ಬೇಸಿಗೆಯಲ್ಲಿ ವರವಾದ ಪ್ಲಾಸ್ಟಿಕ್‌ ಹೊದಿಕೆ ಕೆರೆ


Team Udayavani, Mar 1, 2022, 11:14 AM IST

12pools

ಆಳಂದ: ಬೇಸಿಗೆಯಲ್ಲಿ ತೋಟಗಾರಿಕೆ ಬೆಳೆ ಉತ್ತೇಜಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಮೂಲಕ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್‌ ಯೋಜನೆ (ಎನ್‌ ಎಚ್‌ಎಂ), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‌ ಕೆವೈ) ಅಡಿ ಜಿಲ್ಲೆಯ ಆಯ್ದ ರೈತರ ಹೊಲಗಳಲ್ಲಿ ಸಮುದಾಯ ಕೃಷಿ ಹೂಂಡ ಅಥವಾ ಸಮುದಾಯ ಕೆರೆ ನಿರ್ಮಾಣದಂತ ಕಾರ್ಯದಲ್ಲೂ ತಾಲೂಕಿನ ತೋಟಗಾರಿಕೆ ರೈತರು ಹಿಂದೆ ಬೀಳದೇ ಸದ್ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಕೊಳವೆ ಬಾವಿ, ತೆರೆದ ಬಾವಿಗಳಿಂದ ನೀರುಣಿಸಿಕೊಂಡು ಕೃಷಿ ಮಾಡುವ ರೈತರಿಗೆ ಬೇಸಿಗೆಯಲ್ಲಿ ಅಂತರ್ಜಲ ಕೊರತೆಯಿಂದ ಉಂಟಾಗುವ ಬೆಳೆ ನಷ್ಟ ತಪ್ಪಿಸಿಕೊಳ್ಳಲು ಈ ಯೋಜನೆ ವರದಾನವಾಗಿದೆ. ಯೋಜನೆ ಅಡಿ ಸಮುದಾಯ ಕೆರೆ ನಿರ್ಮಿಸಿ ವಿವಿಧ ಮೂಲಗಳಿಂದ ನೀರು ಸಂಗ್ರಹಿಸಿ, ಬೆಳೆಗಳಿಗೆ ಬೇಕಾದಾಗ ಬಳಸಿಕೊಂಡು ಹೆಚ್ಚಿನ ಉತ್ಪಾದನೆ ಮಾಡಲಾಗುತ್ತಿದೆ. ಬಯಲು ನಾಡಿನ ಸಣ್ಣ-ಅತಿ ಸಣ್ಣ ರೈತರಿಗೂ ಈ ಯೋಜನೆ ಲಾಭ ದೊರೆಯುವಂತೆ ಮಾಡಬೇಕಿದೆ.

ತಾಲೂಕಿನಲ್ಲಿ ಕಳೆದ ಐದು ವರ್ಷಗಳಿಂದ ಇದುವರೆಗೂ ಆಳಂಗಾ, ಸಾವಳೇಶ್ವರ, ಸುಂಟನೂರ, ಖಜೂರಿ, ಚಿಂಚನಸೂರ, ನಿಂಬಾಳ, ತಡಕಲ್‌, ಸೇರಿ 30ಕ್ಕೂ ಹೆಚ್ಚು ಕಡೆಗಳಲ್ಲಿ ಸಮುದಾಯ ಕೆರೆ ನಿರ್ಮಾಣವಾಗಿ ಬಳಕೆಯಲ್ಲಿವೆ. ಬಹುವಾರ್ಷಿಕ ತೋಟಗಾರಿಕೆ ಬೆಳೆಯುವ ರೈತರು ಕೃಷಿ ಹೊಂಡ ನಿರ್ಮಿಸಿಕೊಂಡು ಬೇಸಿಗೆಯಲ್ಲೂ ತರಕಾರಿ, ಹಣ್ಣು, ಮಾವು, ನಿಂಬೆ, ಈರುಳ್ಳಿ ಹೀಗೆ ಅನೇಕ ರೀತಿಯ ಬೆಳೆ ಬೆಳೆದು ಲಾಭ ಪಡೆಯುತ್ತಿದ್ದಾರೆ.

ಈ ಯೋಜನೆಗಳಲ್ಲಿ ಸಾಮೂಹಿಕ ಕೆರೆ ಅಥವಾ ಕೃಷಿ ಹೊಂಡ ಕಾಮಗಾರಿ ಅನುಷ್ಠಾನವಿದೆ. ಪ್ರತಿವರ್ಷ ತಾಲೂಕಿಗೆ ಐದರಿಂದ 10 ಯೂನಿಟ್‌ ಗುರಿಗಳನ್ನು ಹೊಂದಿ ಘಟಕಗಳನ್ನು ನೀಡಲಾಗುತ್ತಿದೆ. ಆಸಕ್ತ ಫಲಾನುಭವಿಗಳು ತಾಲೂಕು ಕಚೇರಿಗೆ ನೀರು ಬಳಕೆದಾರ ಸಂಘದಿಂದ ಅರ್ಜಿ ಪಡೆದು, ಹಾಕಿದಾಗ ಅವರಿಗೆ ಜೇಷ್ಠತಾ ಆಧಾರದ ಮೇಲೆ ಅರ್ಹತೆ ಪರಿಗಣಿಸಿ, ಕಾಮಗಾರಿಯ ಕಾರ್ಯಾದೇಶ ನೀಡಲಾಗುತ್ತಿದೆ. ಅಲ್ಲದೇ, ಆರ್‌ಕೆವೈ ಅಡಿ ಸಂಘ ಮತ್ತು ವೈಯಕ್ತಿಕವಾಗಿ ಕೃಷಿ ಸಮುದಾಯ ಕೆರೆ ಮಾಡಿಕೊಂಡರೆ ಕಾಮಗಾರಿ ಬಳಿಕ 3ಲಕ್ಷದಿಂದ 5ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ.

ತಾಲೂಕಿನ ಆಳಂಗಾ ಗ್ರಾಮದ ರೈತ ರವಿ ಪಾಟೀಲ ತಮ್ಮ ಜಮೀನಿನಲ್ಲಿ ಪ್ಲಾಸ್ಟಿಕ್‌ ಹೊದಿಕೆ ಕೆರೆ ನಿರ್ಮಿಸಿಕೊಂಡಿದ್ದಾರೆ. ನಿಂಬೆ, ಹೆಬ್ಬೇವು, ತರಕಾರಿ, ಮಾವು ಬೆಳೆಗೆ ಬೇಸಿಗೆಯಲ್ಲಿ ಕೊಳವೆ ಬಾವಿ ನೀರಿನ ಕೊರತೆ ಮನಗಂಡು ಕೃಷಿಹೊಂಡ ನಿರ್ಮಿಸಿಕೊಂಡಿದ್ದಾರೆ. ಇದಕ್ಕೆ ಹತ್ತಿರದಲ್ಲಿ ಹರಿಯುವ ನಾಲಾ ನೀರನ್ನು ಹೊಂಡದಲ್ಲಿ ಸಂಗ್ರಹಿಸಿ ಬೇಕಾದಾಗ ಹನಿ ನೀರಾವರಿಗೆ ಅಳವಡಿಸಿಕೊಳ್ಳುತ್ತಿದ್ದಾರೆ.

ಅರ್ಜಿ ಸಲ್ಲಿಸಿದವರು ಈ ಕೃಷಿ ಹೊಂಡಕ್ಕೆ 500 ಮೈಕ್ರಾನ್‌ ಪ್ಲಾಸ್ಟಿಕ್‌ ಹೊದಿಕೆ ಮೂಲಕ ನೀರು ಹಿಂಗುವುದನ್ನು ತಪ್ಪಿಸಿ ಬಹುದಿನಗಳ ವರೆಗೆ ನೀರು ಸಂಗ್ರಹಿಸಿದರೆ ತೋಟಗಾರಿಕೆ ಬೆಳೆ, ಮೀನುಗಾರಿಕೆ ಅನುಕೂಲವಾಗುತ್ತಿದೆ. ಪ್ರಸಕ್ತ ಸಾಲಿನ ಸಾವಳೇಶ್ವರ, ಖಜೂರಿಯಲ್ಲಿನ ಸಮುದಾಯ ಕೆರೆ ಮುಕ್ತಾಯ ಹಂತದಲ್ಲಿವೆ. ರೈತರು ಕಾಮಗಾರಿ ಕಾರ್ಯಾದೇಶ ಪಡೆದು, 45x45x3 ಮೀ ಅಳತೆಯ (6500 ಘ.ಮೀ) ಸುಮಾರು 60×80 ಸಾವಿರ ಲಿಟರ್ಸ್‌ ಸಾಮರ್ಥ್ಯದ ಕೃಷಿ ಹೊಂಡ ನಿರ್ಮಿಸಿಕೊಂಡು 4 ಲಕ್ಷ ರೂ. ಸಹಾಯಧನ ಪಡೆದಿದ್ದಾರೆ. ಮಳೆಗಾಲದಲ್ಲಿ ಕೆರೆ, ಕಾಲುವೆ ಮತ್ತು ಇತರೆ ಮೂಲಗಳಿಂದ ಕೃಷಿ ಹೊಂಡದಲ್ಲಿ ನೀರು ಸಂಗ್ರಹಿಸಿ ಬೇಸಿಗೆಯಲ್ಲಿ ಹನಿ ನೀರಾವರಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಈ ಮೂಲಕ ತೋಟಗಾರಿಕೆ ಬೆಳೆ ವಿಸ್ತರಿಸಿಕೊಂಡಿದ್ದಾರೆ. ಹೊಂಡದಲ್ಲಿ ಮೀನು ಸಾಕಾಣಿಕೆ ಕೂಡಾ ಮಾಡಿ ಲಾಭ ಪಡೆಯುತ್ತಿದ್ದಾರೆ. ತೋಟಗಾರಿಕೆ ಇಲಾಖೆಯ ತಾಂತ್ರಿಕ, ಆರ್ಥಿಕ ನೆರವಿನಿಂದ ಕೃಷಿ ಹೊಂಡ ನಿರ್ಮಿಸಿಕೊಂಡು ನೀರಿನ ಕೊರತೆ ನೀಗಿಸಿ ವರ್ಷವಿಡಿ ಬೆಳೆ ಬೆಳೆದು ಆದಾಯ ದ್ವಿಗುಣ ಮಾಡಿಕೊಂಡಿದ್ದಾರೆ.

ವ್ಯಾಲಿಂ ಎಂಟು ಸಾವಿರ ಘನ ಮೀಟರ್‌ ನೀರು ಸಂಗ್ರಹ ಸಾಮರ್ಥ್ಯಕ್ಕೆ ಸಹಾಯಧನ ಶೇ. 50ರಂತೆ ಗರಿಷ್ಠ 5.30ಲಕ್ಷ ರೂ. ಸಹಾಯಧನವಿದೆ. ನೀರಿನ ಸಂಗ್ರಹ ಸಾಮರ್ಥ್ಯ ಒಂದು ಕೋಟಿಯಿಂದ 1.20 ಕೋಟಿ ಲೀಟರ್‌ ಇದೆ. ರೈತರು ಇದರ ಲಾಭ ಪಡೆಯಬೇಕು. -ಶಂಕರಗೌಡ ಪಾಟೀಲ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ

-ಮಹಾದೇವ ವಡಗಾಂವ

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.