ಯೋಜನೆ ಲಾಭ ಅರ್ಹರಿಗೆ ತಲುಪಿಸಲು ಯತ್ನ
Team Udayavani, Aug 19, 2020, 5:29 PM IST
ಕಲಬುರಗಿ: ಜಿಪಂನಿಂದ ಸಾಕಷ್ಟು ಯೋಜನೆಗಳಿದ್ದು, ಅವುಗಳನ್ನೆಲ್ಲ ಅರ್ಹರಿಗೆ ತಲುಪಿಸುವ ನಿಟ್ಟಿನ ಜತೆಗೆ ಮುಂದಿನ ದಿನಗಳಲ್ಲಿ ವಸತಿ ನಿಲಯಗಳು ಪ್ರಾರಂಭವಾದಲ್ಲಿ ಪ್ರವೇಶಾತಿ ಬಯಸುವ ಎಲ್ಲ ವಿದ್ಯಾರ್ಥಿಗಳು ಪ್ರವೇಶ ಕಲ್ಪಿಸಲು ಮುಂದಾಗಲಾಗುವುದು ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ ಪಾಟೀಲ್ ಹೇಳಿದರು.
ಇಲ್ಲಿನ ಜಿಪಂ ನೂತನ ಸಭಾಂಗಣದಲ್ಲಿರುವ ಸ್ಥಾಯಿ ಸಮಿತಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಅವರು, ಕೋವಿಡ್ ದಿಂದ ಆರ್ಥಿಕ ಅನುದಾನದ ಕೊರತೆಯಿಂದ ಎಲ್ಲರಿಗೂ ಯೋಜನೆಗಳು ತಲುಪಲು ಸಾಧ್ಯವಾಗದಿದ್ದರೂ ಇರುವ ಯೋಜನೆಗಳ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮೊದಲು ಆದ್ಯತೆ ನೀಡಲಾಗುವುದು ಎಂದರು.
ಈ ವರ್ಷ ಕೋವಿಡ್ ದಿಂದ ಶಾಲಾ-ಕಾಲೇಜುಗಳೆಲ್ಲ ಬಂದ್ ಇರುವುದರಿಂದ ಎಲ್ಲ ವಸತಿ ನಿಲಯಗಳೆಲ್ಲ ಬಂದ್ ಆಗಿವೆ. ಮುಂದಿನ ದಿನಗಳಲ್ಲಿ ಆರಂಭವಾದಲ್ಲಿ ವಸತಿ ನಿಲಯ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆಲ್ಲ ಅವಕಾಶ ಕಲ್ಪಿಸಲಾಗುವುದು. ಒಬ್ಬ ವಿದ್ಯಾರ್ಥಿಯೂ ಹೊರಗುಳಿಯದಂತೆ ನಿಗಾವಹಿಸಲಾಗುವುದು ಎಂದರು.
ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಪಂ ವಿಪಕ್ಷ ನಾಯಕ ಶಿವಾನಂದ ಪಾಟೀಲ್ ಮರತೂರ, ಸದಸ್ಯರಾದ ಅರುಣ ಪಾಟೀಲ್, ಹರ್ಷಾನಂದ ಗುತ್ತೇದಾರ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಸೇರಿದಂತೆ ಮುಂತಾದವರು ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ