ಅನಂತಕುಮಾರ ವಿರುದ್ಧ ಪ್ರಿಯಾಂಕ್‌ ಫೇಸ್‌ಬುಕ್‌ ವಾರ್‌


Team Udayavani, Jan 19, 2018, 11:11 AM IST

gul-3.jpg

ವಾಡಿ: ಸಂವಿಧಾನ ಬದಲಿಸುವ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಚಿತ್ತಾಪುರ ಶಾಸಕ, ರಾಜ್ಯದ ಐಟಿ ಬಿಟಿ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಫೇಸ್‌ಬುಕ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನಂತಕುಮಾರ ಹೆಗಡೆ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ನೀಡಿರುವುದು ಅವರಿಗೆ ಸಂಬಂಧಿಸಿದ ಖಾತೆ ಮೂಲಕ ಯುವ ಜನರಿಗೆ ಒಳಿತು ಮಾಡುವುದಕ್ಕಾಗಿ ಹೊರತು ಕೀಳುಮಟ್ಟದ ರಾಜಕಾರಣ ಮಾಡಲು ಅಲ್ಲ. ಕೋಮು ದ್ವೇಷ ಹುಟ್ಟು ಹಾಕುವ ಹಾಗೂ ಸಂವಿಧಾನವನ್ನು ಬೇರೆಯೇ ಬರೆಯುವ ಆಕಾಂಕ್ಷೆ ಇದ್ದಲ್ಲಿ ಅನಂತಕುಮಾರ
ಹೆಗಡೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾಷಣ ಮಾಡಿಕೊಂಡೇ ದೇಶ ಸುತ್ತುವುದು ಸರಿ ಎನಿಸುತ್ತದೆ ಎಂದು ಗುಡುಗಿದ್ದಾರೆ.

ಹೆಗಡೆ ಅವರು ಕೇಂದ್ರ ಸಚಿವರಾದ ದಿನದಿಂದಲೂ ತಮ್ಮ ಹೊಣೆಗಾರಿಕೆ ಹಾಗೂ ಜವಾಬ್ದಾರಿ ಅರಿಯದೆ ಆರೋಗ್ಯಕರವಾಗಿರುವ ಸಮಾಜವನ್ನು ಕಲುಷಿತಗೊಳಿಸುವ ಕ್ರಿಯೆಯಲ್ಲೇ ನಿರಂತರವಾಗಿ ತೊಡಗಿದ್ದಾರೆ. ಇಡೀ ದೇಶದ ಯುವಜನರ ಯೋಗಕ್ಷೇಮ ನೋಡಿಕೊಳ್ಳಬೇಕಾದ ಜವಾಬ್ದಾರಿಯುತ ಸಚಿವರಾದ ಅವರು, ಮಂತ್ರಿಯಾದ ನಂತರ ಒಂದು ದಿನವೂ ತಮ್ಮ ಖಾತೆಯಿಂದ ಯುವಜನರಿಗೆ ನೀಡಬಹುದಾದ ಸಹಾಯ, ಸೌಲಭ್ಯಗಳ ಬಗ್ಗೆ ಸೊಲ್ಲೆತ್ತದೆ ಹೋದ ಕಡೆಯಲೆಲ್ಲ ಕೋಮು ಭಾವನೆ ಕೆರಳಿಸುವ, ಸಂವಿಧಾನವನ್ನೇ ಬುಡಮೇಲು ಮಾಡಿ ಬಿಡುತ್ತೇನೆ ಎಂದು ಅಹಮ್ಮಿಕೆ ಹೇಳಿಕೆ ನೀಡುತ್ತ ಕಾಲ ಕಳೆಯುತ್ತಿದ್ದಾರೆ ಎಂದು ದೂರಿದ್ದಾರೆ.

ದೇಶದಲ್ಲಿ ಶೇ.60ರಷ್ಟಿರುವ ಯುವಜನಾಂಗ ಇವರಿಂದ ಸ್ಟಾರ್ಟ್‌ ಅಪ್‌ ಇಂಡಿಯಾ, ಮೇಕ್‌ ಇನ್‌ ಇಂಡಿಯಾ, ಸ್ಕಿಲ್‌ ಇಂಡಿಯಾ ಮುಂತಾದ ಭವಿಷ್ಯದ ಆಶಾಕಿರಣದ ಬೆಳಕು ಕಾಣಲು ಕಾತುರರಾಗಿದ್ದಾರೆಯೇ ಹೊರತು ಕೋಮು ವೈಷ್ಯಮ್ಯ, ಸಂವಿಧಾನ ತಿದ್ದುಪಡಿ, ಸಾಹಿತಿಗಳ ನಿಂದನೆಯಂತಹ ಕೀಳು ಅಭಿರುಚಿಯ ಹರಿಕಥೆ ಕೇಳಲು ಆಸಕ್ತಿ ಹೊಂದಿಲ್ಲ ಎಂಬುದನ್ನು ಅನಂತಕುಮಾರ ಹೆಗಡೆ ಅರಿತರೆ ಕ್ಷೇಮ. ಯುವಜನರಿಗೆ ಬೇಕಿರುವುದು ಉದ್ಯೋಗ. ತಮ್ಮ ಖಾತೆ ಮೂಲಕ ಉದ್ಯೋಗ ಸೃಷ್ಟಿಸುವಂತಹ ವಿಫುಲ ಅವಕಾಶಗಳು ಅನಂತಕುಮಾರ ಹೆಗಡೆ ಅವರ ಮುಂದಿರುವಾಗ ತಮ್ಮ ಹೊಣೆಗಾರಿಕೆ ಮರೆತು ಬೇಜವಾಬ್ದಾರಿ ಹೇಳಿಕೆಗಳ ಮೂಲಕ ಆತಂಕ ಸೃಷ್ಟಿಸುತ್ತಿರುವುದನ್ನು ನಮ್ಮ ಯುವಜನಾಂಗ ಗಂಭೀರವಾಗಿ ಪರಿಗಣಿಸಬೇಕಿದೆ. ತಮ್ಮ ಖಾತೆಗೆ ಸಂಬಂಧಿಸಿದ ಯಾವ ವಿಷಯವೂ ಅವರಿಗೆ ತಿಳಿದಿದೆಯೋ ಇಲ್ಲವೋ ಎಂಬ ಅನುಮಾನ ನನ್ನನ್ನು ಕಾಡುತ್ತಿದೆ. ತಮ್ಮ ಖಾತೆ ಬಗ್ಗೆ ಅವರಿಗೆ ಏನಾದರೂ ಜ್ಞಾನವಿದ್ದಲ್ಲಿ ಅನಾವಶ್ಯಕವಾದ, ಕ್ಷುಲ್ಲಕ ವಿಷಯ ಮಾತನಾಡುವುದನ್ನು ಬಿಟ್ಟು ಯುವಜನರ ಆಶೋತ್ತರ ಬಿಂಬಿಸುವ ಕಾರ್ಯಕ್ರಮ ಹಾಕಿಕೊಳ್ಳಲಿ. ತಮ್ಮ ಕೌಶಲ್ಯ ಅಭಿವೃದ್ಧಿ ಸಚಿವಾಲಯ ಮೂಲಕ ಕರ್ನಾಟಕಕ್ಕೆ ಏನು ಕೊಡುಗೆ ನೀಡಬಲ್ಲರು ಎಂಬುದನ್ನು ಹೋದ ಕಡೆಯಲ್ಲೆಲ್ಲ ಹೇಳಲಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.