ಅಗತ್ಯ ಕೆಲಸಗಳಿಗೆ ಮಾತ್ರ ಹೊರ ಬನ್ನಿ, ಬಸ್ ಸೇವೆ ಕಡಿತ: ಕಲಬುರಗಿ ಜಿಲ್ಲಾಧಿಕಾರಿ
Team Udayavani, Mar 14, 2020, 1:06 PM IST
ಕಲಬುರಗಿ: ಕೊರೊನಾ ಸೋಂಕಿನಿಂದ ವ್ಯಕ್ತಿ ಮೃತಪಟ್ಟ ಕಾರಣ ಹಾಗೂ ಸೋಂಕು ಹರಡುವಿಕೆ ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಗತ್ಯ ವಸ್ತುಗಳಿಗಾಗಿ ಮಾತ್ರ ಜನತೆ ಮನೆಯಿಂದ ಹೊರಬೇಕು. ಅನಗತ್ಯವಾದ ಕೆಲಸ ಕಾರ್ಯಗಳನ್ನು ಸ್ಥಗಿತ ಗೊಳಿಸಬೇಕೆಂದು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಶರತ್ ಮನವಿ ಮಾಡಿದರು.
ಕಿರಣಾ ಅಂಗಡಿ, ಮೆಡಿಕಲ್ ಶಾಪ್ ಗಳು ಹಾಗೂ ಇತರ ಅಗತ್ಯ ವಸ್ತುಗಳ ಅಂಗಡಿಗಳು ತೆರೆದಿರುತ್ತದೆ. ಬಟ್ಟೆ, ಮದ್ಯದ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತದೆ. ನಾಗರಿಕರು ಅಗತ್ಯ ವಸ್ತುಗಳನ್ನು ಖರೀದಿ ಮಾಡಿದ ತಕ್ಷಣ ವಾಪಸ್ ಮನೆಗೆ ತೆರಳಬೇಕು. ನಾವು ಸೆಕ್ಷನ್ 144ರಡಿ ನಿಷೇಧಾಜ್ಞೆ ಮಾಡುತ್ತಿಲ್ಲ. ನಿರ್ದಾಕ್ಷಿಣ್ಯ ಕ್ರಮ ಜರುತ್ತಿದ್ದೇವೆ ಅಷ್ಟೇ ಎಂದರು.
ಕೆಲ ಸರ್ಕಾರಿ ಸೇವೆಗಳ ಸ್ಥಗಿತ: ಹೆಚ್ಚು ಜನರು ಸೇರದಂತೆ ನೀಡಿಕೊಳ್ಳಲು ಕೆಲ ಸರ್ಕಾರಿ ಸೇವೆಗಳನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಉಪನೋಂದಣಾಧಿಕಾರಿ ಕಚೇರಿ, ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಕಂದಾಯ ಇಲಾಖೆಯಲ್ಲಿ ಪಹಣಿ, ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್ ನೀಡುವ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ. ಉಳಿದಂತೆ ಸರ್ಕಾರಿ ಕಚೇರಿಗಳು ನಡೆಯುತ್ತವೆ ಎಂದರು.
ತುರ್ತು ಕೆಲಸ ಇದ್ದರೆ ಮಾತ್ರ ಬನ್ನಿ: ಬೇರೆ-ಬೇರೆ ಜಿಲ್ಲೆಗಳಿಂದ ಕಲಬುರಗಿಗೆ ತುರ್ತು ಕೆಲಸ ಇದ್ದರೆ ಮಾತ್ರ ಬರಬೇಕೆಂದು ಜಿಲ್ಲಾಧಿಕಾರಿ ಕೋರಿದರು. ಕಲಬುರಗಿಗೆ ಬೇರೆ ಜಿಲ್ಲೆಯ ಜನರು ಬರುವುದನ್ನು ತಪ್ಪಿಸಲು ಸಾರಿಗೆ ಸಂಸ್ಥೆಯ ಬಸ್ ಗಳ ಸಂಚಾರವನ್ನು ಕಡಿಮೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಮದುವೆಗೆ ಅನುಮತಿ ಅಗತ್ಯ: ಕೊರೊನಾ ಭೀತಿ ಕಡಿಮೆಯಾಗುವರೆಗೆ ಮದುವೆ ಸಮಾರಂಭಕ್ಕೆ ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ. ಮದುವೆಯಲ್ಲಿ ವಧು-ವರರ ಕುಟುಂಬಗಳು ಮಾತ್ರ ಇರಬೇಕು. ಇದನ್ನು ಖಚಿತ ಪಡಿಸಿದ ನಂತರವೇ ಅನುಮತಿ ನೀಡಲಾಗುತ್ತದೆ ಎಂದರು.
ಕೊರೊನಾ ಶಂಕಿತರು ಅಥವಾ ಕೆಮ್ಮು, ನೆಗಡಿಯಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ತಾವಾಗಿಯೇ ಸಮಸ್ಯೆ ಹೇಳಿಕೊಳ್ಳಲು ಹಿಂಜರಿಯುತ್ತಾರೆ. ಹೀಗಾಗಿ ಬೇರೆಯವರಾದರೂ ಮಾಹಿತಿ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿ ಆರಂಭಿಸಲಾಗುವುದು ಎಂದು ಡಿಸಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?