ಸುರಿಯದ ಮಳೆ: ಬಾಡುತ್ತಿದೆ ಬೆಳೆ


Team Udayavani, Jul 31, 2018, 5:09 PM IST

gul-1.jpg

ಶಹಾಬಾದ: ಮಳೆ ಕೊರತೆಯಿಂದಾಗಿ ಬೆಳೆ ಬಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಜೂನ್‌ ತಿಂಗಳ ಮೊದಲ ವಾರದಲ್ಲಿ ಬಿದ್ದ ಮೊದಲ ಮಳೆಯಿಂದ ಹರ್ಷಗೊಂಡಿದ್ದ ರೈತರು ಹೆಸರು ಬಿತ್ತನೆ ಮಾಡಿದ್ದರು. ಬಿತ್ತನೆ ಮಾಡಿದ ನಂತರ ಸುಮಾರು ತಿಂಗಳಾಗುತ್ತ ಬಂದರೂ ಇದುವರೆಗೂ ಮಳೆಯಾಗದಿರುವುದರಿಂದ ರೈತರು ತುಂಬಾ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರಿನಲ್ಲಿ ಉತ್ತಮ ಮಳೆಯಾಗಿತ್ತು. ಅಲ್ಲದೇ ಹೆಚ್ಚಿನ
ಮಳೆಯಾಗಿದ್ದರಿಂದ ತಗ್ಗು ಪ್ರದೇಶದ ಹೊಲ ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿತ್ತು.

ಈ ಬಾರಿ ಮಳೆ ಬಾರದಿರುವುದರಿಂದ ಬಾಡುವ ಹಂತ ತಲುಪಿದೆ. ಕೆಲವು ರೈತರು ಹೊಲ ಹರಗಿದ್ದಾರೆ. ಮಳೆ ಇಲ್ಲದೇ ಇರುವುದರಿಂದ ಆತಂಕಗೊಳಗಾದ ಮತ್ತೆ ನಿರಾಶೆಯಾಗಿದ್ದಾರೆ. ಹವಾಮಾನ ಇಲಾಖೆ ವರದಿಯಂತೆ ಈ ಬಾರಿ ಉತ್ತಮ ಮಳೆಯಾಗುತ್ತದೆ ಎಂಬ ಆಶಾಭಾವನೆಯಿಂದ ರೈತರು ಬಿತ್ತನೆ ಮಾಡಿದ್ದರು. ಆದರೆ ಬಿತ್ತನೆ ಮಾಡಿದ ನಂತರ ಮೊಳಕೆ ಒಡೆದು ಬಂದ ಬೆಳೆಗೆ ಸುಮಾರು ಒಂದು ತಿಂಗಳವರೆಗೆ ಮಳೆಯಾಗಲಿಲ್ಲ. ಆದರೆ ಆಗೊಮ್ಮ ಈಗೊಮ್ಮೆ ಸುರಿದ ಮಳೆಯಿಂದ ಹೇಗೋ ಚತರಿಸಿಕೊಂಡು ಬೆಳೆದ ಬೆಳೆಗೆ ತೇವಾಂಶದ ಕೊರತೆಯಿಂದ ಬಾಡುವ ಹಂತಕ್ಕೆ ತಲುಪಿವೆ. ಎಲೆಗಳು ಉದುರಿ ಹೋಗಿವೆ.

ಹೆಸರು, ಉದ್ದು, ಎಳ್ಳು, ಸಜ್ಜೆ ಮಳೆಯಿಲ್ಲದೇ ಒಣಗಿ ಹೋಗಿರುವುದರಿಂದ ರೈತರು ಬೆಳೆ ಹರಗುತ್ತಿದ್ದಾರೆ. ಅಲ್ಪ
ಮಳೆಯಾದ ಕೆಲವು ಪ್ರದೇಶಗಳಲ್ಲಿ ಕಾಯಿಯಾಗಿವೆ. ಆದರೆ ತೇವಾಂಶದ ಕೊರತೆಯಿಂದ ಕಾಯಿ ಕಟ್ಟಿಲ್ಲ. ಹತ್ತಿ ಬೆಳೆ ಮಾತ್ರ ಎರಡು ಗೇಣಿನಷ್ಟು ಬೆಳೆದು ನಿಂತಿದೆ. ಈಗ ಮಳೆಯಾದರೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಇನ್ನೂ ತೊಗರಿ ಬಿತ್ತನೆ ಮಾಡಿ, ಇಪ್ಪತ್ತು ದಿನಗಳಾದರೂ ಮಳೆಯಾಗದಿರುವುದರಿಂದ ರೈತರು ಕಣ್ಣೀರು ಸುರಿಸುವಂತಾಗಿದೆ.ಅಲ್ಲದೇ ರೈತರು ಮುಂದೆ ಒಳ್ಳೆಯ ಮಳೆ ಬರುವ ಆಶಾಭಾವನೆಯಿಂದ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈ ವರ್ಷ ಮಳೆಯೂ ಇಲ್ಲ. ಕಳೆಯೂ ಇಲ್ಲ. ಇದರಿಂದ ದನಗಳಿಗೆ ಮೇವಿಲ್ಲದಿದ್ದರೆ ಮಾರಾಟ ಮಾಡಲು ಕೃಷಿಕರು ಮುಂದಾಗುತ್ತಾರೆ. ಇಷ್ಟೆಲ್ಲ ಕಷ್ಟಗಳು ಇದ್ದರೂ ರೈತರು ಆಶಾಭಾವನೆಯಿಂದ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ.

ಹೋಬಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಿಲ್ಲದೇ ರೈತರು ಸಂಕಷ್ಟದಲ್ಲಿದ್ದಾರೆ. ಮಳೆಯಿಲ್ಲದೇ ಬೆಳೆ ಒಣಗಿ ಹೋಗಿದೆ. ಆದರೂ ಆಶಾಭಾವನೆಯಿಂದ ರೈತರು ಮಳೆರಾಯನಿಗಾಗಿ ಕಾದು ಕುಳಿತ್ತಿದ್ದಾರೆ ಎಂದು ನಾಗಣ್ಣ ರಾಂಪೂರೆ ತಿಳಿಸಿದ್ದಾರೆ. ಬೆಳೆಗೆ ತಕ್ಕಷ್ಟು ಮಳೆ ಬಂದಿದ್ದರೆ, ಬೆಳೆ ಉತ್ತಮವಾಗಿರುತ್ತಿತ್ತು. ಅಲ್ಲದೇ ನಿರೀಕ್ಷಿತ ಮಟ್ಟದಲ್ಲಿ ಇಳುವರಿ ಪಡೆಯಬಹುದಾಗಿತ್ತು. ಆದರೆ ಮಳೆಯಾಗದ ಕಾರಣ ಅರಳುವ ಮುಂಚೆಯೇ ಹೆಸರು ಬೆಳೆಗಳ ಎಲೆಗಳು ಉದುರಿ ಹೋಗಿವೆ. ಸಾಲ ಮಾಡಿದ ರೈತ ಮತ್ತೆ ಸಂಕಷ್ಟಕ್ಕೆ ಒಳಗಾಗಗಿದ್ದಾರೆ ಎಂದು ಮೋನಪ್ಪ ತೆಲಗಬಾಳ ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.