ಮನು ಸಾಮ್ರಾಜ್ಯ ಸ್ಥಾಪನೆಗೆ ಸಂಚು
Team Udayavani, Jan 27, 2018, 10:39 AM IST
ಆಳಂದ: ಎಲ್ಲರಿಗೂ ಏಕರೂಪದ ನ್ಯಾಯ, ಸಮಾನತೆ, ಸ್ವಾತಂತ್ರ್ಯ, ಗಣರಾಜ್ಯ ಕೊಟ್ಟಿರುವ ದೇಶದ ಸಂವಿಧಾನದ ತಿದ್ದುಪಡಿ ಕುರಿತು ಹೇಳಿಕೆ ನೀಡುತ್ತಿರುವ ಮನುವಾದಿಗಳು ಮತ್ತೆ ತಮ್ಮ ಮನು ಸಾಮ್ರಾಜ್ಯ ಸ್ಥಾಪಿಸಿ ಭಯೋತ್ಪಾದನೆ ಮೂಲಕ ದೇಶ ಒಡೆಯುವ ಸಂಚುರೂಪಿಸಿ ಆತಂಕ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಉಪಸಭಾಪತಿ, ಶಾಸಕ
ಬಿ.ಆರ್. ಪಾಟೀಲ ಹೇಳಿದರು.
ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ ಶುಕ್ರವಾರ ತಾಲೂಕು ಆಡಳಿತ 69ನೇ ಗಣರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ದೇಶದ ಸಂವಿಧಾನ ರಕ್ಷಣೆ ಜವಾಬ್ದಾರಿ ಎಲ್ಲ ಭಾರತೀಯರ ಮೇಲಿದೆ. ವಿವಿಧತೆಯಲ್ಲಿ ಏಕತೆ ಮೆರೆದ ದೇಶದಲ್ಲಿ ಎಲ್ಲರೂ ಜಾತಿ, ಧರ್ಮ ಮರೆತು ಪರಸ್ಪರ ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಜೀವನ ಸಾಗಿಸಬೇಕು. ದೇಶದ ಎಲ್ಲರಂಗದಲ್ಲೂ ಅಭಿವೃದ್ಧಿಗೆ ಗಮನ ಕೊಡಬೇಕು. ಸಂವಿಧಾನ ತಿದ್ದುಪಡಿ ಹೇಳಿಕೆ ಭಯೋತ್ಪಾದನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ತಹಶೀಲ್ದಾರ್ ಬಸವರಾಜ ಎಂ. ಬೆಣ್ಣೆಶಿರೂರ, ಸ.ಪ.ಪೂ. ಕಾಲೇಜಿನ ಉಪನ್ಯಾಸಕ ಬಾಬುರಾವ್ ಸರಡಗಿ ಸಂವಿಧಾನ ಕುರಿತು ಉಪನ್ಯಾಸ ನೀಡಿದರು.
ಪುರಸಭೆ ಅಧ್ಯಕ್ಷ ಅಂಬಾದಾಸ ಪವಾರ, ಉಪಾಧ್ಯಕ್ಷ ಅಜಗರ ಅಲಿ ಹಲ್ದಾರ್, ಸ್ಥಾಯಿ ಸಮಿತಿ ಅಧ್ಯಕ್ಷ ವೈಹೀದ್ ಜರ್ದಿ, ತಾಪಂ ಇಒ ಡಾ| ಸಂಜಯ ರೆಡ್ಡಿ, ಡಿವೈಎಸ್ಪಿ ಪಿ.ಕೆ.ಚೌಧರಿ, ಗ್ರೇಡ್- ತಹಶೀಲ್ದಾರ್ ಬಿ.ಜಿ. ಕುದರಿ, ಕ್ಷೇತ್ರ ಶಿಕ್ಷಣಾ ಧಿಕಾರಿ ಭರತರಾಜ ಸಾವಳಗಿ, ಗ್ರಾಮೀಣ ನೀರುರಬರಾಜು ಇಲಾಖೆ ಎಇಇ ಅಬ್ದುಲ ಸಲಾಂ, ಕೈಗಾರಿಕೆ ಅಧಿಕಾರಿ ಜಾಫರ್ ಅನ್ಸಾರಿ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಮೇಶ ಮಾಡಿಯಾಳ, ಪಿಎಸ್ಐ ಸುರೇಶ ಬಾಬು ಹಾಜರಿದ್ದರು.
ಸಿಪಿಐ ಹಣಮಂತ ಸಣ್ಣಮನಿ, ಪಟ್ಟಣದ ನರೇಂದ್ರ ಬುಲಬುಲೆ ಗೀತೆ ಹಾಡಿದರು. ಬಸವರಾಜ ದೊಡ್ಡಮನಿ ನಿರೂಪಿಸಿದರು. ನಂತರ ವಿವಿಧ ಶಾಲೆ ಮಕ್ಕಳಿಂದ ಬಿಆರ್ಪಿ ಶರಣಪ್ಪ ಮುನಗುಳಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ