವುದು ಹಾಗೂ 10 ಕೋ. ರೂ ಷೇರು ನೀಡಿರುವುದು ಜತೆಗೆ ಪ್ರಮುಖ ವಾಗಿ 200 ಕೋ ರೂ ಅಪೆಕ್ಸ್ ದಿಂದ ಸಾಲ ದೊರಕಿಸುವಂತೆ ಮಾಡಿರುವುದೇ ಕಾರಣಗಳಾಗಿವೆ ಎಂದು ವಿವರಿಸಿದರು. ಮತ್ತೋರ್ವ ನಿರ್ದೇಶಕ ಅಶೋಕ ಸಾವಳೇಶ್ವರ ಸಹ ಮಾತನಾಡಿದರು.
ಡಿಸಿಸಿ ಬ್ಯಾಂಕ್ ಎಂಡಿ ಚಿದಾನಂದ ನಿಂಬಾಳ, ಜನರಲ್ ಮ್ಯಾನೇಜರ ಮುತ್ತುರಾಜ, ತಹಶಿಲ್ದಾರ ಪ್ರಕಾಶ ಕುದುರೆ, ಸಹಾಯಕ ಕೃಷಿ ನಿರ್ದೇಶಕ ಚಂದರಕಾಂತ ಜೀವಣಗಿ, ಪ್ರಮುಖರಾದ ರಾಜೇಂದ್ರ ಕರೇಕಲ್, ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರುಗಳಾದ ಲಿಂಗರಾಜ ಧುಳಗೊಂಡ, ಸಂಗಮೇಶ್ವರ ಚೋರಗಸ್ತಿ, ಶಿವರಾಯ ಶಿವಮೂರ್ತಿ, ಶಿವರಾಜ ಎಸ್ ಸಿರಸಗಿ ಕೋಟನೂರ, ಪ್ರಭುಲಿಂಗ ಮೂಲಗೆ, ಗಂಗಾಧರ ಪೊಲೀಸ್ ಪಾಟೀಲ್, ಲಿಂಗಣಗೌಡ ಪಾಟೀಲ್, ಬ್ಯಾಂಕ್ ನ ಅಧಿಕಾರಿ ಗಳಾದ ಬಸವರಾಜ ಕಲ್ಲೂರ, ರುದ್ರಗೌಡ, ಸದಲಾಪುರ, ಪ್ರವೀಣ್, ಮಲ್ಲಿಕಾರ್ಜುನ, ಗಣಪುರ, ಪೂಜಾರಿ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
PU Exam ನಕಲು ಮಾಡಲು ಸಹಕಾರ ನೀಡಿಲ್ಲವೆಂದು ಪೇದೆ ಮೇಲೆಯೇ ಹಲ್ಲೆ!
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು