ಕಾಂಗ್ರೆಸ್‌ಗೆ ಬಿಜೆಪಿ ಕಂಟಕವಲ್ಲ


Team Udayavani, Jan 17, 2021, 12:22 PM IST

priyank-kharge-speech

ಚಿತ್ತಾಪುರ: ಕಾಂಗ್ರೆಸ್‌ ನಾಯಕರು ಚುನಾವಣೆಯಲ್ಲಿ ಸೋತರೇ ಅದು ಕಾಂಗ್ರೆಸ್‌ನವರಿಂದಲೇ ಹೊರೆತು ಬಿಜೆಪಿ ಅವರಿಂದ ಅಲ್ಲ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದರು.

ಪಟ್ಟಣದ ಬಜಾಜ್‌ ಕಲ್ಯಾಣ ಮಂಟಪದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಚಿತ್ತಾಪುರ ಹಾಗೂ ವಾಡಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಬೆಂಬಲಿತ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡದ ಅವರು, ಕಾಂಗ್ರೆಸ್‌ನವರು ಕಟ್ಟೆಗಳ ಮೇಲೆ ಕುಳಿತು ಹರಟೆ ಹೊಡೆಯುತ್ತಾ ಕಾಂಗ್ರೆಸ್‌ ಪಕ್ಷದಲ್ಲಿದ್ದು, ಕಾಂಗ್ರೆಸ್‌ ವಿರುದ್ಧವೇ ಮಾತನಾಡುವುದನ್ನು ನಿಲ್ಲಿಸಬೇಕು. ಅಂದಾಗ ಮಾತ್ರ ಕಾಂಗ್ರೆಸ್‌ ನವರಿಗೆ ಸೋಲಿಸಲು ಬಿಜೆಪಿಯವರಿಗೆ ಸಾಧ್ಯವಾಗುವುದಿಲ್ಲ ಎಂದರು.

ಸಿಎಂ ಬಿ.ಎಸ್‌ ಯಡಿಯೂರಪ್ಪ ನವರ ಸ್ಥಿತಿ ಹೇಗಾಗಿದೆ ಎಂದರೆ ಅಂದೇರಿ ನಗರ್‌ ಮೇ ಚೌಪಟ್‌ ರಾಜಾ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅವರ ಅಧಿ ಕಾರ ಸಿ.ಡಿ ಮೇಲೆ ನಿಂತಿದೆ. ಸಿ.ಡಿ ಬಹಿರಂಗಗೊಂಡರೇ ಅವರು ಅಧಿ ಕಾರ ಕಳೆದುಕೊಳ್ಳಲಿದ್ದಾರೆ. ಇದನ್ನು ನಾವು ಕಾಂಗ್ರೆಸ್‌ನವರು ಹೇಳುತ್ತಿಲ್ಲ. ಬಿಜೆಪಿಯವರೇ ಹೇಳುತ್ತಿದ್ದಾರೆ. ಇದರಿಂದ ಕೆಲವೇ ದಿನಗಳಲ್ಲಿ ಬಿಎಸ್‌ವೈ ಮುಕ್ತ ಬಿಜೆಪಿ ಆಗುವುದಲ್ಲದೇ ಬಿಜೆಪಿ ಮುಕ್ತ ಕರ್ನಾಟಕ ಆಗುವ ದಿನಗಳು ದೂರವಿಲ್ಲ ಎಂದು ಭವಿಷ್ಯ ನುಡಿದರು.

ಇದನ್ನೂ ಓದಿ:ಬೆಳಗಾವಿಗೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ: ಗಣ್ಯರ ಸ್ವಾಗತ

ಚಿತ್ತಾಪುರ ತಾಲೂಕು ಕಾಂಗ್ರೆಸ್‌ ಭದ್ರಕೋಟೆಯಾಗಿದೆ ಎಂದು ಹೇಳಿದ ಶಾಸಕರು, ಜನರ, ರೈತರ, ಹಿಂದುಳಿದವರ, ಬಡವರ ಪರ ಆಡಳಿತ ಒದಗಿಸುವ ಕೆಲಸ ಕಾಂಗ್ರೆಸ್‌ನಿಂದ ಸಾಧ್ಯ. ಹಾಗಾಗಿ ಪಕ್ಷದ ಧ್ಯೇಯೋದ್ದೇಶಗಳನ್ನು ಜನರಿಗೆ ತಲುಪಿಸಿ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದರು. ಕಲಬುರಗಿ ಜಿಲ್ಲೆಯಲ್ಲಿ ಒಬ್ಬರೇ ಒಬ್ಬರು ಸಚಿವರಿಲ್ಲ. ಇದರಿಂದ ಕಲ್ಯಾಣ ಕರ್ನಾಟಕ ಅನುದಾನ ಪಡೆದುಕೊಳ್ಳುವಲ್ಲಿ ವಿಫಲವಾಗಿದೆ. ಇಲ್ಲಿನ ಬಿಜೆಪಿ ಶಾಸಕರು ಸಿಎಂ ಹತ್ತಿರ ಕೈ ಕಟ್ಟಿ ನಿಲ್ಲುತ್ತಾರೆ. ರಾಜ್ಯದ ಸಂಸದರು ಪ್ರಧಾನಿ ನರೇಂದ್ರ ಮೋದಿ ಹತ್ತಿರ ಕೈ ಕಟ್ಟಿ ನಿಲ್ಲುತ್ತಾರೆ. ಹೀಗಾದರೆ ಅನುದಾನ] ಬಿಡುಗಡೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ತಿಪ್ಪಣಪ್ಪ ಕಮಕನೂರ ಮಾತನಾಡಿ, ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅ ಧಿಕಾರಕ್ಕೆ ಬಂದರೇ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಅಧಿ ಕಾರಕ್ಕೆ ಬಂದು ವರ್ಷಗಳೇ ಕಳೆದರೂ ಇಲ್ಲಿಯವರೆಗೆ ಎಸ್‌ಟಿಗೆ ಸೇರಿಸಿಲ್ಲ. ಆದ್ದರಿಂದ ಕಲ್ಯಾಣ ಕರ್ನಾಟಕದವರು ಜನಪ್ರತಿನಿಧಿಗಳು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಪಕ್ಷಕ್ಕೆ ಬರಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ತಾಲೂಕಿನ 24 ಪಂಚಾಯಿತಿಗಳ ಕಾಂಗ್ರೆಸ್‌ ಬೆಂಬಲಿತ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು. ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್‌ ಕರದಾಳ, ಜಿಪಂ ಸದಸ್ಯ ಶಿವಾನಂದ ಪಾಟೀಲ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಮುಕ್ತಾರ ಪಟೇಲ್‌ ಮಾತನಾಡಿದರು. ವಾಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹೆಮೂದ್‌ ಸಾಹೇಬ್‌, ತಾಪಂ ಅಧ್ಯಕ್ಷ ಜಗಣ್ಣಗೌಡ ರಾಮತೀರ್ಥ, ಜಿಪಂ ಸದಸ್ಯ ಶಿವರುದ್ರ ಭೀಣಿ, ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ, ಮುಖಂಡರಾದ ರಮೇಶ ಮರಗೋಳ, ಶ್ರೀನಿವಾಸ ಸಗರ, ಅಜೀಜ್‌ ಸೇs…, ವೀರಣ್ಣಗೌಡ ಪರಸರೆಡ್ಡಿ, ರಾಜಶೇಖರ ತಿಮ್ಮನಾಕ್‌, ಬಸವರಾಜ ಪಾಟೀಲ್‌ ಹೇರೂರ್‌, ಸುನೀಲ್‌ ದೊಡ್ಮನಿ, ಜಯಪ್ರಕಾಶ ಕಮಕನೂರ್‌, ಮನ್ಸೂರ್‌ ಪಟೇಲ್‌, ಶೇಖ ಬಬು, ಶಿವಾಜಿ ಕಾಶಿ, ಸ್ವಪ್ನಾ ಪಾಟೀಲ್‌, ವಿನೋದ ಗುತ್ತೇದಾರ, ನಾಮದೇವ ರಾಠೊಡ, ನಾಗಯ್ಯ ಗುತ್ತೇದಾರ, ಜಗದೀಶ ಚವ್ಹಾಣ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.