ಪ್ರಿಯಾಂಕ್‌ ಬಚ್ಚಾ ಅಲ್ಲ ಲುಚ್ಚಾ: ಗುತ್ತೇದಾರ್‌


Team Udayavani, Apr 15, 2018, 11:12 AM IST

gul–1.jpg

ಚಿತ್ತಾಪುರ: ಬಿಜೆಪಿ ಅಭ್ಯರ್ಥಿ ಪರ ಮೇ 12ರಂದು ಮತ ಹಾಕುವುದರ ಮೂಲಕ ಮೇ 15 ರಂದು ನಡೆಯುವ ಮತ ಎಣಿಕೆಯಲ್ಲಿ ಪ್ರಿಯಾಂಕ್‌ ಖರ್ಗೆ ಅವರ ಠೇವಣಿ ಜಪ್ತಿಯಾಗುವಂತೆ ಮಾಡಬೇಕು ಎಂದು ಶಾಸಕ ಮಾಲಿಕಯ್ನಾ ಗುತ್ತೇದಾರ್‌ ಕರೆ ನೀಡಿದರು.

ಪಟ್ಟಣದ ಬಜಾಜ್‌ ಕಲ್ಯಾಣ ಮಂಟಪದಲ್ಲಿ ಚಿತ್ತಾಪುರ ಬಿಜೆಪಿ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ ಮಾಲೀಕಯ್ನಾ ಗುತ್ತೇದಾರ್‌ ಅವರಿಗೆ ಸನ್ಮಾನ, ಬಿಜೆಪಿ ಸೇರ್ಪಡೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಈ ಬಾರಿಯ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಸೋಲುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದರು. ಪ್ರಿಯಾಂಕ್‌ ಖರ್ಗೆ ಅವರಿಗೆ ಬಚ್ಚಾ ಅಂದ್ರೆ ಸಿಟ್ಟು ಬರುತ್ತಿದೆ. ಹಾಗಾದರೆ ಅವರಿಗೆ ಲುಚ್ಚಾ ಅನ್ನಬೇಕಾ. ಅವರು ನನ್ನ ಎದುರು ಬಚ್ಚಾನೇ. ಆದ್ದರಿಂದ ಅವರಿಗೆ ಬಚ್ಚಾ ಅಂದಿದ್ದೇನೆ. ಆದರೆ ಅವರಿಗೆ ಬಚ್ಚಾ ಅನ್ನಬಾರದಂತೆ ಅದಕ್ಕೆ ಲುಚ್ಚಾ ಅನ್ನುತ್ತೇನೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ನನ್ನ ತಂದೆ ಹತ್ತಿರ ಬಂದು ನನಗೆ ಸಚಿವ ಸ್ಥಾನ ಕೊಡಿಸಿ ಎಂದು ಕೇಳಿಕೊಂಡವರು. ಆದರೆ ನಾನು ಯಾರ ಹತ್ತಿರವೂ ಸಚಿವ ಸ್ಥಾನ ಕೊಡಿಸಿ ಎಂದು ಕೇಳಿದವನಲ್ಲ. ಬೇಕಾದರೆ ಇದನ್ನು ಸುಳ್ಳು ಎಂದು ಹೇಳಲಿ. ಅವರು ನಂಬಿರುವ ಬುದ್ಧನ ಮಂದಿರಲ್ಲಿ ಆಣೆ ಮಾಡಲಿ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುದ್ಧನ ಮಂದಿರ ಕಟ್ಟಿಸಲು 900 ಕೋಟಿ ರೂ. ದೇಣಿಗೆ ಬಂದಿದೆ. 

ಆದರೆ ಅದರಲ್ಲಿ ಖರ್ಚಾಗಿದ್ದು ಮಾತ್ರ 35 ಕೋಟಿ ರೂ. ಅಷ್ಟೇ. ಇದಕ್ಕೆ ಯಾವುದೇ ಸಮಿತಿ ಇಲ್ಲದೇ ಕೇವಲ ಅವರ ಕುಟುಂಬದವರನ್ನೆ ಸೇರಿಸಿಕೊಂಡು ಟ್ರಸ್ಟ್‌ ಮಾಡಿಕೊಂಡಿದ್ದಾರೆ. ಹೊರಗಿನವರನ್ನು ಸೇರಿಸಿಕೊಂಡು ಸಮಿತಿ ಮಾಡಿದರೆ ಎಲ್ಲಿ ನಮ್ಮ ಬಂಡವಾಳ ಹೊರಗೆ ಬೀಳುತ್ತದೆಯೋ ಎನ್ನುವ ಭಯ ಖರ್ಗೆ ಅವರಿಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಪಕ್ಷಕ್ಕೆ 2002ರಲ್ಲಿ ಸೇರಿ 2018ರ ತನಕ ವನವಾಸ ಅನುಭವಿಸಿದ್ದೇನೆ. ಸೀತಾ 14 ವರ್ಷ ಮಾತ್ರ ವನವಾಸ ಅನುಭವಿಸಿದ್ದಳು. ಆದರೆ ನಾನು ಕಾಂಗ್ರೆಸ್‌ ಪಕ್ಷದಲ್ಲಿ ಯಾಕಾರೇ ಸೇರಿನಿ ಅಂತಾ ಕೊರಗಿ ಕೊರಗಿ 16 ವರ್ಷಗಳ ಕಾಲ ಯಾವುದೇ ಹುದ್ದೆಗಳನ್ನು ಪಡೆಯದೇ ವನವಾಸ ಅನುಭವಿಸಿದ್ದು ಯಾರ ಮುಂದೆ ಹೇಳಲಿ ಎಂದು ಶಾಸಕ ಮಾಲಿಕಯ್ಯ ಗುತ್ತೇದಾರ ಅಸಮಾಧಾನ ವ್ಯಕ್ತಪಡಿಸಿದರು.

ನನಗೆ ಅಧಿಕಾರದ ಆಸೆ ಇರಲಿಲ್ಲ. ನಾನು ಆರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಅದಕ್ಕೆ ನನಗೆ ಸಚಿವ ಸ್ಥಾನ ಕೊಡಿ ಎಂದು ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಕೊಡಲಿಕ್ಕೆ ಬಿಡಲಿಲ್ಲ. ಇಲ್ಲಿಯವರೆಗೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಸಿಂಗ್‌ ಆಟ ನಡಿತಿತ್ತು. ಆದರೆ ಇದೀಗ ಸಂಗ್ಯಾ ಬಾಳ್ಯನ ಆಟ ನಡೆಯೋದಿಲ್ಲ. ಹೈಕದಲ್ಲಿ ಕಾಂಗ್ರೆಸ್‌ನ 24 ಶಾಸಕರಿದ್ದರು. ಆದರೆ ಈ ಬಾರಿ ಬಿಜೆಪಿ 18 ರಿಂದ 20 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು ಸಿಗಲಿದೆ. ಈಡಿಗ ಸಮಾಜದ ಮೂಲ ಕಸಬನ್ನು
ಕಾಂಗ್ರೆಸ್‌ ಪಕ್ಷ ಕಸಿದುಕೊಂಡಿದೆ. ಬಿಜೆಪಿ ಸರ್ಕಾರ ಬಂದ ನಂತರ ಆಂಧ್ರದಂತೆ ಕರ್ನಾಟಕದಲ್ಲಿ ಸೇಂದಿ ಸೊಸೈಟಿ ಮೂಲಕ ಆರಂಭಿಸಲಾಗುವುದು. 
ಮಾಲಿಕಯ್ಯ ಗುತ್ತೇದಾರ್‌, ಶಾಸಕ, ಅಫಜಲಪುರ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.