ದೈಹಿಕ-ಮಾನಸಿಕ ಆರೋಗ್ಯ ಮುಖ್ಯ
Team Udayavani, Oct 19, 2021, 12:41 PM IST
ಚಿಂಚೋಳಿ: ಪ್ರತಿಯೊಬ್ಬರಿಗೂ ದೈಹಿಕ ವ್ಯಾಯಾಮ ಮತ್ತು ಮಾನಸಿಕ ಆರೋಗ್ಯ ಮುಖ್ಯವಾಗಿದ್ದು, ಜೀವನಶೈಲಿ ಬದಲಾದರೂ ಊಟ ಮತ್ತು ನಿದ್ರೆ ಅವಶ್ಯವಾಗಿದೆ ಎಂದು ಮಾನಸಿಕ ಆರೋಗ್ಯ ತಜ್ಞೆ ಡಾ| ಸುಧಾರಾಣಿ ಹೇಳಿದರು.
ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘದ ಆರೋಗ್ಯ ಇಲಾಖೆ, ತಾಪಂ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
2015-16 ಸಾಲಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಸಮೀಕ್ಷೆ ಪ್ರಕಾರ ಶೇ. 10ರಷ್ಟು ಜನರು ಮಾನಸಿಕ ಕಾಯಿಲೆಗೆ ಒಳಗಾಗಿದ್ದಾರೆ. ಪ್ರತಿ 100 ಜನ ಮಾನಸಿಕ ರೋಗಿಗಳಲ್ಲಿ ಕೇವಲ 15 ಜನ ಮಾತ್ರ ಚಿಕಿತ್ಸೆ ಪಡೆಯುತ್ತಾರೆ. ಇನ್ನುಳಿದ ಜನ ಹಲವಾರು ಕಾರಣಗಳಿಂದ ಚಿಕಿತ್ಸೆಯಿಂದ ವಂಚಿತರಾಗುತ್ತಾರೆ ಎಂದರು.
ಕಲಬುರಗಿ ಆಸ್ಪತ್ರೆಯ ಮನರೋಗ ತಜ್ಞ ಡಾ| ಇರ್ಫಾನ್ ಮಾತನಾಡಿ, ಮದ್ಯಪಾನ ಸೇವಿಸುವುದು. ಇದರಿಂದ ನಶೆಯಾಗುವುದು ಅತಿದೊಡ್ಡ ಮಾನಸಿಕ ರೋಗವಾಗಿದೆ. ಕೋವಿಡ್ ಹೆಚ್ಚಾದಂತೆ ಜನರಲ್ಲಿ ಓಸಿಡಿ ಬಹಳಷ್ಟು ಹೆಚ್ಚಾಗುತ್ತಿದೆ. ಗಂಭೀರ ಸ್ವರೂಪದ ಮಾನಸಿಕ ಕಾಯಿಲೆಗಳೆಂದರೆ ವಿಚಿತ್ರ ವರ್ತನೆ, ಮಂಕಾಗುವುದು, ಅತಿ ದುಃಖ, ಅತಿ ಸಂಶಯ, ಆತ್ಮಹತ್ಯೆ ಆಲೋಚನೆ, ಅತಿ ಸಂತೋಷ ಮತ್ತು ಜಂಬ ಕೊಚ್ಚಿಕೊಳ್ಳುವುದು, ಬೇರೆಯವರಿಗೆ ಕಾಣಿಸದ, ಕೇಳಿಸದ ದೃಶ್ಯ-ಧ್ವನಿಗಳು ಕಾಣಿಸುವುದು ಸೇರಿದಂತೆ ಇನ್ನಿತರ ಕಾರಣಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಮಹ್ಮದ್ ಗಫಾರ್ ಅಹೆಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ| ಜಗದೀಶ್ಚಂದ್ರ ಬುಳ್ಳ, ಡಾ| ಬಾಲಾಜಿ ಪಾಟೀಲ, ಡಾ| ಅಜೀತ್ ಪಾಟೀಲ, ಡಾ| ಸೈಯದ್ ಲತೀಫ್, ಎಪಿಪಿ ಶಾಂತಕುಮಾರ ಜಿ. ಪಾಟೀಲ, ಬಾಬಾಸಾಬ್ ಕಿಣ್ಣಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸುದರ್ಶನ ಬಿರಾದಾರ, ಎಇಇ ಮಹಮ್ಮದ್ ಅಹೆಮದ್ ಹುಸೇನ, ಪ್ರಕಾಶ ಕುಲಕರ್ಣಿ, ಪಿಡಿಒ ಮತ್ತು ಆರೋಗ್ಯ ಸಿಬ್ಬಂದಿ ಭಾಗವಹಿಸಿದ್ದರು. ಡಾ| ಸಂತೋಷಮ್ಮ ಸ್ವಾಗತಿಸಿದರು, ಡಾ| ಜಗದೀಶಚಂದ್ರ ಬುಳ್ಳ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ