AICC ಅಧ್ಯಕ್ಷರ ತವರು ಕ್ಷೇತ್ರದಲ್ಲಿ ಶನಿವಾರ ಪಿಎಂ ಮೋದಿ ಚುನಾವಣ ರಣಕಹಳೆ

2019ರಲ್ಲೂ ಚುನಾವಣಾ ಭಾಷಣ ಮಾಡಿದ್ದರು.. ಖರ್ಗೆ ಸೋತಿದ್ದರು..

Team Udayavani, Mar 14, 2024, 8:07 PM IST

1-wewqe

ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕ್ಷೇತ್ರ ಕಲಬುರಗಿ ಯಿಂದ ಚುನಾವಣಾ ಕಹಳೆ ಮೊಳಗಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾರ್ಚ್ 16 ರಂದು ಆಗಮಿಸುತ್ತಿದ್ದಾರೆ.

ಚುನಾವಣ ದಿನಾಂಕ ನಿಗದಿ ದಿನಗಣನೆ ನಡುವೆ ಪ್ರಧಾನಿ ಆಗಮಿಸುತ್ತಿರುವುದು ತೀವ್ರ ಕೂತುಹಲ ಮೂಡಿಸಿದೆ. ಮಾರ್ಚ್ 16 ರಂದು ಮಧ್ಯಾಹ್ನ 1ಕ್ಕೆ ವಿಶೇಷ ವಿಮಾನ ಮೂಲಕ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ, ತದನಂತರ ಹೆಲಿಕ್ಯಾಪ್ಟರ್ ಮೂಲಕ ನಗರದ ಪೊಲೀಸ್ ಮೈದಾನಕ್ಕೆ ಆಗಮಿಸಿ ಮಿನಿ ರೋಡಶೋ ಮುಖಾಂತರ ಸಮಾವೇಶ ನಡೆಯುವ ನೂತನ ವಿದ್ಯಾಲಯಕ್ಕೆ ಆಗಮಿಸುವರು.

ತದನಂತರ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಪಕ್ಷದ ಕಾರ್ಯಕರ್ತರು, ಜನರನ್ನು ಉದ್ದೇಶಿಸಿ ಭಾಷಣ ಮಾಡಿ ಚುನಾವಣ ಕಹಳೆ ಮೊಳಗಿಸಲಿದ್ದಾರೆ. 2019 ಲೋಕಸಭಾ ಚುನಾವಣೆ ಮುಂಚೆಯೂ ಪ್ರಧಾನಿ ಇದೇ ನೂತನ ವಿದ್ಯಾಲಯ ಮೈದಾನದಲ್ಲಿ ಚುನಾವಣಾ ಭಾಷಣ ಮಾಡಿದ್ದರು. ಇದೇ ಸಮಾವೇಶದಲ್ಲಿ ಆಗ ಕಾಂಗ್ರೆಸ್ ಪಕ್ಷದಿಂದ ಚಿಂಚೋಳಿ ಕ್ಷೇತ್ರದ ಶಾಸಕರಾಗಿದ್ದ ಡಾ. ಉಮೇಶ ಜಾಧವ್ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆ ಯಾಗಿದ್ದರು.

ಈಗ ಎರಡನೇ ಬಾರಿಗೆ ಲೋಕಸಭಾ ಅಭ್ಯರ್ಥಿ ಯಾಗಿ ಕಣಕ್ಕಿಳಿಯುತ್ತಿರುವ ಸಂದರ್ಭದಲ್ಲಿ ಅದರಲ್ಲೂ ಟಿಕೆಟ್ ಪಟ್ಟಿ ಪ್ರಕಟವಾದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವುದರಿಂದ ಎಲ್ಲರ ನೋಟ ಕಲಬುರಗಿ ಯತ್ತ ಎನ್ನುವಂತಾಗಿದೆ.

ಸಿದ್ದತೆ ಪರಿಶೀಲನೆ
ನೂತನ ವಿದ್ಯಾಲಯ ಮೈದಾನದಲಿ ನಡೆಯುವ ಪ್ರಧಾನಿ ಕಾರ್ಯಕ್ರಮದ ಸಿದ್ದತೆ ಯನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ,ಪೊಲೀಸ್ ಆಯುಕ್ತ ಆರ್ ಚೇತನ್, ಎಸ್ಪಿ ಅಕ್ಷಯ ಹಾಕೆ ಪರಿಶೀಲನೆ ನಡೆಸಿದರು.

ಸಂಸದ ಡಾ.‌ಉಮೇಶ ಜಾಧವ್, ಬಿಜೆಪಿ ಮುಖಂಡ ರಾದ ರಾಜುಗೌಡ, ಪಿ.ರಾಜೀವ್, ರಾಜಕುಮಾರ ಪಾಟೀಲ್ ತೇಲ್ಕೂರ, ಶಿವರಾಜ ಪಾಟೀಲ್ ರದ್ದೇವಾಡಗಿ, ಚಂದು ಪಾಟೀಲ್ ಮುಂತಾದವರು ಸಹ ಸಮಾವೇಶದ ಸಿದ್ದತೆ ಗಳನ್ನು ಅವಲೋಕಿಸಿ ಪ್ರಧಾನಿ ಪ್ರವಾಸದ ವಿವರಣೆ ನೀಡಿದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.