ವರ ಮಹಾಲಕ್ಷ್ಮೀ ಪೂಜೆಗೆ ಸಿದ್ಧತೆ ಜೋರು


Team Udayavani, Jul 31, 2020, 7:08 AM IST

ವರ ಮಹಾಲಕ್ಷ್ಮೀ ಪೂಜೆಗೆ ಸಿದ್ಧತೆ ಜೋರು

ಕಲಬುರಗಿ: ಸೂಪರ್‌ ಮಾರ್ಕೆಟ್‌ನಲ್ಲಿ ವರ ಮಹಾಲಕ್ಷ್ಮೀ ಹಬ್ಬದ ಖರೀದಿಯಲ್ಲಿ ತೊಡಗಿದ್ದ ನಾಗರಿಕರು.

ಕಲಬುರಗಿ: ವರ ಮಹಾಲಕ್ಷ್ಮೀ ಹಬ್ಬಕ್ಕಾಗಿ ಖರೀದಿಗೆಂದು ಗುರುವಾರ ಮಾರ್ಕೆಟ್‌ನಲ್ಲಿ ಜನ ಜಂಗುಳಿ ತುಂಬಿತ್ತು. ಮಹಾಮಾರಿ ಕೋವಿಡ್ ಸೋಂಕಿನ ಅಟ್ಟಹಾಸದ ನಡುವೆಯೂ
ನಾಗರಿಕರು ಗುಂಪು-ಗುಂಪಾಗಿ ಹಬ್ಬದ ಖರೀದಿಯಲ್ಲಿ ತೊಡಗಿದ್ದರು. ಶ್ರಾವಣ ಮಾಸದ ಎರಡನೇ ಶುಕ್ರವಾರ (ಇಂದು) ವರ ಮಹಾಲಕ್ಷ್ಮೀ ಪೂಜೆಯನ್ನು ಹಬ್ಬದಂತೆ ಆಚರಿಸುವ
ಸಂಪ್ರದಾಯವಿದೆ.

ಪ್ರತಿ ವರ್ಷವೂ ಲಕ್ಷ್ಮೀ ಪೂಜೆಯನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗಿದೆ. ಈ ವರ್ಷ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದೆ. ಆದರೂ, ಇದನ್ನು ಲೆಕ್ಕಿಸದೆ ನಾಗರಿಕರು ಇಲ್ಲಿನ ಸೂಪರ್‌ ಮಾರ್ಕೆಟ್‌, ರಾಮ ಮಂದಿರ ವೃತ್ತ ಸೇರಿ ಅನೇಕ ಕಡೆಗಳಲ್ಲಿ ಪೂಜೆಗೆ ಬೇಕಾದ ವಸ್ತುಗಳ  ಖರೀದಿಯಲ್ಲಿ ಮುಗಿಬಿದ್ದಿದ್ದರು. ಅದರಲ್ಲೂ ಸೂಪರ್‌ ಮಾರ್ಕೆಟ್‌ ನಲ್ಲಿ ಜನ ಜಂಗಳಿ ಸೇರಿತ್ತು. ರಸ್ತೆಯ ತುಂಬೆಲ್ಲಾ ಬಂಡಿಗಳನ್ನು ಇಟ್ಟುಕೊಂಡು ಹೂವು-ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ಆದ್ದರಿಂದ ಈ ರಸ್ತೆಯಲ್ಲಿ ಹಾದು ಹೋಗುವುದೇ ಸಾಹಸ ಎಂಬಂತೆ ಆಗಿತ್ತು. ಇತ್ತ, ರಾಮ ಮಂದಿರ ವೃತ್ತ, ಸೇಡಂ ರಸ್ತೆ, ಶಹಾಬಜಾರ ನಾಕಾ ಸಮೀಪವೂ ಬಿರುಸಿನಿಂದ ವ್ಯಾಪಾರ ನಡೆಯಿತು.

ಪೂಜೆಗಾಗಿ ಹೂವು, ಹಣ್ಣು, ಬಾಳೆದಿಂಡು, ಕಬ್ಬು ಮೊದಲಾದವನ್ನು ಖರೀದಿಸಲು ಮುಗಿಬಿದ್ದ ದೃಶ್ಯ ಸಾಮಾನ್ಯವಾಗಿ ಕಂಡು ಬಂತು. ಸಂಜೆ  ಹೊತ್ತು ಮಳೆ ಸುರಿಯುತ್ತಿದ್ದಾಗಲೂ ಜನರು ಖರೀದಿಯಲ್ಲಿ ತೊಡಗಿದ್ದರು. ತರಕಾರಿ ಖರೀದಿಯಲ್ಲೂ ಜನರು ತೊಡಗಿದ್ದರು. ಕೊರೊನಾ ನಿಯಂತ್ರಣಕ್ಕಾಗಿ ಲಾಕ್‌ಡೌನ್‌  ಜಾರಿಗೊಳಿಸಿದ್ದ ಹಬ್ಬಗಳು ಸೊರಗಿ ಹೋಗಿದ್ದವು. ಈಗ ಅನ್‌
ಲಾಕ್‌ ಮಾಡಿದ್ದರಿಂದ ಸೋಂಕಿನ ಭಯವಿಲ್ಲದೇ ಹಬ್ಬದ ಖರೀದಿಯಲ್ಲಿ  ತೊಡಗಿಸಿಕೊಂಡಿದ್ದರು.

ಕಲಬುರಗಿ ನಗರದಲ್ಲಿ ಬಿರುಸಿನ ಮಳೆ
ಕಲಬುರಗಿ ನಗರದ ವ್ಯಾಪ್ತಿಯಲ್ಲಿ ಗುರವಾರ ಸಾಯಂಕಾಲ ಬಿರುಸಿನ ಮಳೆ ಆಯಿತು. ಒಂದು ಗಂಟೆಗೂ ಹೆಚ್ಚು ಹೊತ್ತು ನಗರದ ಹಲವಡೆ ಧಾರಾಕಾರ ಮಳೆ ಸುರಿಯಿತು. ಇದರಿಂದಾಗಿ ಲಾಲಗೇರಿ ಕ್ರಾಸ್‌, ಖಾಜಾ ಬಂದಾ ನವಾಜ… ಆಸ್ಪತ್ರೆ, ಬ್ರಹ್ಮಪುರ, ಮುಸ್ಲಿಂ ಚೌಕ್‌ ಸೇರಿ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿತ್ತು. ಕಲಬುರಗಿಯ ವೆಂಕಟೇಶ್ವರ ನಗರ, ರಾಜಾಪುರ ಬಡಾವಣೆ ಹಾಗೂ ಆಳಂದ ರಸ್ತೆಗಳಲ್ಲಿ ಮಳೆಯ ಕಾಲಕ್ಕೆ ಗಾಳಿಯೂ ಬೀಸಿದ್ದರಿಂದ ಮರದ ಕೊಂಬೆಗಳು ಮುರಿದು ರಸ್ತೆಯಲ್ಲಿ ಬಿದ್ದವು. ರಾಜಾಪುರ ಬಡಾವಣೆ ಹಾಗೂ
ಆಳಂದ ರಸ್ತೆಗಳಲ್ಲಿ ಎರಡು ಮರಗಳು ಬಿದ್ದಿದ್ದವು. ಪಾಲಿಕೆ ಮತ್ತು ಜೆಸ್ಕಾಂ ಸಿಬ್ಬಂದಿ ದೌಡಾಯಿಸಿ ಬಿದ್ದಿರುವ ಟೊಂಗೆಗಳನ್ನು ತೆರವುಗೊಳಿಸಿದರು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.