ಮನೆ-ಮನೆಗೂ ಬರಲಿದೆ ಪೈಪ್‌ಲೈನ್‌ ಗ್ಯಾಸ್‌


Team Udayavani, Sep 21, 2022, 1:32 PM IST

2gas

ಕಲಬುರಗಿ: ವೇಗವಾಗಿ ಬೆಳೆಯುತ್ತಿರುವ ಮಹಾ ನಗರದಲ್ಲಿ ನಳದ ನೀರು ಮನೆಗೆ ಬರುವ ಹಾಗೆ ಮುಂದಿನ ದಿನಗಳಲ್ಲಿ ಮನೆ-ಮನೆಗೂ ಪೈಪ್‌ಲೈನ್‌ ಮೂಲಕ ನೈಸರ್ಗಿಕ ಆಧಾರಿತ ಅನಿಲ (ಗ್ಯಾಸ್‌) ಬರಲಿದೆ. ಈ ನಿಟ್ಟಿನಲ್ಲಿ “ಎಜಿ’ ಮತ್ತು “ಪಿ’ ಪ್ರಥಮ ಕಂಪನಿಯು ಕಾರ್ಯೋನ್ಮುಖವಾಗಿದೆ. ಮನೆಗಳಿಗೆ ನೈಸರ್ಗಿಕ ಆಧಾರಿತ (ಪರಿಸರ ಸ್ನೇಹಿ) ಗ್ಯಾಸ್‌ ಪೂರೈಕೆ ನಿಟ್ಟಿನಲ್ಲಿ ಮೂರು ತಿಂಗಳೊಳಗೆ ಪೈಪ್‌ಲೈನ್‌ ಕಾರ್ಯ ಪೂರ್ಣಗೊಳಿಸಲು ಯೋಜನೆ ಹೊಂದಿ ಕಾರ್ಯಪ್ರವೃತ್ತ ಹೊಂದಲಾಗಿದೆ ಎಂದು “ಎಜಿ’ ಮತ್ತು “ಪಿ’ ಪ್ರಥಮ್‌ ಕಂಪನಿಯ ಕ್ಲಸ್ಟರ್‌ ಮಾರುಕಟ್ಟೆ ಮುಖ್ಯಸ್ಥ ದುಷ್ಯಂತ ವರಂದಾಗಿ, ಪ್ರಾದೇಶಿಕ ಮುಖ್ಯಸ್ಥ ದೇಬಾಶಿಶ್‌ ಚಟ್ಟೋಪಾಧ್ಯಾಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೂರು ತಿಂಗಳ ಅವಧಿಯೊಳಗೆ ಪೈಪ್‌ಲೈನ್‌ ಕಾಮಗಾರಿ ಪೂರ್ಣಗೊಳಿಸುವುದರ ಜತೆಗೆ 17ಸಾವಿರ ನೋಂದಣಿ ಮಾಡುವ ಗುರಿ ಹೊಂದಲಾಗಿದೆ. ಪ್ರಮುಖವಾಗಿ ಈ ನೈಸರ್ಗಿಕ ಅನಿಲದಿಂದ ಸಾಕಷ್ಟು ಉಳಿತಾಯ, ಜತೆಗೆ ಪರಿಸರ ಸ್ನೇಹಿಯಾಗಿರುವುದರಿಂದ ಈಗಾಗಲೇ ಜಾರಿಯಾದ ನಗರದಲ್ಲಿ ಜನಮನ್ನಣೆ ಗಳಿಸಿದೆ ಎಂದು ವಿವರಿಸಿದರು.

ಗೃಹ ಬಳಕೆ, ವಾಣಿಜ್ಯ ವ್ಯವಹಾರಗಳಿಗೆ ಮತ್ತು ಕೈಗಾರಿಕೆಗಳಿಗೆ ಪೈಪ್‌ಲೈನ್‌ ಮೂಲಕ ನೈಸರ್ಗಿಕ ಗ್ಯಾಸ್‌ ಮತ್ತು ವಾಹನಗಳಲ್ಲಿ ಬಳಸಲು ನೈಸರ್ಗಿಕ ಅನಿಲ (ಅಓಉ) ವನ್ನು ಪ್ರತ್ಯೇಕವಾಗಿ ಪೂರೈಸಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿಯಿಂದ ನೀಡಲಾದ ಪರವಾನಗಿ ಹಾಗೂ ಇತರ ಸವಲತ್ತುಗಳನ್ನು ನೀಡಲು ಕಂಪನಿ ಆಸಕ್ತಿ ಹೊಂದಿದೆ ಎಂದು ತಿಳಿಸಿದರು.

ಅನಿಲ ವಾಹನಗಳನ್ನು ಹೊಂದಿದ್ದಲ್ಲಿ 30ರಿಂದ 50 ಸಾವಿರ ರೂ. ಉಳಿತಾಯವಾಗುತ್ತದೆ. ಒಟ್ಟಾರೆ ಶೇ. 30ರಷ್ಟು ಉಳಿತಾಯವಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ವ್ಯಾಪಾರ ವಿಸ್ತರಣೆ ಕಾರ್ಯತಂತ್ರದ ಭಾಗವಾಗಿ “ಎಜಿ ಆ್ಯಂಡ್‌ ಪಿ’ ಪ್ರಥಮ ವಿಜಯಪುರ ಜಿಲ್ಲೆಯಲ್ಲಿ ನೈಸರ್ಗಿಕ ಅನಿಲದ ಪೂರೈಕೆ ಮತ್ತು ಬೇಡಿಕೆಯ ಅಂತರ ಕಡಿಮೆ ಮಾಡಲು ವಿಜಯಪುರ ನಗರದ ಬಳಿ ಎಲ್‌ಸಿ ಎನ್‌ಜಿ ಸ್ಟೇಷನ್‌ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಗೃಹ ಬಳಕೆ ಅನಿಲ ವಿತರಣೆ ಮತ್ತು ಸಿಎನ್‌ಜಿ ಲಭ್ಯತೆಯನ್ನು ಪರಿಣಾಮಕಾರಿಯಾಗಿಸಲು ಸ್ಟೇಷನ್‌ ಸ್ಥಾಪಿಸಲಾಗುತ್ತಿದೆ. ಇದರಿಂದ ನೈಸರ್ಗಿಕ ಆಧಾರಿತ ಅನಿಲ ಜನತೆಗೆ ದೊರೆಯಲಿದೆ ಎಂದರು.

ವಿಜಯಪುರ ಎಲ್‌ಸಿಎನ್‌ಜಿ ಸ್ಟೇಷನ್‌ ಮತ್ತು ಕಲಬುರಗಿ ಸ್ಟೀಲ್‌ ಪೈಪ್‌ಲೈನ್‌ ಸಂಪರ್ಕದ ನಿರ್ಮಾಣ ಯೋಜನೆ ಕಲಬುರಗಿ ಮತ್ತು ವಿಜಯಪುರದ ಜನರಿಗೆ ತಮ್ಮ ಇಂಧನ ಬಿಲ್‌ನ್ನು ದುಬಾರಿ ಪೆಟ್ರೋಲ್‌ಗಿಂತ ಶೇ. 30ರಷ್ಟರ ವರೆಗೆ ಕಡಿಮೆ ಮಾಡುವುದಲ್ಲದೇ ಮತ್ತು ಎಲ್‌ಪಿಜಿ ಸಿಲಿಂಡರ್‌ಗಿಂತ ಅಡುಗೆ ಇಂಧನದಲ್ಲಿ ಶೇ. 20ರ ವರೆಗೆ ಉಳಿತಾಯವಾಗುತ್ತದೆ ಎಂದು ಪುನರುಚ್ಚರಿಸಿದರು.

ಎಜಿ ಮತ್ತು ಪಿ ಪ್ರಥಮ್‌ ಕಂಪನಿಯ ಪೈಪ್‌ಲೈನ್‌ ಮುಖಾಂತರದ ಅನಿಲ ಪೂರೈಕೆಯಿಂದ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ದೊರಕಲಿದೆ. ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಪ್ರಮುಖವಾಗಿ ನೇರ ಹಾಗೂ ಪರೋಕ್ಷವಾಗಿ ಸಹಸ್ರಾರು ಜನರಿಗೆ ಉದ್ಯೋಗ ದೊರಕಲಿದೆ. ಎಜಿ ಮತ್ತು ಪ್ರಥಮ್‌ 2027ರ ವೇಳೆಗೆ ಕರ್ನಾಟಕದಲ್ಲಿ 5ಸಾವಿರ ಕೋ. ರೂ ಹೂಡಿಕೆಯೊಂದಿಗೆ 6 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಲಿದೆ. ದುಷ್ಯಂತ ವರಂದಾನಿ, ಕ್ಲಸ್ಟರ್ಮಾರುಕಟ್ಟೆ ಮುಖ್ಯಸ್ಥ , ಎಜಿ ಮತ್ತು ಪಿ ಪ್ರಥಮ್ಕಂಪನಿ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.