ಕಲಬುರಗಿಯಲ್ಲಿ ಪ್ರಧಾನಿ ಭರ್ಜರಿ ರೋಡ್ ಶೋ… ಲಕ್ಷಾಂತರ ಮಂದಿ ಭಾಗಿ
Team Udayavani, May 2, 2023, 10:07 PM IST
ಕಲಬುರಗಿ: ಕಲ್ಯಾಣದ ಹೆಬ್ಬಾಗಿಲು ಕಲಬುರಗಿ ನಗರದಲ್ಲಿ ಮಂಗಳವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮೂಲಕ ಚುನಾವಣೆ ಕಣದಲ್ಲಿ ಭಾರೀ ಸಂಚಲನ ಮೂಡಿಸಿದರು. ಅಲ್ಲದೆ, ಎಐಸಿಸಿ ಅಧ್ಯಕ್ಷ ಡಾ|ಮಲ್ಲಿಕಾರ್ಜುನ ಖರ್ಗೆ ಭದ್ರಕೋಟೆ ಮತ್ತು ತವರು ನೆಲಕ್ಕೆ ಲಗ್ಗೆ ಇಟ್ಟು ದೊಡ್ಡ ಹವಾ ಸೃಷ್ಟಿಸಿದರು.
ನಗರದ ವರ್ತುಲ ರಸ್ತೆಯ ಕೆಎಂಎಫ್ ಡೈರಿಯಿಂದ ಮಹಾನಗರದ ಹೃದಯ ಭಾಗ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದವರೆಗೂ ಮಂಗಳವಾರ ಸಂಜೆ ಬೃಹತ್ರೋಡ್ ಶೋ ನಡೆಸಿದ ಪ್ರಧಾನಿ ಮೋದಿ, ಮುಕ್ತಾಯದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸುತ್ತು ಹಾಕಿ ಕೊನೆಗೊಳಿಸಿದರು. 6 ಕಿ.ಮೀ. ಉದ್ದದವರೆಗೆ ಸುಮಾರು ಒಂದೂವರೆ ತಾಸು ನಡೆದ ರೋಡ್ ಶೋದಲ್ಲಿ ಲಕ್ಷಾಂತರ ಜನ ಪಾಲ್ಗೊಂಡು ಪ್ರಧಾನಿಯತ್ತ ಕೈ ಮಾಡಿ ಅಭಿಮಾನ ಮೆರೆದರು.
ಶಾಸಕ- ಅಭ್ಯರ್ಥಿಗಳಿಗೆ ವ್ಯವಸ್ಥೆ: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ತೆರೆದ ವ್ಯಾನ್ ದಲ್ಲಿ ಕಲಬುರಗಿ ಸಂಸದ ಡಾ.ಉಮೇಶ ಜಾಧವ್, ಕೇಂದ್ರದ ಸಚಿವ ಭಗವಂತ ಖೂಬಾ ಮಾತ್ರ ಪಾಲ್ಗೊಂಡಿದ್ದರು. ಹೀಗಾಗಿ ಕಲಬುರಗಿ ದಕ್ಷಿಣ, ಕಲಬುರಗಿ ಉತ್ತರ, ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಅಭ್ಯರ್ಥಿಗಳಿಗೆ ಮತ್ತು ಶಾಸಕರಿಗೆ ರಸ್ತೆಯುದ್ದಕ್ಕೂ ಅಲ್ಲಲ್ಲಿ ವಿಶೇಷವಾಗಿ ನಿಲ್ಲುವ ವ್ಯವಸ್ಥೆ ಮಾಡಲಾಗಿತ್ತು.
ದೂರವಾದ ಮಳೆ: ಮಧ್ಯಾಹ್ನ ಸಂಜೆ ಹೊತ್ತಲ್ಲಿ ಮಳೆ ಬರಬಹದು ಎಂಬ ಆತಂಕ ಕಾಡಿತ್ತು. ಆದರೆ ಒಂದು ಹನಿ ಮಳೆ ಬಾರದೇ ನಿರಾಂತಕವಾಗಿ ಪ್ರಧಾನಿ ರೋಡ್ ಶೋ ನಡೆಯಿತು.
ಹಸಿಗೂಸಿನೊಂದಿಗೆ ಆಗಮಿಸಿದ ಮಹಿಳೆಯರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನೋಡಲು ಒಂದು ತಿಂಗಳಿನ ಹಸುಗೂಸಿನೊಂದಿಗೆ ಮಹಿಳೆಯರು ಆಗಮಿಸಿರುವುದು ವಿಶೇಷವಾಗಿ ಕಂಡು ಬಂತು.
ಯುವಕರಲ್ಲದೇ ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ ರೋಡ್ ಶೋದಲ್ಲಿ ಪಾಲ್ಗೊಂಡಿದ್ದರು. ಜನಪ್ರನಿಧಿಗಳು ಸಹ ಸಾರ್ವಜನಿಕರ ಸಾಲಿನಲ್ಲಿ ನಿಂತು ನಾಯಕನಿಗೆ ಪುಷ್ಪಾರ್ಚನೆ ಮಾಡಿದರು.
ಅಭ್ಯರ್ಥಿ ಗಳು ವಾಹನದಲ್ಲಿ ಇರಬೇಕಿತ್ತು: ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಪ್ರಧಾನಿ ಅವರ ರೋಡ್ ಶೋ ವಾಹನದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ. ಉಮೇಶ ಜಾಧವ್ ಜತೆಗೇ ಕಲಬುರಗಿ ದಕ್ಷಿಣ ಕ್ಷೇತ್ರ ಹಾಗೂ ಕಲಬುರಗಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ದತ್ತಾತ್ರೇಯ ಪಾಟೀಲ್ ರೇವೂರ ಹಾಗೂ ಚಂದು ಪಾಟೀಲ್ ಸಹ ಪಾಲ್ಗೊಳ್ಳಬೇಕಿತ್ತು ಎಂಬ ಅಭಿಪ್ರಾಯ ಸಾರ್ವಜನಿಕರಿಂದ ಕೇಳಿ ಬಂತು.
ಇದನ್ನೂ ಓದಿ: Perinje: ಕಾರು ಆಟೋ ರಿಕ್ಷಾಕ್ಕೆ ಢಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಬಾಲಕ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ