ಕಲಬುರಗಿಯಿಂದ ಖಾಸಗಿ ಬಸ್ ಗಳ ಓಡಾಟ ಬಂದ್: ಜಿಲ್ಲಾಧಿಕಾರಿ ಆದೇಶ
Team Udayavani, Mar 18, 2020, 3:19 PM IST
ಕಲಬುರಗಿ: ಕೋವಿಡ್ -19 ಸೋಂಕು ಆತಂಕದ ಹಿನ್ನೆಲೆಯಲ್ಲಿ ಕಲಬುರಗಿಯಿಂದ ಬೆಂಗಳೂರು ಹಾಗೂ ಇತರ ಜಿಲ್ಲೆಗಳು ಸೇರಿದಂತೆ ಹೊರರಾಜ್ಯಗಳಿಗೆ ಹೋಗುವ ಎಲ್ಲಾ ಖಾಸಗಿ ಬಸ್ ಗಳ ಓಡಾಟ ಇಂದಿನಿಂದಲೇ ಸ್ಥಗಿತಗೊಳ್ಳಲು ಜಿಲ್ಲಾಧಿಕಾರಿ ಶರತ್. ಬಿ ಆದೇಶಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ನಡೆದ ಖಾಸಗಿ ಟ್ರಾವೆಲರ್ಸ್ ಮತ್ತು ಬುಕ್ಕಿಂಗ್ ಏಜೆಂಟರ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದರು.
ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಿಗೆ ತೆರಳುವ ಬಸ್ ಗಳು ಸೇರಿ ಎಲ್ಲಾ ಬಸ್ ಗಳು ರದ್ದು ಮಾಡಬೇಕು ಹಾಗೂ ಈಗಾಗಲೇ ಬುಕ್ಕಿಂಗ್ ಮಾಡಿರುವ ಟಿಕೆಟ್ ರದ್ದು ಮಾಡುವಂತೆ ಬಸ್ ಮಾಲೀಕರು ಮತ್ತು ಏಜಂಟರಿಗೆ ಆದೇಶಿಸಿದರು.
ಅಲ್ಲದೇ, ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ ಆದೇಶದವರೆಗೆ ಇದನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…