ಪೊಲೀಸ್ ವಸತಿಗೃಹಕ್ಕೆ ಸ್ವಚ್ಛತೆ ಭಾಗ್ಯ
Team Udayavani, Apr 4, 2017, 12:53 PM IST
ವಾಡಿ: ಕಲುಷಿತ ಪರಿಸರ ಹಾಗೂ ಹಂದಿಗಳ ಕಾಟದಿಂದ ಬಳಲುತ್ತಿದ್ದ ಸ್ಥಳೀಯ ಪೊಲೀಸ್ ವಸತಿ ಗೃಹಗಳಿಗೆ ಕೊನೆಗೂ ಸ್ವಚ್ಛತೆ ಭಾಗ್ಯ ಒದಗಿಬಂದಿದ್ದು, ಹಂದಿ ಸಾಕಾಣಿಕೆದಾರರ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗಳು ಗರಂ ಆದ ಘಟನೆ ನಡೆದಿದೆ.
ಸೋಮವಾರ ಬೆಳಗ್ಗೆ 7:00 ಗಂಟೆಗೆ ಠಾಣೆಗೆ ದೌಡಾಯಿಸಿ ಬಂದ ಡಿವೈಎಸ್ಪಿ ಮಹೇಶ ಮೇಘಣ್ಣವರ್, ಪಿಎಸ್ಐ ಸಂತೋಷಕುಮಾರ ರಾಥೋಡ ಹಾಗೂ ಪುರಸಭೆ ಮುಖ್ಯಾಧಿಕಾರಿ ಶಂಕರ ಡಿ.ಕಾಳೆ ಪೊಲೀಸ್ ಪೇದೆಗಳ ಸಭೆ ನಡೆಸಿದರು.
ಪೊಲೀಸ್ ವಸತಿ ಗೃಹಗಳ ಸುತ್ತ ಹದಗೆಟ್ಟ ನೈರ್ಮಲ್ಯ ವ್ಯವಸ್ಥೆ ಹಾಗೂ ಹಂದಿಗಳ ಹಾವಳಿ ಕುರಿತು ಡಿವೈಎಸ್ಪಿ ಮಹೇಶ ಮೇಘಣ್ಣವರ್ ಮಾಹಿತಿ ಕಲೆ ಹಾಕಿದರು. ಹಂದಿ ಸಾಕಾಣಿಕೆದಾರರನ್ನು ಠಾಣೆಗೆ ಕರೆಸಿ ಕೂಡಲೇ ಹಂದಿಗಳನ್ನು ಬೇರೆಡೆ ಸಾಗಿಸುವಂತೆ ಆದೇಶ ನೀಡಿದರು.
ಕಾಂಪೌಂಡ್ ನಿರ್ಮಾಣದ ಬಗ್ಗೆಯೂ ಇದೇ ವೇಳೆ ಚರ್ಚೆ ನಡೆಯಿತು. ಮುಖ್ಯಾಧಿಕಾರಿ ಶಂಕರ ಕಾಳೆ ಆದೇಶದಂತೆ ಹಿರಿಯ ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ, ವಸತಿ ಗೃಹ ಸುತ್ತಲ ಪ್ರದೇಶದಲ್ಲಿ ಹರಡಿಕೊಂಡಿರುವ ಕಸ ವಿಲೇವಾರಿ ಮತ್ತು ಕೊಳೆ ಸ್ವಚ್ಛತೆಗೆ ಮುಂದಾದರು. ಈ ವೇಳೆ ಎರಡು ಟ್ರಾಕ್ಟರ್ ಕಸ ಸಂಗ್ರಹವಾಯಿತು.
ವಸತಿ ಗೃಹಗಳ ಸುತ್ತ ಬೆಳೆದಿದ್ದ ಮುಳ್ಳುಕಂಟಿಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಪೊಲೀಸ್ ವಸತಿಗೃಹಗಳ ಒಳಚರಂಡಿಯಲ್ಲಿ ವಿಪರೀತ ಹೂಳು ತುಂಬಿದ್ದರಿಂದ ಕೊಳೆ ಹಾಗೆಯೇ ಉಳಿದುಕೊಂಡಿತು. ಈ ಕುರಿತು ಕೆಲವೇ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಹಂದಿಗಳ ಕಾಟ: ಪೊಲೀಸರ ನೆಮ್ಮದಿ ಭಂಗ’ ಎನ್ನುವ ಶೀರ್ಷಿಕೆಯಡಿ ಸೋಮವಾರ “ಉದಯವಾಣಿ’ಯಲ್ಲಿ ಪ್ರಕಟವಾದ ವಿಶೇಷ ವರದಿಗೆ ಸ್ಪಂದಿಸಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿರುವುದು ಗಮನಾರ್ಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ