ಕಲಬುರಗಿ:ರುಂಡ ಕತ್ತರಿಸಿ ಅಟ್ಟಹಾಸಗೈದವನ ಮೇಲೆ ಪೊಲೀಸ್ ಫೈರಿಂಗ್
Team Udayavani, Sep 16, 2018, 10:50 AM IST
ಕಲಬುರಗಿ: ಯುವಕನೊಬ್ಬನ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಯೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಆಳಂದ ತಾಲೂಕಿನ ಕೆರೆಭೋಸ್ಗಾ ಬಳಿ ನಡೆದಿದೆ.
ನಾಗರಾಜ್ (24)ಎಂಬ ಆರೋಪಿಯ ಮೇಲೆ ಚೌಕ್ ಠಾಣೆಯ ಸಿಪಿಐ ಎಸ್.ಎಸ್.ಹಿರೇಮಠ ಗುಂಡು ಹಾರಿಸಿದ್ದಾರೆ.
ಸೆಪ್ಟಂಬರ್ 11 ರಂದು ಸಿಧ್ದೋಜಿ ಎಂಬ ಯುವಕನನ್ನು ಹಣಕ್ಕಾಗಿ ಅಪಹರಿಸಿ ಅಲಗೋಡ್ ಗ್ರಾಮದ ಬಳಿ ಬರ್ಬರವಾಗಿ ಹತ್ಯೆಗೈದು ಬೀಸಾಡಿದ್ದ.
ಪೊಲೀಸರ ಮೇಲೆಯೇ ನಾಗರಾಜ್ ದಾಳಿ ಮಾಡಿದ್ದು ಈ ವೇಳೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆ ವೇಳೆ ಇಬ್ಬರು ಪೊಲೀಸ್ ಸಿಬಂದಿ ಗಾಯಗೊಂಡಿದ್ದಾರೆ. ಇಬ್ಬರನ್ನು ಮತ್ತು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ