ಪ್ರೊ| ನಿಸಾರ್‌ಅಹ್ಮದ್‌, ಪಟ್ಟಣಶೆಟ್ಟಿಗೆ ಅಂಬಿಕಾತನಯದತ್ತ ಪ್ರಶಸ್ತಿ


Team Udayavani, Feb 1, 2019, 7:08 AM IST

gul-8.jpg

ಧಾರವಾಡ: ವರಕವಿ ಡಾ| ದ.ರಾ. ಬೇಂದ್ರೆ ಅವರ 124ನೇ ಜನ್ಮದಿನದ ಪ್ರಯುಕ್ತ ನೀಡುವ 2019ನೇ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಯನ್ನು ನಾಡೋಜ ಪ್ರೊ| ಕೆ.ಎಸ್‌. ನಿಸಾರಅಹ್ಮದ ಹಾಗೂ ಡಾ| ಸಿದ್ಧಲಿಂಗ ಪಟ್ಟಣಶೆಟ್ಟಿ ಅವರಿಗೆ ನಗರದ ಬೇಂದ್ರೆ ಭವನದಲ್ಲಿ ಗುರುವಾರ ಸಂಜೆ ಪ್ರದಾನ ಮಾಡಲಾಯಿತು.

ಡಾ| ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಈ ಸಲ ಇಬ್ಬರು ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದರಿಂದ ಒಂದು ಲಕ್ಷ ನಗದು ಪ್ರಶಸ್ತಿ ಮೊತ್ತದಲ್ಲಿ ಇಬ್ಬರೂ ಸಾಧಕರಿಗೆ ತಲಾ 50 ಸಾವಿರ ರೂ. ಹಂಚಿ, ಪ್ರಶಸ್ತಿ ಪ್ರದಾನ ಮಾಡಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಿತ್ಯೋತ್ಸವ ಕವಿ ಪ್ರೊ| ಕೆ.ಎಸ್‌. ನಿಸಾರ ಅಹ್ಮದ, ತಮ್ಮ ಶಬ್ಧ ಗಾರುಡಿಯಿಂದ ಇಡೀ ನಾಡನ್ನೇ ಮೋಡಿ ಮಾಡಿದ ಅದ್ವಿತೀಯ ವರಕವಿ ಕವಿ ಡಾ| ದ.ರಾ. ಬೇಂದ್ರೆ ಅವರಿಗೆ ರಾಜ್ಯ ಸರ್ಕಾರ ಅಪಚಾರ ಎಸಗಿದೆ. ಬೇಂದ್ರೆ ಹೆಸರಿನಲ್ಲಿರುವ ರಾಷ್ಟ್ರೀಯ ಟ್ರಸ್ಟ್‌ಗೆ ತೀರಾ ಕಡಿಮೆ ಅನುದಾನ ನೀಡುತ್ತಿರುವುದು ಖೇದಕರ ಸಂಗತಿ. ಬೇರೆ ಬೇರೆ ಕವಿ ಹಾಗೂ ಸಂಗೀತಗಾರರ ಹೆಸರಿನಲ್ಲಿ ರಾಜ್ಯ ಸರ್ಕಾರ ಕೋಟಿಗಟ್ಟಲೇ ಹಣ ವೆಚ್ಚ ಮಾಡುತ್ತಿದೆ. ಆದರೆ, ಬೇಂದ್ರೆ ಅವರ ಟ್ರಸ್ಟ್‌ಗೆ ಬರೀ 10 ಲಕ್ಷ ನೀಡುತ್ತಿದೆ. 6 ಲಕ್ಷ ಸಂಬಳ ಹಾಗೂ ಉಳಿದ ನಾಲ್ಕು ಲಕ್ಷದಲ್ಲಿ 1 ಲಕ್ಷ ಮೊತ್ತದ ಪ್ರಶಸ್ತಿ ಹಾಗೂ ಇತರೆ ಚಟುವಟಿಕೆಗಳನ್ನು ಹೇಗೆ ನಡೆಸಬೇಕು? ಕೂಡಲೇ ಟ್ರಸ್ಟ್‌ ಅಧ್ಯಕ್ಷರು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಬೇಕು. ಈ ಸಂಗತಿಯನ್ನು ಬೇಂದ್ರೆ ಅಭಿಮಾನಿಗಳು ಸಹ ಖಂಡಿಸಬೇಕು ಎಂದರು.

ಪ್ರಶಸ್ತಿ ಪ್ರದಾನ ಮಾಡಿದ ಡಾ| ದೊಡ್ಡರಂಗೇಗೌಡ ಮಾತನಾಡಿ, ಬೇಂದ್ರೆಯವರ ಬಗ್ಗೆ ಮಾತನಾಡುವುದು ಎಂದರೆ ಜಗತ್ತು, ಹಿಮಾಲಯ, ಮಹಾನದಿ ಗಂಗಾ, ಅಂಬರದ ಬಗ್ಗೆ ಮಾತನಾಡಿದಂತೆ. ಅವರ ಮನೆ ಕಾವ್ಯದ ಪವಿತ್ರ ಕ್ಷೇತ್ರವಾಗಿದೆ. ಅವರು ರೂಢಿಸಿಕೊಂಡಿದ್ದ ದೇಶಿ ಶೈಲಿಯು ಹೇಗೆ ಎಂಬ ಅನುಮಾನಗಳು ಮೂಡಿದ್ದವು. ಅಪ್ಪಟ ನೆಲದ ಸೊಗಡಿನಲ್ಲಿ ಕವಿತೆಗಳನ್ನು ರಚಿಸುವ ಮೂಲಕ ವಿಶೇಷತೆ ಹೊಂದಿದ್ದ ಕವಿಯಾಗಿದ್ದರು. ದುಗುಡ ದುಮ್ಮಾನಗಳು ಹೋಗುವಂತಹ ಹಾಡುಗಳನ್ನು ರಚಿಸಿದ್ದಾರೆ ಎಂದು ಬಣ್ಣಿಸಿದರು.

ಟ್ರಸ್ಟ್‌ ಅಧ್ಯಕ್ಷ ಡಾ| ಡಿ.ಎಂ. ಹಿರೇಮಠ, ಡಾ| ರಾಜಶೇಖರ ಮಠಪತಿ, ಡಾ| ಇಕ್ಬಾಲ್‌ ಅಹಮ್ಮದ, ಕೆ.ಎಚ್. ಚೆನ್ನೂರ, ಪ್ರಕಾಶ ಬಾಳಿಕಾಯಿ ಇನ್ನಿತರರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.