ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ


Team Udayavani, Jan 18, 2022, 7:11 PM IST

ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ

ವಾಡಿ: ತಡೆ ಹಿಡಿಯಲಾದ 18 ದಿನದ ಬಾಕಿ ವೇತನ ಬಿಡುಗಡೆ ಹಾಗೂ ಬೋಗಸ್ ಬಿಲ್ ಹಾಕುವಂತೆ ಕಾಯಕ ಬಂದುಗಳ ಮೇಲೆ ಒತ್ತಡ ಹೇರುತ್ತಿರುವ ಗ್ರಾಪಂ ಸದಸ್ಯರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಇಂಗಳಗಿ ಗ್ರಾಪಂ ವ್ಯಾಪ್ತಿಯ ನರೇಗಾ ಕೂಲಿ ಕಾರ್ಮಿಕರು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಮಂಗಳವಾರ ಪಂಚಾಯತಿ ಮುಂದೆ ಜಮಾಯಿಸಿ ಘೋಷಣೆ ಕೂಗುವ ಮೂಲಕ ಪಿಡಿಒ ರೇಷ್ಮಾ ಕೋತ್ವಾಲ್ ಮತ್ತು ಗ್ರಾಪಂ ಅಧ್ಯಕ್ಷ ಸುಭಾಸ ಯಾಮೇರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನರೇಗಾ ಯೋಜನೆಯಡಿ ಇಂಗಳಗಿ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 500 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. 18 ದಿನಗಳು ಕಳೆದರೂ ಕಾರ್ಮಿಕರ ಖಾತೆಗೆ ಶ್ರಮದ ವೇತನ ಜಮೆ ಮಾಡಿಲ್ಲ. ಇದರಿಂದ ಕಾರ್ಮಿಕರ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ದುಡಿಯುವ ಕೈಗಳಿಗೆ ಕೆಲಸವಿಲ್ಲದ ಗಳಿಗೆಯಲ್ಲಿ ಕೆಸಲ ಕೊಟ್ಟು ವೇತನ ಪಾವತಿಸಲೆಂದೇ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತರಲಾಗಿದೆ. ಆದರೆ ಪಂಚಾಯತಿ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ಧೋರಣೆಯಿಂದಾಗಿ ಕಾರ್ಮಿಕರು ವೇತನದಿಂದ ವಂಚಿತರಾಗಿದ್ದಾರೆ. ಅಲ್ಲದೆ ಕುಂದನೂರು ಗ್ರಾಮದಿಂದ ಚುನಾಯಿತರಾದ ಕೆಲ ಪಂಚಾಯಿತಿ ಸದಸ್ಯರು ತಮ್ಮ ಸ್ವಾರ್ಥಕ್ಕಾಗಿ ನರೇಗಾ ಯೋಜನೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಬೋಗಸ್ ಹಾಜರಿ ಹಾಕುವಂತೆ ಕಾಯಕ ಬಂದುಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ದುಡಿಯುವ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಇಂತಹ ಜನಪ್ರತಿನಿಧಿಗಳಿಂದ ಯೋಜನೆಯೂ ದುರ್ಬಳಕೆಯಾಗುತ್ತಿದೆ. ಇದನ್ನು ಪ್ರಶ್ನಿಸಿದರೆ ಕುಂದನೂರಿನ ಕೆಲ ಪುಡಾರಿಗಳಿಂದ ಹಲ್ಲೆ ಮಾಡುವ ಬೆದರಿಕೆಗಳು ಬಂದಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಬೋಗಸ್ ಹಾಜರಿ ಹಾಕಿಸಿಕೊಳ್ಳಲು ಕಾಯಕ ಬಂದುಗಳ ಮೇಲೆ ಒತ್ತಡ ಹೇರುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅಕ್ರಮ ಹಾಜರಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಸಿಐಟಿಯು ಚಿತ್ತಾಪುರ ತಾಲೂಕು ಅಧ್ಯಕ್ಷೆ ಶೇಖಮ್ಮ ಕುರಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಸಾಯಬಣ್ಣ ಗುಡುಬಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನರೇಗಾ ಕಾರ್ಮಿಕರಾದ ವಿಜಯಲತಾ ಸಂಕಾ, ಗಿಡ್ಡಮ್ಮ ಪವಾರ, ಮಲ್ಲಮ್ಮ ಸಂಕಾ, ಮಲ್ಲಪ್ಪ ನಾಟೀಕಾರ, ಜೈರಾಬಿ, ಜಗದೇವಿ ಪೂಜಾರಿ, ನಾಗಮ್ಮ ಸೇರಿದಂತೆ ನೂರಾರು ಜನ ನರೇಗಾ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.