ದಿಕ್ಕು ತಪ್ಪಿದ ಪಿಎಸ್‌ಐ ಪರೀಕ್ಷಾ ಅಕ್ರಮ ತನಿಖೆ: ಪ್ರಿಯಾಂಕ್ ಖರ್ಗೆ ಆರೋಪ


Team Udayavani, May 13, 2022, 2:21 PM IST

priyank-kharge

ಕಲಬುರಗಿ: ಪಿಎಸ್‌ಐ ಪರೀಕ್ಷಾ ಅಕ್ರಮದ ಕುರಿತು ಸರಕಾರ ನಡೆಸುತ್ತಿರುವ ಸಿಐಡಿ ತನಿಖೆಯ ದಿಕ್ಕು ತಪ್ಪಿದೆ. ರಾಜ್ಯದ ನಾನಾ ಕಡೆಗಳಲ್ಲಿ ಅಕ್ರಮಗಳು ಬಯಲಾಗುತ್ತಿದ್ದರೂ ತನಗೇನು ಸಂಬಂಧವೇ ಇಲ್ಲ ಎನ್ನುವಂತೆ ಸರಕಾರ ವರ್ತನೆ ಮಾಡುತ್ತಿದೆ. ರುದ್ರಗೌಡ ಸೇರಿದಂತೆ ಕಿಂಗ್‌ಪಿನ್‌ಗಳೇ ಸವಾಲು ಹಾಕುತ್ತಿದ್ದರೂ, ಮುಖ್ಯಮಂತ್ರಿಯಾದಿಯಾಗಿ ಗೃಹ ಸಚಿವರು ಸಮರ್ಪಕ ತನಿಖೆಗೆ ಆಸಕ್ತಿ ತೋರುತ್ತಿಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಅಕ್ರಮ ನಡೆಸಿದವರು ನೇರವಾಗಿ ಸರಕಾರಕ್ಕೆ ಚಾಲೆಂಜ್ ಮಾಡುತ್ತಿದ್ದರೂ, ಸರಕಾರ ಕೈಲಾದಂತೆ ಸುಮ್ಮನೆ ಕುಳಿತಿದೆ. ವಿಚಾರಣೆ ವೇಳೆ ಉನ್ನತ ಅಧಿಕಾರಿಗಳು, ಮಂತ್ರಿಗಳ ಹೆಸರು ಹೇಳುತ್ತೇನೆ. ಬಂಧಿಸುತ್ತೀರಾ? ಎಂದು ರುದ್ರಗೌಡ ಪ್ರಶ್ನಿಸಿದ್ದಾನೆಂದು ಗೊತ್ತಾಗಿದೆ. ಆದರೂ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮತ್ತು ತಂಡವನ್ನು ಉಳಿಸುವ ನಿಟ್ಟಿನಲ್ಲಿ ಇಡೀ ಸರಕಾರ ಒಂದು ಅಕ್ರಮವನ್ನು ಸರಿಯಾಗಿ ತನಿಖೆ ಮಾಡದೆ ಮುಚ್ಚಿ ಹಾಕುವ ನಿಟ್ಟಿನಲ್ಲಿ ಬೇಕಾದ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಆಪಾದನೆ ಮಾಡಿದರು.

ಸರಕಾರ ಬೀಳುವ ಭಯ: ಬಂಧಿತರೇ ಸವಾಲು ಹಾಕುವಾಗ ಸರಕಾರ ಸುಮ್ಮನಿದ್ದರೆ ಹೇಗೆ? ಬಂಧಿತರು ಸರಕಾರ ಮಂತ್ರಿಗಳು, ಅಧಿಕಾರಿಗಳ ಹೆಸರು ಹೇಳಿದರೆ ಸರಕಾರ ಬಿದ್ದು ಹೋಗುವ ಭಯವಿದೆ ಎಂದು ಛೇಡಿಸಿದರು. ಬೆಂಗಳೂರಿನಲ್ಲಿನ ಮಹಾಕಿಂಗ್‌ಪಿನ್‌ ಗಳನ್ನು ಯಾಕೆ ಬಂಧಿಸುತ್ತಿಲ್ಲ. ನನಗೆ ಮೂರು ನೋಟೀಸು ಕೊಡುವ ಸರಕಾರ, ಅಧಿಕಾರಿಗಳಿಗೆ, ಮಂತ್ರಿಗಳಿಗೆ ಯಾಕೆ ಕೊಡುವುದಿಲ್ಲ ಎಂದು ಪ್ರಶ್ನಿಸಿದರು. ನೋಟೀಸ್‌ಗೆ ಏನು ಉತ್ತರ ಕೊಡಬೇಕು ಅದನ್ನು ಕಾನೂನು ಬದ್ಧವಾಗಿಯೇ ನೀಡಿದ್ದೇನೆ. ಆದರೂ, ಬಿಜೆಪಿಯವರಿಗೆ ಸುಮ್ಮೆ ಆಪಾದನೆ ಮಾಡುವುದೇ ದೊಡ್ಡ ಕೆಲಸವೆನ್ನುವಂತೆ ಬಿಂಬಿಸುತ್ತಿದ್ದಾರೆ ಎಂದರು.

ಉಳಿದ ತನಿಖೆ ಯಾವಾಗ?  ಪೇಪರ್ ಸೆಟ್ ಮಾಡೊದು, ಉತ್ತರ ಹೆಕ್ಕಿ ತೆಗೆಯುವುದು, ಸರಿಯಾದ ಉತ್ತರ ಟಿಕ್ ಮಡುವುದು, ನೇಮಕಾತಿ ಪಟ್ಟಿ ತಯಾರು ಮಾಡುವವರು ಯಾರು? ಎಂದು ಪ್ರಶ್ನಿಸಿದರು. ಕಲಬುರಗಿ, ಬೆಳಗಾವಿ, ಹಾಸನ, ವಿಜಯಪುರದಲ್ಲೂ ಅಕ್ರಮದ ಸದ್ದು ಎದ್ದಿದೆ. ಅದರ ತನಿಖೆ ಯಾರು ಮಾಡುತ್ತಾರೆ? ಉಳಿದ ಹಲವು ಎಲ್ಲಿದ್ದಾರೆ. ದಿವ್ಯಾ ಹಾಗರಗಿ ಪ್ರಕರಣದ ವಿಚಾರಣೆಯೇ ಸರಿಯಾಗಿ ನಡೆದಿಲ್ಲ. ಇದೆಲ್ಲವೂ ಸರಕಾರ ಬೇಕಂತಲೇ ಮಾಡಿ ಇಡೀ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ದೂರಿದರು.

ಇದನ್ನೂ ಓದಿ:ನಾನು ಹರಪನಹಳ್ಳಿ ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿ: ಆರುಂಡಿ ನಾಗರಾಜ್

ಡಿವೈಎಸ್ಪಿ ಶಾಂತಕುಮಾರ್ ಬಂಧನ ವಿಚಾರ ನನಗೆ ಗೊತ್ತಿಲ್ಲ. ಯಾವ ಕಾರಣಕ್ಕೆ ಶಾಂತಕುಮಾರ್‌ ರನ್ನು ಬಂಧಿಸಿದೆಂದು ಗೊತ್ತಿಲ್ಲ. ಪ್ರಕರಣದ ಸಂಬಂಧ ಸೂತ್ರಧಾರಿಗಳು, ಪಾತ್ರಧಾರಿಗಳು, ನಿರ್ಮಾಪಕರು, ನಿರ್ದೇಶಕರು ಸರ್ಕಾರದಲ್ಲೇ ಇದ್ದಾರೆ. ಅವರನ್ನೇ ಕೇಳಬೇಕು. ದಿವ್ಯಾ ಜೈಲಿಗೆ ಹೋಗಿದ್ದರೂ, ದಿಶಾ ಸಮಿತಿ, ಕೆಎನ್‌ಸಿ ಬೋರ್ಡ್ ಸದಸ್ಯೆಯಾಗಿರುವುದು ಸರಕಾರಕ್ಕೆ ನಾಚಿಕೆಗೇಡಲ್ಲವೇ ಎಂದು ಪ್ರಶ್ನಿಸಿದರು.

ಆಜಾನ್ ಕಿರಿಕಿರಿ ಯಾರು ಮಾಡಿದ್ದು?: ಆಜಾನ್ ಕುರಿತು ಸರಕಾರದ ನಡೆ ಆಕ್ಷೇಪಿಸಿದ ಪ್ರಿಯಾಂಕ್, ಮೊದಲು ಸುಖಾಸಮುಮ್ಮನೆ ಕಿರಿಕಿರಿ ಆರಂಭಿಸಿದ್ದುಯಾರು?. ಆಜಾನ್ ಬಗ್ಗೆ ಸುಪ್ರೀಂ ಕೋರ್ಟ್ ಗೈಡ್‌ಲೈನ್ ಇದೆ. ಸುಪ್ರೀಂ ಕೋರ್ಟ್ ಆದೇಶ ಇಂಪ್ಲಿಮೆಂಟ್ ಮಾಡಲು ಸರ್ಕಾರಕ್ಕೆ ಯಾಕೆ ಕಷ್ಟವಾಗ್ತಿದೆ. ಆಜಾನ್ ನೀಡಲು ಇಷ್ಟೇ ಡೆಸಿಬಲ್ ಶಬ್ದ ಬಳಸಬೇಕೆಂದು ರೂಲ್ ಮಸೀದಿ, ಮಂದಿರ, ಚರ್ಚ್ಗಳಿಗೂ ಅನ್ವಯಿಸುತ್ತದೆ. ಹೆಚ್ಚಿದ್ದರೆ, ಅನುಮತಿ ಪಡೆಯದಿದ್ದರೆ ನೋಟೀಸ್ ಕೊಡಿ. ಅದನ್ನು ಬಿಟ್ಟು ಇಷ್ಟು ದೊಡ್ಡ ಡ್ರಾಮಾ ಆಡುವ, ಆಡಿಸುವ ಅಗತ್ಯವಿರಲಿಲ್ಲ ಎಂದು ಚಾಟಿ ಬೀಸಿದರು.

ಆರ್‌ಎಸ್‌ಎಸ್ ಅಜಂಡಾ ಆಗಿರುವ ಮತಾಂತರ ಕಾಯಿದೆ ಜಾರಿಗೆ ತರಲು ತೋರುತ್ತಿರುವ ಉತ್ಸುಕತೆ, ಪಿಎಸ್‌ಐ ಅಕ್ರಮ ಬಯಲಿಗೆಳೆಯುವಲ್ಲಿ ಇಲ್ಲ ಎಂದ ಅವರು, ಅಶ್ವಥ್ ನಾರಾಯಣ ಅವರು ಎಂ.ಬಿ.ಪಾಟೀಲ ಅವರನ್ನು ಭೇಟಿ ಆಗಿರುವ ಕುರಿತು ನನಗೆ ಹೆಚ್ಚು ಗೊತ್ತಿಲ್ಲ. ಈ ಕುರಿತು ಡಿಕೆಶಿ ಅವರು ಆಗಲೇ ಹೇಳಿಕೆ ನೀಡಿದ್ದಾರಲ್ಲ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.