ಅರುಣ ಪಾಟೀಲ ಜನ್ಮದಿನಕ್ಕೆ ಸಜ್ಜು
Team Udayavani, Sep 27, 2018, 9:23 AM IST
ಕಲಬುರಗಿ: ಅಫಜಲಪುರ ತಾಲೂಕಿನ ಮಾಶ್ಯಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ, ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ (ಎಚ್ಕೆಇ)ಯ ಆಡಳಿತ ಮಂಡಳಿ ಸದಸ್ಯ ಅರುಣಕುಮಾರ ಎಂ. ಪಾಟೀಲ ಅವರ 45ನೇ ಜನ್ಮ ದಿನಾಚರಣೆಗೆ ಅಫಜಲಪುರ ಪಟ್ಟಣ ಸಜ್ಜುಗೊಂಡಿದೆ.
ಪಟ್ಟಣದ ನ್ಯಾಷನಲ್ ಪಂಕ್ಷನ್ ಹಾಲ್ದಲ್ಲಿ ಯುವ ನಾಯಕನ ಜನ್ಮ ದಿನಾಚರಣೆಗೆ ವೇದಿಕೆ ನಿರ್ಮಿಸಲಾಗಿದ್ದು, ಹಲವಾರು ಸಮಾಜಮುಖೀ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಸಸಿಗಳ ವಿತರಣೆ, ತಾಲೂಕಾ ಆಸ್ಪತ್ರೆಗಳಲ್ಲಿ ಹಣ್ಣು ವಿತರಣೆ,
ಮಹಿಳಾ ಪೌರ ನೌಕರರಿಗೆ ಬಟ್ಟೆ ವಿತರಣೆ, ಬಡ ಮಕ್ಕಳಿಗೆ ನೋಟ್ ಬುಕ್ ವಿತರಣೆ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸವಾಲು ಹಾಗೂ ಪ್ರತಿಷ್ಠೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಇತಿಹಾಸ ನಿರ್ಮಿಸುವ ಮೂಲಕ ರಾಜಕೀಯ ದೃವತಾರೆಯಾಗಿ ಹೊರ ಹೊಮ್ಮಿದ ಹಾಗೂ ತಂದೆಯವರಾಗಿರುವ ಶಾಸಕ ಎಂ.ವೈ. ಪಾಟೀಲ ಅವರ ರಾಜಕೀಯ ಸೇವಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅರುಣಕುಮಾರ ಪಾಟೀಲ ದೂರದೃಷ್ಟಿ ಹಾಗೂ ಅಭಿವೃದ್ಧಿ ಪರ ನಾಯಕರಾಗಿದ್ದಾರೆ.
ಗುರುವಾರ ನಡೆಯುವ ಜನ್ಮ ದಿನಾಚರಣೆಯಲ್ಲಿ ಅಫಜಲಪುರ ಪಟ್ಟಣದ ವಿಶ್ವಾರಾಧ್ಯ ಮಳೇಂದ್ರ ಶಿಚಾವಾರ್ಯರು, ಬಡದಾಳದ ಚೆನ್ನಮಲ್ಲ ಶಿವಾಚಾರ್ಯರು, ಚಿನ್ಮಯಗಿರಿ ಮಹಾಂತೇಶ್ವರ ಮಠದ ಸಿದ್ಧರಾಮ ಶಿವಾಚಾರ್ಯರು, ವೀರಮಹಾಂತ ಶಿವಾಚಾರ್ಯರು ಸೇರಿದಂತೆ ನಾಡಿನ ಹಲವಾರು ಮಠಾಧೀಶರು, ರಾಜಕೀಯ ಗಣ್ಯರು, ಜನಪ್ರತಿನಿಧಿಗಳು, ಸಮಾಜ ಸೇವಕರು, ಕಾರ್ಯಕರ್ತರು, ಪಾಟೀಲ ಬಳಗದ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಜನ್ಮ ದಿನಾಚರಣೆಗೆ ಸಮಿತಿಯೊಂದನ್ನು ರಚಿಸಲಾಗಿದ್ದು, ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ