ಸಂತೆಯಲಿ ಪ್ಲಾಸ್ಟಿಕ್ ಶೋಧ: ಬಿತ್ತು ದಂಡ
Team Udayavani, Jul 22, 2022, 3:33 PM IST
ವಾಡಿ: ಪಟ್ಟಣದಲ್ಲಿ ಗುರುವಾರ ನಡೆಯುತ್ತಿದ್ದ ವಾರದ ಸಂತೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ವರ್ತಕರಿಗೆ ಪುರಸಭೆ ಅಧಿಕಾರಿಗಳು ದಂಡ ವಿಧಿಸಿದರು.
ಗುರುವಾರದ ಸಂತೆಗೆ ವಿವಿಧೆಡೆಯಿಂದ ಆಗಮಿಸಿ ವ್ಯಾಪಾರದಲ್ಲಿ ತೊಡಗಿದ್ದ ತರಕಾರಿ, ಹಣ್ಣು, ಹೂ, ಬಟ್ಟೆ, ತೆಂಗು, ಭಜ್ಜಿ, ಜಿಲೇಬಿ, ಮಕ್ಕಳ ಆಟಿಕೆ ವ್ಯಾಪಾರಿಗಳು ಸಾಮಾನ್ಯ ರೀತಿಯಲ್ಲಿ ಸಹಜವಾಗಿ ಪ್ಲಾಸ್ಟಿಕ್ ಕೈಚೀಲ ಹಾಗೂ ಕ್ಯಾರಿಬ್ಯಾಗ್ ಇಟ್ಟುಕೊಂಡು ಖರೀದಿಗೆ ಬಂದ ಗ್ರಾಹಕರಿಗೆ ನೀಡುತ್ತಿದ್ದರು. ಈ ವೇಳೆ ಮಾರುಕಟ್ಟೆ ಪ್ರವೇಶಿಸಿದ ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಪರಿಸರ ಅಭಿಯಂತರ ಪೂಜಾ ಫುಲಾರೆ, ಹಿರಿಯ ಆರೋಗ್ಯ ನೈರ್ಮಲ್ಯ ನಿರೀಕ್ಷಕಿ ಲತಾಮಣಿ ಎಲ್, ಕಿರಿಯ ನಿರೀಕ್ಷಕ ಬಸವರಾಜ ಪೂಜಾರಿ, ವ್ಯವಸ್ಥಾಪಕ ಮಲ್ಲಿಕಾರ್ಜುನ ಹಾರಕೂಡ, ವಿಶ್ವನಾಥ ಭಾಗೋಡಿ, ಶ್ರೀಮಂತ ಧುಮ್ಮನಸೂರ ನೇತೃತ್ವದ ತಂಡ ಪ್ಲಾಸ್ಟಿಕ್ ಶೋಧ ನಡೆಸಿತು.
ನಿಷೇಧಕ್ಕೊಳಪಟ್ಟ ಪ್ಲಾಸ್ಟಿಕ್ ಬಳಕೆಯಲ್ಲಿ ತೊಡಗಿದ ವ್ಯಾಪಾರಿಗಳಿಗೆ ದಂಡ ವಿಧಿಸುವ ಮೂಲಕ ಕಾನೂನಿನ ಬಿಸಿ ಮುಟ್ಟಿಸಿತು. ಈ ವೇಳೆ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ವಿಷಕಾರಿಯುಕ್ತ ತ್ಯಾಜ್ಯ ಪ್ಲಾಸ್ಟಿಕ್ನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು. ಮಾಡಿದರೇ ವ್ಯಾಪಾರಿಗಳು ದಂಡ ತೆತ್ತುವ ಜತೆಗೆ ಶಿಕ್ಷೆಗೂ ಗುರಿಯಾಗಬೇಕಾಗುತ್ತದೆ ಎಂದ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!